AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಪತಿ ಸಾವಿನ ಬಗ್ಗೆ ಮತ್ತೊಬ್ಬ ಮಹಿಳೆಯ ಜೊತೆ ಹೆಂಡತಿ ಮಾತುಕತೆ ವೈರಲ್

ಮತ್ತೊಬ್ಬ ಮಹಿಳೆಯೊಂದಿಗೆ ಅನಂತರಾಜು ಹೆಂಡತಿ ಫೋನ್​ನಲ್ಲಿ ಆಡಿದ್ದಾರೆ ಎನ್ನಲಾದ ಮಾತುಕತೆಯ ಆಡಿಯೊ ವೈರಲ್ ಆಗಿದೆ.

ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಪತಿ ಸಾವಿನ ಬಗ್ಗೆ ಮತ್ತೊಬ್ಬ ಮಹಿಳೆಯ ಜೊತೆ ಹೆಂಡತಿ ಮಾತುಕತೆ ವೈರಲ್
ಬಿಜೆಪಿ ನಾಯಕ ಅನಂತರಾಜು ಮತ್ತುಆರೋಪಿ ರೇಖಾ
TV9 Web
| Edited By: |

Updated on:May 19, 2022 | 10:08 AM

Share

ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ (BJP Leader Ananth Raju Suicide Case) ಪ್ರಕರಣಕ್ಕೆ ಮತ್ತೊಂದು ತಿರುವು ಪಡೆದುಕೊಂಡಿದೆ. ಮತ್ತೊಬ್ಬ ಮಹಿಳೆಯೊಂದಿಗೆ ಅನಂತರಾಜು ಹೆಂಡತಿ ಫೋನ್​ನಲ್ಲಿ ಆಡಿದ್ದಾರೆ ಎನ್ನಲಾದ ಮಾತುಕತೆಯ ಆಡಿಯೊ ವೈರಲ್ ಆಗಿದೆ. ಅನಂತರಾಜು ಸಾಯುವ 20 ದಿನಗಳ ಮೊದಲೇ ಅವರ ಪತ್ನಿ ಸಾವಿನ ಭವಿಷ್ಯ ನುಡಿದಿದ್ದರು ಎಂದು ಶಂಕಿಸಲಾಗಿದೆ. ಹನಿಟ್ರ್ಯಾಪ್ ಪ್ರಕರಣದಲ್ಲಿ ನೊಂದು ಅನಂತರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೊದಲು ದಾಖಲಾಗಿದ್ದ ಎಫ್​ಐಆರ್​ ಬಗ್ಗೆಯೂ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಅನಂತರಾಜು ಸಾಯುವ 20 ದಿನಗಳ ಮೊದಲೇ ಪತ್ನಿ ಸುಮಾ ಭವಿಷ್ಯ ನುಡಿದಿದ್ದರು ಎಂದು ಹೇಳಲಾಗಿದೆ. ‘ನಿನ್ನ ಅನಂತ ಸಾಯ್ತಾನೆ, ಫೇಸ್​ಬುಕ್​ನಲ್ಲಿ ನೋಡ್ತೀಯಾ’ ಎಂದೆಲ್ಲಾ ರೇಖಾ ಎಂಬಾಕೆಗೆ ಸುಮಾ ಬೆದರಿಕೆ ಹಾಕಿದ್ದರು. ಕಳೆದ ಆರು ವರ್ಷಗಳಿಂದ ಅನಂತರಾಜು ಮತ್ತು ರೇಖಾ ಸಂಬಂಧ ಇರಿಸಿಕೊಂಡಿದ್ದರು. ತನ್ನ ಗಂಡ ಪರಸ್ತ್ರೀ ಸಂಬಂಧ ಬೆಳೆಸಿರುವುದು ತಿಳಿದು ಸುಮಾ ಕೆಂಡಾಮಂಡಲವಾಗಿದ್ದರು. ಇದೇ ಸಿಟ್ಟಿನಲ್ಲಿ ರೇಖಾಗೆ ಫೋನ್ ಮಾಡಿ, ‘ಅನಂತರಾಜುನ ಸಾಯಿಸ್ತೀನಿ, ನಾನು ಕೊಡುವ ಟಾರ್ಚರ್​ಗೆ ಹಾರ್ಟ್ ಅಟ್ಯಾಕ್ ಆಗಿ ಸಾಯ್ತಾನೆ ನೋಡು’ ಎಂದು ಸುಮಾ ಬೆದರಿಕೆ ಹಾಕಿದ್ದರು.

ಸುಮಾ ಮಾತು ಕೇಳಿ ರೇಖಾ ಕಣ್ಣೀರು ಹಾಕಿ ಬೇಡಿಕೊಂಡಿದ್ದರು. ‘ಅವನನ್ನೂ ಬಿಡಲ್ಲ, ನಿನ್ನನ್ನೂ ಬಿಡಲ್ಲ’ ಎಂದು ಧಮಕಿ ಹಾಕಿದ್ದ ಸುಮಾ, ‘ಅವನು ಸತ್ತಮೇಲೆ, ನೀನೇ ಮುಂದೆ ನಿಂತು ಎಲ್ಲವನ್ನೂ ಮಾಡಬೇಕು. ಹೆಂಡತಿ ಸ್ಥಾನ ಕೊಡುತ್ತೇನೆ’ ಎಂದು ವ್ಯಂಗ್ಯವಾಡಿದ್ದರು. ‘ನನ್ನ ಕ್ಯಾರೆಕ್ಟರ್ ಹಾಳಾದ್ರು ಪರವಾಗಿಲ್ಲ, ನಿನ್ನ ಸಹವಾಸಕ್ಕೆ ಬರಲ್ಲ. ಅನಂತುಗೆ ಏನೂ ಮಾಡ್ಬೇಡ, ಚೆನ್ನಾಗಿ ನೋಡ್ಕೊ’ ಎಂದೆಲ್ಲಾ ಬೇಡಿಕೊಂಡಿದ್ದರು. ಇದೇ ಫೋನ್ ಕಾಲ್​ನಲ್ಲಿ ಅನಂತು ಮೇಲೆ ಹಲ್ಲೆ ನಡೆಸಿರುವ ಬಗ್ಗೆಯೂ ಮಾತುಕತೆ ನಡೆದಿದೆ. ಈ ಸಂಭಾಷಣೆ ನಡೆದ ದಿನಾಂಕದ ಬಗ್ಗೆ ನಿಖರ ವಿವರ ಲಭ್ಯವಾಗಿಲ್ಲ. ಅನಂತರಾಜು ಸಾಯುವ 20 ದಿನಗಳ ಮೊದಲು ನಡೆದಿದೆ ಎನ್ನಲಾದ ಮಾತುಕತೆಯ ಆಡಿಯೊ 6 ನಿಮಿಷ 49 ಸೆಕೆಂಡ್​ಇದೆ. ಆಡಿಯೊದಲ್ಲಿ ಅನಂತರಾಜು ಅವರು ಹಾರ್ಟ್​ ಅಟ್ಯಾಕ್ ಆಗಿ ಸಾಯುತ್ತಾರೆಂದು ಪತ್ನಿ ಸುಮಾ ಹೇಳಿರುವುದು ರೆಕಾರ್ಡ್ ಆಗಿದೆ.

ಈವರೆಗೆ ಅನಂತರಾಜು ಅವರು ಹನಿಟ್ರ್ಯಾಪ್​ನಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಇದು ಪತ್ನಿಯ ಕಿರುಕುಳ ತಡೆಯಲಾಗದೆ ಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ರೇಖಾ ಬಂಧನ

ಅನಂತರಾಜು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹನಿಟ್ರ್ಯಾಪ್ ಆರೋಪ ಕೇಳಿ ಬಂದಿರುವ ರೇಖಾ ಅವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಮೃತ ಅನಂತರಾಜು ಪತ್ನಿ ಸುಮಾ ನೀಡಿದ್ದ ದೂರು ಆಧರಿಸಿ ರೇಖಾ, ವಿನೋದ್, ಸ್ಪಂದನ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಹೇರೋಹಳ್ಳಿ ವಾರ್ಡ್​ನಲ್ಲಿ ಬಿಜೆಪಿ ಮುಖಂಡರಾಗಿದ್ದ ಅನಂತರಾಜ್ ಸಚಿವ ಎಸ್​.ಟಿ.ಸೋಮಶೇಖರ್ ಅವರಿಗೂ ಆಪ್ತರಾಗಿದ್ದರು.

ತಾಜಾ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:07 am, Thu, 19 May 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!