AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirani VS Yatnal: ಸಿಎಂ ಆಗೋದಿಕ್ಕೆ ನಿರಾಣಿ ಸೂಟ್ ಹೊಲಿಸಿಕೊಂಡಿದ್ದಾರೆ: ಬಸನಗೌಡ ಯತ್ನಾಳ್ ಲೇವಡಿಗೆ ಮುರುಗೇಶ್ ನಿರಾಣಿ ತಿರುಗೇಟು

ಹೌದು, ನಾನು ಸೂಟ್ ಹೊಲಿಸಿಕೊಂಡಿದ್ದೇನೆ. ನಿತ್ಯ ಸೂಟ್ ಇಲ್ಲದೇ ಹೇಗೆ ಓಡಾಡಲಿ ಎಂದು ಬೇಸರದ ಧ್ವನಿಯಲ್ಲಿ ಪ್ರತಿಕ್ರಿಯಿಸಿದರು.

Nirani VS Yatnal: ಸಿಎಂ ಆಗೋದಿಕ್ಕೆ ನಿರಾಣಿ ಸೂಟ್ ಹೊಲಿಸಿಕೊಂಡಿದ್ದಾರೆ: ಬಸನಗೌಡ ಯತ್ನಾಳ್ ಲೇವಡಿಗೆ ಮುರುಗೇಶ್ ನಿರಾಣಿ ತಿರುಗೇಟು
ಸಚಿವ ಮುರುಗೇಶ್ ನಿರಾಣಿ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ
TV9 Web
| Edited By: |

Updated on: Jan 21, 2022 | 7:47 PM

Share

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಯುಗಾದಿ ವೇಳೆಗೆ ಬದಲಾವಣೆ ಆಗುತ್ತದೆ. ಬದಲಾವಣೆ ಜಗದ ನಿಯಮ. ಬದಲಾವಣೆ ಆಗದಿದ್ದರೆ ಯುಗಾದಿ ಎಂದು ಏಕೆ ಕರೆಯಬೇಕು ಎಂದು ಮುಗುಂ ಆಗಿ ಹೇಳಿದರು. ನಮಗೆ ದಿಲ್ಲಿಗೆ ಹೋಗುವ ಚಟ ಇದೆ, ಅಲ್ಲಿ ಹಳೇ ಸ್ನೇಹಿತರಿದ್ದಾರೆ. ಅವರ ಭೇಟಿಗಾಗಿ ನಾವು ದೆಹಲಿಗೆ ಹೋಗುತ್ತೇವೆ. ಸಂಪುಟ ಪುನಾರಚನೆ ಯಾವಾಗಾದರೂ ಮಾಡಲಿ, ಒಳ್ಳೆಯ ಆಡಳಿತ ನೀಡಲಿ ಎಂದು ಯತ್ನಾಳ್ ಮತ್ತೊಂದು ನಾನಾರ್ಥದ ಹೇಳಿಕೆ ನೀಡಿದರು. ಪಂಚಮಸಾಲಿ ಕೂಡಲಸಂಗಮ ಪೀಠದ ಸ್ವಾಮೀಜಿ ನಮ್ಮ ಸಮುದಾಯದ ಪರವಾಗಿ ಹೋರಾಟ ಮಾಡಿದ್ದಾರೆ. ಅವರ ಮಟ್ಟಕ್ಕೆ ಯಾವ ಪೀಠವೂ ಬರುವುದಿಲ್ಲ. ಹರಿಹರ ಪೀಠ ಹಾಗೂ ಪಂಚಮಸಾಲಿ‌ 3ನೇ ಪೀಠ ನಿರಾಣಿ ಪೀಠಗಳು ಎಂದು ಮುಗುಮ್ಮಾಗಿ ಹೇಳಿದರು. ಕೂಡಲ ಸಂಗಮ ಪೀಠ ಮಾತ್ರ ಪಂಚಮಸಾಲಿ ಸಮುದಾಯದ ಪೀಠ. ಬ್ಲೇಜರ್​ಗಳು ಎಂ.ಜಿ.ರೋಡ್​ನಲ್ಲಿ ಮಾರಾಟಕ್ಕಿವೆ. ಸೂರ್ಯ ಚಂದ್ರ ಇರುವವರೆಗೂ ಮುರುಗೇಶ್ ನಿರಾಣಿ ಮುಖ್ಯಮಂತ್ರಿ ಆಗುವುದಿಲ್ಲ ಎಂದರು.

ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಪಕ್ಷದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ವಿಜಯೇಂದ್ರರಂಥ ದೊಡ್ಡ ನಾಯಕರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಯುಗಾದಿ ಹೊತ್ತಿಗೆ ರಾಜ್ಯದ ಆಡಳಿತದಲ್ಲಿ ಬದಲಾವಣೆ ಆಗುತ್ತದೆ. ಕೂಡಲ ಸಂಗಮ ಸ್ವಾಮೀಜಿ ನಮ್ಮ ಸಮುದಾಯದ ಪರವಾಗಿ ಹೋರಾಟ ಮಾಡಿದ್ದಾರೆ. ಸಮುದಾಯದ ಎಲ್ಲರನ್ನು ಒಗ್ಗೂಡಿಸುವ ಕೆಲಸ ಮಾಡಿದ್ದಾರೆ ಎಂದರು.

ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಯತ್ನಾಳ್ ತುಂಬಾ ದೊಡ್ಡವರು. ಅಂಥವರ ಬಗ್ಗೆ ನಾನು ಮಾತನಾಡಲಾರೆ. ಮುಖ್ಯಮಂತ್ರಿ ಆಗುವುದು-ಬಿಡುವುದು ನನ್ನ ಕೈಲಿಲ್ಲ ಎಂದು ಹೇಳಿದರು. ಸಿಎಂ ಆಗೋದಿಕ್ಕೆ ನಿರಾಣಿ ಸೂಟ್ ಹೊಲಿಸಿಕೊಂಡಿದ್ದಾರೆ ಎಂಬ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಹೌದು, ನಾನು ಸೂಟ್ ಹೊಲಿಸಿಕೊಂಡಿದ್ದೇನೆ. ನಿತ್ಯ ಸೂಟ್ ಇಲ್ಲದೇ ಹೇಗೆ ಓಡಾಡಲಿ ಎಂದು ಬೇಸರದ ಧ್ವನಿಯಲ್ಲಿ ಪ್ರತಿಕ್ರಿಯಿಸಿದರು.

ಮುಂದಿನ ಸಿಎಂ ಮುರುಗೇಶ್ ನಿರಾಣಿ: ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ತೂರಿದ ಬಿಜೆಪಿ ನಾಯಕ ಮುರುಗೇಶ್ ನಿರಾಣಿಯೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಅಭಿಮಾನಿಯೊಬ್ಬರು ಹರಕೆ ಸಲ್ಲಿಸಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕು ಮಂಗಳೂರು ಗ್ರಾಮದ ಭೀಮಾಶಂಕರ ಮಹಾರಾಜರ ರಥೋತ್ಸವದಲ್ಲಿ ಬಾಳೆಹಣ್ಣಿನ ಮೇಲೆ ಮುಂದಿನ ಸಿಎಂ ಮುರಗೇಶ್ ನಿರಾಣಿ ಎಂದು ಬರೆದು ದೇವರ ಮೇಲೆ ಬಾಳೆಹಣ್ಣು ಎಸೆದು ಬೇಡಿಕೆ ಇಟ್ಟಿದ್ದಾರೆ. ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಡಿಸೆಂಬರ್ 27ರಂದು ನಡೆದ ಭೀಮಾಶಂಕರ ಮಹಾರಾಜರ ರಥೋತ್ಸವದ ವೇಳೆ ಮುಂದಿನ ಸಿಎಂ ಮುರಗೇಶ್ ನಿರಾಣಿ ಎಂದು ಬಾಳೆ ಹಣ್ಣಿನ ಮೇಲೆ ಬರೆದು ಹರಕೆ ಮಾಡಿಕೊಂಡು ಬಾಳೆ ಹಣ್ಣನ್ನು ದೇವರ ಮೇಲೆ ತೂರಿದ್ದಾರೆ. ಬಿಜೆಪಿಯ ಯುವ ಮುಖಂಡ ಸಿದ್ದು ರೇವೂರ್ ಇಂತಹದೊಂದು ವಿಶೇಷ ಹರಕೆ ಮಾಡಿಕೊಂಡಿದ್ದಾರೆ. ಅದ್ದೂರಿ ರಥೋತ್ಸವಕ್ಕೆ ಸಾವಿರಾರು ಭಕ್ತ ವೃಂದ ಸಾಕ್ಷಿಯಾಗಿತ್ತು.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾರು ಉತ್ಪಾದನಾ ಘಟಕ ತೆರೆಯಲು ಎಲಾನ್ ಮಸ್ಕ್​ಗೆ ಮುರುಗೇಶ್ ನಿರಾಣಿ ಆಹ್ವಾನ ಇದನ್ನೂ ಓದಿ: ಹೂಡಿಕೆದಾರರು, ಉದ್ಯಮಿಗಳಿಗೆ ಸಚಿವ ಮುರುಗೇಶ್ ನಿರಾಣಿಯಿಂದ ಹೊಸ ವರ್ಷದ ಬಂಪರ್ ಕೊಡುಗೆ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್