AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ: ಶಾಸಕ ಸಿ.ಟಿ ರವಿ

ವಿಪಕ್ಷನಾಯಕ ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ:  ಶಾಸಕ ಸಿ.ಟಿ ರವಿ
ಸಿದ್ದರಾಮಯ್ಯ ವಿರುದ್ಧ ಸಿ ಟಿ ರವಿ ವಾಗ್ದಾಳಿ
TV9 Web
| Edited By: |

Updated on:Sep 28, 2022 | 2:36 PM

Share

ಬೆಂಗಳೂರು: ವಿಪಕ್ಷನಾಯಕ ಸಿದ್ದರಾಮಯ್ಯರ (Siddaramaiah) ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬೆಂಗಳೂರಲ್ಲಿ (Bengaluru) ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ (CT Ravi) ವಾಗ್ದಾಳಿ ಮಾಡಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯ (PFI) ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿರುವ ಹಿನ್ನೆಲೆ ಸಿದ್ದರಾಮಯ್ಯ ಮಾತನಾಡಿ ಆರ್​ಎಸ್​ಎಸ್​ನಿಂದಲೂ ಸಮಾಜದಲ್ಲಿ ಅಶಾಂತಿ ತಲೆದೋರುತ್ತಿದೆ, ಅದನ್ನೂ ಬ್ಯಾನ್ ಮಾಡಿ ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ ರವಿ ಸಿದ್ದರಾಮಯ್ಯನವರೇ ನೀವು ತಾತ್ಕಾಲಿಕ ರಾಜಕೀಯ ಲಾಭಕ್ಕೆ ಭಾರತವನ್ನು ನಾಶ ಮಾಡಿ ನೀವು ನಾಶವಾಗಬೇಡಿ. ಎಲ್​ಇಟಿ ಜೊತೆ ಹಾವು ಏಣಿಯಾಟ ಆಡಿದ ಪರಿಣಾಮ ರಾಜೀವ್ ಗಾಂಧಿ ಬಲಿಯಾಗಬೇಕಾಯತು. ಆಜಾದಿ ಎಂದು ಘೋಷಣೆ ಕೂಗುವುದು ಇಂಟರ್ ನ್ಯಾಷನಲ್ ಟೂಲ್ ಕಿಟ್ ಆಗಿದೆ. ಭಾರತ ವಾಸಕ್ಕೆ ಯೋಗ್ಯ ಅಲ್ಲ ಅಂತಾ ಅನ್ನಿಸಿದವರಿಗೆ ಅಫ್ಘಾನಿಸ್ತಾನ, ಪಾಕಿಸ್ತಾನ ಇದೆ, ಫ್ರೀ ವೀಸಾ ಕೊಟ್ಟು ಕಳುಹಿಸುತ್ತೇವೆ ಎಂದು ವ್ಯಂಗ್ಯವಾಡಿದರು.

ಉಗ್ರರ ಜೊತೆಗೆ ಯಾವ ರೀತಿ ಹಾಟ್ ಲೈನ್ ಕನೆಕ್ಷನ್ ಇದೆ ಎಂಬುದಕ್ಕೆ ಆಲ್ ಜವಾಹಿರಿ ಹಿಜಾಬ್ ಬೆಂಬಲಿಸಿ ಶಾಯಿರಿ ಹೇಳಿದ್ದೇ ಒಂದು ಸ್ಯಾಂಪಲ್ ಆಗಿದೆ. ಸುಣ್ಣ ಮತ್ತು ಬೆಣ್ಣೆ ಗುರುತಿಸದಂತಹ ಸ್ಥಿತಿಗೆ ಸಿದ್ದರಾಮಯ್ಯ ಬಂದಿದ್ದಾರೆ ಅನ್ನಿಸುತ್ತದೆ. ಯಾವ ಪ್ರಾಮಾಣಿಕತೆ ಇದೆ ಸಿದ್ದರಾಮಯ್ಯಗೆ? ಆರ್ ಎಸ್ ಎಸ್ ಯಾವ ಯಾವ ವಿಧ್ವಂಸಕ ಕೃತ್ಯದಲ್ಲಿ ತೊಡಗಿದೆ ಅಂತಾ ಸಿದ್ದರಾಮಯ್ಯ ಹೇಳಲಿ. ರಾಜಕೀಯ ತೆವಲಿಗೆ ಹೇಳುವುದನ್ನು ಬಿಡಲಿ ಎಂದು ಕಿಡಿ ಕಾರಿದರು.

ಯಾವ ಭಯೋತ್ಪಾದನೆ ವಿಚಾರದಲ್ಲಿ ಆರ್​ಎಸ್​ಎಸ್ ಮುಂದಾಗಿದೆ ಎಂದು ತೋರಿಸಲಿ. ಇಂತಹ ಮತಾಂದರಿಂದಲೇ ದೇಶ ವಿಭಜನೆಯಾಗಿದ್ದು. ರಾಷ್ಟ್ರವನ್ನು ಪ್ರೀತಿಸಿ ಅನ್ನೋದು ಭಯೋತ್ಪಾದನೆಯಾ? ರಾಷ್ಟ್ರಭಕ್ತ ಯಾರು, ರಾಷ್ಟ್ರ ದ್ರೋಹಿ ಯಾರು ಅಂತಾ ಗುರುತಿಸಲು ಇವರಿಗೆ ಆಗಲ್ವಾ? ಈ ಮನಸ್ಥಿತಿಯಿಂದ ಹೊರಗೆ ಬರದಿದ್ದರೇ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ. ಸಿದ್ದರಾಮಯ್ಯ ಪಿಎಫ್ಐ ಮುಖಂಡರನ್ನು ಬಿಡುಗಡೆ ಮಾಡಿದ ಮೇಲೆಯೇ ಸರಣಿ ಹತ್ಯೆಗಳು ಜಾಸ್ತಿಯಾಗಿದ್ದಲ್ಲವಾ? ಪ್ರಚೋದನೆ ಕೊಡುವ ಅಂಶಗಳನ್ನು ಕಿತ್ತುಹಾಕದಿದ್ದರೇ ಜಗತ್ತಿನಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಉಗ್ರಭಾಗ್ಯ ಯೋಜನೆ ಕೊಟ್ಟಿದ್ದು ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಹಲವೆಡೆ ಕೊಲೆ, ಶಾಂತಿಭಂಗ ಪ್ರಕರಣಗಳಲ್ಲಿ ಪಿಎಫ್​ಐ ಭಾಗಿಯಾಗಿತ್ತು. ಗಡಿಯಾಚೆ ತರಬೇತಿ ಪಡೆದು ದೇಶ ವಿಭಜನೆಗೆ ಸಂಚು ಮಾಡಲಾಗಿತ್ತು. ರಾಷ್ಟ್ರಭಕ್ತ ನಾಯಕರನ್ನು ಗುರಿಯಾಗಿಸಿ ಸಂಚು ನಡೆಸಿದ ಮಾಹಿತಿ ಇದೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಕೊಲೆ ಹಿಂದೆ ಪಿಎಫ್​ಐ ಕೈವಾಡ ಇದೆ. ಪಿಎಫ್​ಐ ಮಾಸ್ಟರ್​ಮೈಂಡ್ ಕೃತ್ಯದ ಬಗ್ಗೆ ತನಿಖಾ ಸಂಸ್ಥೆ ಉಲ್ಲೇಖಿಸಿದೆ. ಪಿಎಫ್​ಐಯನ್ನು ಹೀಗೆ ಬಿಟ್ಟಿದ್ದರೆ ಅಂತರ್​ ಯುದ್ಧ ಎದುರಿಸಬೇಕಾಗಿತ್ತು. ಭಾರತವನ್ನು ವಿಭಜಿಸುವುದರ ಜೊತೆಗೆ ಜಾಗತಿಕ ಮಟ್ಟದಲ್ಲಿ ಅಪಪ್ರಚಾರವಾಗುತ್ತಿತ್ತು ಎಂದು ತಿಳಿಸಿದರು.

ಸೈನ್ಯ, ಪೊಲೀಸ್, ನ್ಯಾಯಾಂಗ ವ್ಯವಸ್ಥೆಯ ಆಯಕಟ್ಟಿನ ಜಾಗಗಳಲ್ಲಿ, ತನ್ನ ಬೆಂಬಲಿಗರನ್ನು ಕೂರಿಸಿ 2047ಕ್ಕೆ ಅಂತರ್ ಯುದ್ಧ ಸೃಷ್ಟಿಗೆ ಸಂಚು ರೂಪಿಸಿತ್ತು. ಭಾರತೀಯತೆಯನ್ನು ನಾಶ ಮಾಡಿ ಮೊಘಲಸ್ಥಾ‌ನ ನಿರ್ಮಿಸುವ ಸಂಚು ರೂಪಿಸಲಾಗಿತ್ತು. ಈ ಎಲ್ಲ ಅಂಶಗಳ ಬಗ್ಗೆ ತನಿಖಾ ಸಂಸ್ಥೆಯ ವರದಿಯಲ್ಲಿ ಉಲ್ಲೇಖವಾಗಿದೆ. ಎಡಪಂಥೀಯ ಉಗ್ರವಾದಿಗಳ ಜೊತೆ ಕೈ ಜೋಡಿಸಿ ಭಾರತವನ್ನು ವಿಭಜಿಸುವುದರ ಜೊತೆಗೆ ದೇಶದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರದಲ್ಲಿ ತೊಡಗಿರುತ್ತಿದ್ದರು ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 2:36 pm, Wed, 28 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ