AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು: ಎಂಪಿ ರೇಣುಕಾಚಾರ್ಯ ಹೇಳಿಕೆ

MP Renukacharya: ನೇತ್ರದಾನ ಬಗ್ಗೆ ನಮ್ಮ ಕುಟುಂಬಸ್ಥರು ಅಭಿಯಾನ ಮಾಡುತ್ತೇವೆ. ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು. ಈ ಬಗ್ಗೆ ಪ್ರಧಾನಿಗೆ ಪತ್ರ ಬರೆಯುವೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು: ಎಂಪಿ ರೇಣುಕಾಚಾರ್ಯ ಹೇಳಿಕೆ
ಎಂ.ಪಿ. ರೇಣುಕಾಚಾರ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 07, 2021 | 5:04 PM

Share

ಬೆಂಗಳೂರು: ಕರ್ನಾಟಕದ ಜನರಿಂದ ದೀಪಾವಳಿ ಆಚರಣೆ ಬದಲು ಪುನೀತ್ ರಾಜ್​ಕುಮಾರ್ ಸಮಾಧಿ ದರ್ಶನ ಮಾಡಲಾಗಿದೆ. ಜನರು ಈಗಲೂ ಸಾಗರೋಪಾದಿಯಲ್ಲಿ ಬಂದು ಪುನೀತ್ ಸಮಾಧಿ ದರ್ಶನ ಪಡೆಯುತ್ತಿದ್ದಾರೆ ಎಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ ಪುನೀತ್​ ಮನೆ ಬಳಿ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಇಂದು (ನವೆಂಬರ್ 7) ಹೇಳಿಕೆ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಪ್ರಚಾರವಿಲ್ಲದೆ ಸೇವೆ ಮಾಡಿದ್ದಾರೆ. ನಾನು ಶಕ್ತಿಧಾಮಕ್ಕೆ ನೆರವು ನೀಡುವ ಬಗ್ಗೆ ಅಶ್ವಿನಿ ಜತೆ ಮಾತಾಡಿದ್ದೇನೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ನುಡಿನಮನ ಆಯೋಜಿಸಿರುವೆ. ಗಾಯಕ ರಾಜೇಶ್ ಕೃಷ್ಣನ್​ರಿಂದ ನುಡಿನಮನ ಕಾರ್ಯಕ್ರಮ ನಡೆಯಲಿದೆ. 10 ಸಾವಿರ ಜನರು ಸೇರಿ ಪುನೀತ್​​ಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನೇತ್ರದಾನ ಬಗ್ಗೆ ನಮ್ಮ ಕುಟುಂಬಸ್ಥರು ಅಭಿಯಾನ ಮಾಡುತ್ತೇವೆ. ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು. ಈ ಬಗ್ಗೆ ಪ್ರಧಾನಿಗೆ ಪತ್ರ ಬರೆಯುವೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದವರು ಪುನೀತ್​ ರಾಜ್​ಕುಮಾರ್​. ಹೃದಯಾಘಾತದಿಂದ ಸಡನ್​ ಆಗಿ ಅವರು ಇಹಲೋಕ ತ್ಯಜಿಸಿದ ಬಳಿಕ ಅಪಾರ ಸಂಖ್ಯೆಯ ಅಭಿಮಾನಿ ಬಳಗಕ್ಕೆ ತೀವ್ರ ನೋವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಚಿಕ್ಕ ಮಕ್ಕಳು ಸಂಕಟಪಡುತ್ತಿದ್ದಾರೆ. ಪುನೀತ್​ ಅವರ ಸಿನಿಮಾಗಳನ್ನು ಎಲ್ಲ ವರ್ಗದ ಪ್ರೇಕ್ಷಕರು ಇಷ್ಟಪಡುತ್ತಿದ್ದರು. ಮಕ್ಕಳು ಕೂಡ ಅಪ್ಪು ಅಭಿನಯವನ್ನು ಮನಸಾರೆ ಮೆಚ್ಚಿಕೊಂಡಿದ್ದರು. ಆದರೆ ಈಗ ಪುನೀತ್​ ಇಲ್ಲ ಎಂಬ ಕಹಿ ಸತ್ಯದಿಂದ ಪುಟಾಣಿಗಳಿಗೆ ನೋವಾಗಿದೆ.

ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪ್ರತಿ ದಿನ ಭಾರಿ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಪೋಷಕರ ಜೊತೆ ಮಕ್ಕಳು ಕೂಡ ಸರದಿ ಸಾಲಿನಲ್ಲಿ ಬಂದು ಅಪ್ಪು ಸಮಾಧಿಗೆ ನಮಿಸುತ್ತಿದ್ದಾರೆ. ಸಮಾಧಿ ಎದುರು ಪುನೀತ್​ ಸಿನಿಮಾಗಳ ಹಾಡುಗಳನ್ನು ಹೇಳಿ ನಮನ ಸಲ್ಲಿಸಲಾಗುತ್ತಿದೆ. ಇಷ್ಟೆಲ್ಲ ಜನರ ಪ್ರೀತಿ ಗಳಿಸಿದ್ದ ಪುನೀತ್​ ಅವರು ಅಕಾಲಿಕ ಮರಣ ಹೊಂದಿದ್ದನ್ನು ಸಹಿಸುವುದಾದರೂ ಹೇಗೆ?

ಇದನ್ನೂ ಓದಿ: ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು; ಪುಟ್ಟ ಹೃದಯಗಳಿಗೆ ಅಪ್ಪು ಎಂದರೆ ಪಂಚಪ್ರಾಣ

ಇದನ್ನೂ ಓದಿ: Puneeth Rajkumar: ಪುನೀತ್ ಸಮಾಧಿ ದರ್ಶನದ ಅವಧಿ ಇಂದು 7 ಗಂಟೆವರೆಗೆ ವಿಸ್ತರಣೆ; ನಾಳೆ ಕಾರ್ಯ ಮುಗಿಸಿದ ನಂತರ ದರ್ಶನಕ್ಕೆ ಅವಕಾಶ

Published On - 4:34 pm, Sun, 7 November 21

Follow Us
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ