AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ನಿಂದಿಸಿದ ಆರೋಪ: ಸ್ಪಷ್ಟನೆ ನೀಡಿದ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ- ಏನಿದು ಪ್ರಕರಣ?

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ಮೂಡಿಗೆರೆಯ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ ನಿಂದಿಸಿರುವ ಆರೋಪ ಎದುರಾಗಿತ್ತು. ಇದೀಗ ಟಿವಿ9 ಜತೆ ಮಾತನಾಡಿರುವ ಅವರು, ಘಟನೆಯ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ನಿಂದಿಸಿದ ಆರೋಪ: ಸ್ಪಷ್ಟನೆ ನೀಡಿದ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ- ಏನಿದು ಪ್ರಕರಣ?
ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ
TV9 Web
| Edited By: |

Updated on:Jan 28, 2022 | 8:56 AM

Share

ಬೆಂಗಳೂರು: ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿಯವರ ಮೇಲೆ ಗುರುವಾರ ರಾತ್ರಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ ಆರೋಪ ಎದುರಾಗಿತ್ತು. ಇಂದು ಘಟನೆಯ ಕುರಿತಂತೆ ಟಿವಿ9ಗೆ ಅವರು ಪ್ರತಿಕ್ರಿಯೆ ನೀಡಿ, ವಿಷಾದ ವ್ಯಕ್ತಪಡಿಸಿದ್ದಾರೆ. ಪೊಲೀಸರೊಂದಿಗೆ ವಾಗ್ವಾದ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ (MP Kumaraswamy), ನಿನ್ನೆ ರಾತ್ರಿ ನನ್ನ ವರ್ತನೆಯ ಬಗ್ಗೆ ನನಗೆ ಬೇಸರವಾಗಿದೆ ಎಂದು ಹೇಳಿದ್ದಾರೆ. ‘‘ಆ ಪೊಲೀಸ್‌ಗೆ ನಾನು ಶಾಸಕನೆಂಬುದೇ ಗೊತ್ತಿಲ್ಲ. ನನ್ನ ಕಾರು ಹೋಗುವುದಕ್ಕೆ ಮುಕ್ಕಾಲು ಗಂಟೆ ಕಾಲ ಸಿಬ್ಬಂದಿ ಬಿಡಲೇ ಇಲ್ಲ. ಪೊಲೀಸರು ಹೊಯ್ಸಳ ಕಾರು ಅಡ್ಡಹಾಕಿಕೊಂಡಿದ್ದರು. ಹೀಗಾಗಿ ನಾನೇ ಸ್ಥಳಕ್ಕೆ ಹೋಗಿ ಮಾತನಾಡಿದ್ದೆ. ನಿನಗೆ ಬುದ್ಧಿ ಇಲ್ಲವಾ? ಕಾರು ಹೋಗುವುದಕ್ಕೆ ಬಿಡಲ್ವಾ? ಎಂದು ಪ್ರಶ್ನಿಸಿದ್ದೆ. ಈ ವೇಳೆ ಸಿಬ್ಬಂದಿ ಪೆದ್ದ ಪೆದ್ದನಾಗಿ ಮಾತನಾಡಿದ್ದರು. ನಾನು ಶಾಸಕನೇ ಅಲ್ಲ ಎನ್ನುವಂತೆ ಮಾತನಾಡಿದ್ದರು. ಈ ವೇಳೆ ಸಿಟ್ಟಾಗಿ ನಾನು ಕೂಡ ಮಾತನಾಡಿದ್ದೇನೆ. ಬಳಿಕ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿ ಬಂದರು. ಎಸಿಪಿ ಆ ಪೊಲೀಸ್ ಸಿಬ್ಬಂದಿಗೆ ಬುದ್ಧಿ ಹೇಳಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು’’ ಎಂದಿದ್ದಾರೆ ಎಂಪಿ ಕುಮಾರಸ್ವಾಮಿ.

ಘಟನೆಯೇನು?: ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಪಾರ್ಕಿಂಗ್ ವಿಚಾರವಾಗಿ ನೈಟ್ ಬೀಟ್‌ನಲ್ಲಿದ್ದ ಕಾನ್ಸ್‌ಟೇಬಲ್ ಚಂದ್ರಶೇಖರ್‌, ಹೆಚ್‌ಪಿ ನರಸಿಂಹಮೂರ್ತಿ ಅವರಿಗೆ ಅವಾಚ್ಯ ಶಬ್ದಗಳಿಂದ ಶಾಸಕರು ನಿಂದಿಸಿದ್ದಾರೆ ಎನ್ನಲಾಗಿತ್ತು. ಬೆಂಗಳೂರಿನ ಶಾಸಕರ ಭವನದಲ್ಲಿ ಕಳೆದ ರಾತ್ರಿ 11ರ ಸುಮಾರಿಗೆ ಘಟನೆ ನಡೆದಿತ್ತು.

ಹಲ್ಲೆ ಬಗ್ಗೆ ಕಂಟ್ರೋಲ್ ರೂಂಗೆ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಂತೆ ಎಸಿಪಿ ಸ್ಥಳಕ್ಕೆ ಆಗಮಿಸಿದ್ದರು. ಶಾಸಕರನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಪ್ರಕರಣ ದಾಖಲಾಗಿಲ್ಲ.

ಸಿಎಂ ಇಬ್ರಾಹಿಂ ಅವರಿಗೆ ರಾಜಕೀಯದಲ್ಲಿ ದೊಡ್ಡ ವ್ಯಾಲ್ಯೂ ಇದೆ: ಸಚಿವ ಶ್ರೀರಾಮುಲು ಹೇಳಿಕೆ

ಬಳ್ಳಾರಿ: ಸಿ.ಎಂ.ಇಬ್ರಾಹಿಂ ಬಿಜೆಪಿಗೆ ಬರುತ್ತಾರೆ ಎಂದರೆ ನಮ್ಮ ನಾಯಕರು ಬೇಡ ಎನ್ನುವುದಿಲ್ಲವೆಂದು ಸಾರಿಗೆ ಸಚಿವ ಶ್ರೀರಾಮುಲು ನುಡಿದಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ (CM Ibrahim) ನನ್ನ ಜೊತೆ ಅನೇಕ ಬಾರಿ ಮಾತಾಡಿದ್ದಾರೆ. ಅವರು ಚಲಾವಣೆಯಲ್ಲಿರುವಂತಹ ನಾಣ್ಯ. ಇಬ್ರಾಹಿಂಗೆ ರಾಜಕೀಯದಲ್ಲಿ ದೊಡ್ಡ ವ್ಯಾಲ್ಯೂ ಇದೆ ಎಂದು ಶ್ರೀರಾಮುಲು ಹೇಳಿದ್ದಾರೆ. ಕಾಂಗ್ರೇಸ್ ಬಿಡುವುದಾಗಿ ಇಬ್ರಾಹಿಂ ಹಲವು ಬಾರಿ ಹೇಳಿದ್ದಾರೆ. ಅವರನ್ನು ಬಿಜೆಪಿಗೆ ಕರೆತರಲು ನಾಯಕರೊಂದಿಗೆ ಚರ್ಚಿಸುವೆ. ಸಿ.ಎಂ.ಇಬ್ರಾಹಿಂ ಬಿಜೆಪಿಗೆ ಬಂದರೆ ನಾಯಕರು ಬೇಡ ಎನ್ನುವುದಿಲ್ಲ ಎಂದು ಶ್ರೀರಾಮುಲು ಹೇಳಿಕೆ ನೀಡಿದ್ದಾರೆ

ಇದನ್ನೂ ಓದಿ:

ಕಾಂಗ್ರೆಸ್​​ನತ್ತ ಮುಖ ಮಾಡಿದ್ರಾ ಜೆಡಿಎಸ್ ಶಾಸಕ? ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಭೇಟಿ

CCD Siddharth Hegde: ಕಾಫಿ ಕಿಂಗ್ ಸಿದ್ದಾರ್ಥ ಹೆಗ್ಡೆಗೆ ನಮನ ಸಲ್ಲಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯುವಕ

Published On - 8:51 am, Fri, 28 January 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?