AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು: ಎಂಪಿ ರೇಣುಕಾಚಾರ್ಯ ಹೇಳಿಕೆ

MP Renukacharya: ನೇತ್ರದಾನ ಬಗ್ಗೆ ನಮ್ಮ ಕುಟುಂಬಸ್ಥರು ಅಭಿಯಾನ ಮಾಡುತ್ತೇವೆ. ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು. ಈ ಬಗ್ಗೆ ಪ್ರಧಾನಿಗೆ ಪತ್ರ ಬರೆಯುವೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು: ಎಂಪಿ ರೇಣುಕಾಚಾರ್ಯ ಹೇಳಿಕೆ
ಎಂ.ಪಿ. ರೇಣುಕಾಚಾರ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 07, 2021 | 5:04 PM

Share

ಬೆಂಗಳೂರು: ಕರ್ನಾಟಕದ ಜನರಿಂದ ದೀಪಾವಳಿ ಆಚರಣೆ ಬದಲು ಪುನೀತ್ ರಾಜ್​ಕುಮಾರ್ ಸಮಾಧಿ ದರ್ಶನ ಮಾಡಲಾಗಿದೆ. ಜನರು ಈಗಲೂ ಸಾಗರೋಪಾದಿಯಲ್ಲಿ ಬಂದು ಪುನೀತ್ ಸಮಾಧಿ ದರ್ಶನ ಪಡೆಯುತ್ತಿದ್ದಾರೆ ಎಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ ಪುನೀತ್​ ಮನೆ ಬಳಿ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಇಂದು (ನವೆಂಬರ್ 7) ಹೇಳಿಕೆ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಪ್ರಚಾರವಿಲ್ಲದೆ ಸೇವೆ ಮಾಡಿದ್ದಾರೆ. ನಾನು ಶಕ್ತಿಧಾಮಕ್ಕೆ ನೆರವು ನೀಡುವ ಬಗ್ಗೆ ಅಶ್ವಿನಿ ಜತೆ ಮಾತಾಡಿದ್ದೇನೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ನುಡಿನಮನ ಆಯೋಜಿಸಿರುವೆ. ಗಾಯಕ ರಾಜೇಶ್ ಕೃಷ್ಣನ್​ರಿಂದ ನುಡಿನಮನ ಕಾರ್ಯಕ್ರಮ ನಡೆಯಲಿದೆ. 10 ಸಾವಿರ ಜನರು ಸೇರಿ ಪುನೀತ್​​ಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನೇತ್ರದಾನ ಬಗ್ಗೆ ನಮ್ಮ ಕುಟುಂಬಸ್ಥರು ಅಭಿಯಾನ ಮಾಡುತ್ತೇವೆ. ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು. ಈ ಬಗ್ಗೆ ಪ್ರಧಾನಿಗೆ ಪತ್ರ ಬರೆಯುವೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದವರು ಪುನೀತ್​ ರಾಜ್​ಕುಮಾರ್​. ಹೃದಯಾಘಾತದಿಂದ ಸಡನ್​ ಆಗಿ ಅವರು ಇಹಲೋಕ ತ್ಯಜಿಸಿದ ಬಳಿಕ ಅಪಾರ ಸಂಖ್ಯೆಯ ಅಭಿಮಾನಿ ಬಳಗಕ್ಕೆ ತೀವ್ರ ನೋವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಚಿಕ್ಕ ಮಕ್ಕಳು ಸಂಕಟಪಡುತ್ತಿದ್ದಾರೆ. ಪುನೀತ್​ ಅವರ ಸಿನಿಮಾಗಳನ್ನು ಎಲ್ಲ ವರ್ಗದ ಪ್ರೇಕ್ಷಕರು ಇಷ್ಟಪಡುತ್ತಿದ್ದರು. ಮಕ್ಕಳು ಕೂಡ ಅಪ್ಪು ಅಭಿನಯವನ್ನು ಮನಸಾರೆ ಮೆಚ್ಚಿಕೊಂಡಿದ್ದರು. ಆದರೆ ಈಗ ಪುನೀತ್​ ಇಲ್ಲ ಎಂಬ ಕಹಿ ಸತ್ಯದಿಂದ ಪುಟಾಣಿಗಳಿಗೆ ನೋವಾಗಿದೆ.

ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪ್ರತಿ ದಿನ ಭಾರಿ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಪೋಷಕರ ಜೊತೆ ಮಕ್ಕಳು ಕೂಡ ಸರದಿ ಸಾಲಿನಲ್ಲಿ ಬಂದು ಅಪ್ಪು ಸಮಾಧಿಗೆ ನಮಿಸುತ್ತಿದ್ದಾರೆ. ಸಮಾಧಿ ಎದುರು ಪುನೀತ್​ ಸಿನಿಮಾಗಳ ಹಾಡುಗಳನ್ನು ಹೇಳಿ ನಮನ ಸಲ್ಲಿಸಲಾಗುತ್ತಿದೆ. ಇಷ್ಟೆಲ್ಲ ಜನರ ಪ್ರೀತಿ ಗಳಿಸಿದ್ದ ಪುನೀತ್​ ಅವರು ಅಕಾಲಿಕ ಮರಣ ಹೊಂದಿದ್ದನ್ನು ಸಹಿಸುವುದಾದರೂ ಹೇಗೆ?

ಇದನ್ನೂ ಓದಿ: ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು; ಪುಟ್ಟ ಹೃದಯಗಳಿಗೆ ಅಪ್ಪು ಎಂದರೆ ಪಂಚಪ್ರಾಣ

ಇದನ್ನೂ ಓದಿ: Puneeth Rajkumar: ಪುನೀತ್ ಸಮಾಧಿ ದರ್ಶನದ ಅವಧಿ ಇಂದು 7 ಗಂಟೆವರೆಗೆ ವಿಸ್ತರಣೆ; ನಾಳೆ ಕಾರ್ಯ ಮುಗಿಸಿದ ನಂತರ ದರ್ಶನಕ್ಕೆ ಅವಕಾಶ

Published On - 4:34 pm, Sun, 7 November 21

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ