AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು: ಎಂಪಿ ರೇಣುಕಾಚಾರ್ಯ ಹೇಳಿಕೆ

MP Renukacharya: ನೇತ್ರದಾನ ಬಗ್ಗೆ ನಮ್ಮ ಕುಟುಂಬಸ್ಥರು ಅಭಿಯಾನ ಮಾಡುತ್ತೇವೆ. ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು. ಈ ಬಗ್ಗೆ ಪ್ರಧಾನಿಗೆ ಪತ್ರ ಬರೆಯುವೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು: ಎಂಪಿ ರೇಣುಕಾಚಾರ್ಯ ಹೇಳಿಕೆ
ಎಂ.ಪಿ. ರೇಣುಕಾಚಾರ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 07, 2021 | 5:04 PM

Share

ಬೆಂಗಳೂರು: ಕರ್ನಾಟಕದ ಜನರಿಂದ ದೀಪಾವಳಿ ಆಚರಣೆ ಬದಲು ಪುನೀತ್ ರಾಜ್​ಕುಮಾರ್ ಸಮಾಧಿ ದರ್ಶನ ಮಾಡಲಾಗಿದೆ. ಜನರು ಈಗಲೂ ಸಾಗರೋಪಾದಿಯಲ್ಲಿ ಬಂದು ಪುನೀತ್ ಸಮಾಧಿ ದರ್ಶನ ಪಡೆಯುತ್ತಿದ್ದಾರೆ ಎಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ ಪುನೀತ್​ ಮನೆ ಬಳಿ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಇಂದು (ನವೆಂಬರ್ 7) ಹೇಳಿಕೆ ನೀಡಿದ್ದಾರೆ.

ಪುನೀತ್ ರಾಜ್​ಕುಮಾರ್ ಪ್ರಚಾರವಿಲ್ಲದೆ ಸೇವೆ ಮಾಡಿದ್ದಾರೆ. ನಾನು ಶಕ್ತಿಧಾಮಕ್ಕೆ ನೆರವು ನೀಡುವ ಬಗ್ಗೆ ಅಶ್ವಿನಿ ಜತೆ ಮಾತಾಡಿದ್ದೇನೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ನುಡಿನಮನ ಆಯೋಜಿಸಿರುವೆ. ಗಾಯಕ ರಾಜೇಶ್ ಕೃಷ್ಣನ್​ರಿಂದ ನುಡಿನಮನ ಕಾರ್ಯಕ್ರಮ ನಡೆಯಲಿದೆ. 10 ಸಾವಿರ ಜನರು ಸೇರಿ ಪುನೀತ್​​ಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನೇತ್ರದಾನ ಬಗ್ಗೆ ನಮ್ಮ ಕುಟುಂಬಸ್ಥರು ಅಭಿಯಾನ ಮಾಡುತ್ತೇವೆ. ಪುನೀತ್​ಗೆ ಪದ್ಮಶ್ರೀ, ಡಾ. ರಾಜ್​ಕುಮಾರ್‌ಗೆ​ ಭಾರತ ರತ್ನ ಗೌರವ ನೀಡಬೇಕು. ಈ ಬಗ್ಗೆ ಪ್ರಧಾನಿಗೆ ಪತ್ರ ಬರೆಯುವೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದವರು ಪುನೀತ್​ ರಾಜ್​ಕುಮಾರ್​. ಹೃದಯಾಘಾತದಿಂದ ಸಡನ್​ ಆಗಿ ಅವರು ಇಹಲೋಕ ತ್ಯಜಿಸಿದ ಬಳಿಕ ಅಪಾರ ಸಂಖ್ಯೆಯ ಅಭಿಮಾನಿ ಬಳಗಕ್ಕೆ ತೀವ್ರ ನೋವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಚಿಕ್ಕ ಮಕ್ಕಳು ಸಂಕಟಪಡುತ್ತಿದ್ದಾರೆ. ಪುನೀತ್​ ಅವರ ಸಿನಿಮಾಗಳನ್ನು ಎಲ್ಲ ವರ್ಗದ ಪ್ರೇಕ್ಷಕರು ಇಷ್ಟಪಡುತ್ತಿದ್ದರು. ಮಕ್ಕಳು ಕೂಡ ಅಪ್ಪು ಅಭಿನಯವನ್ನು ಮನಸಾರೆ ಮೆಚ್ಚಿಕೊಂಡಿದ್ದರು. ಆದರೆ ಈಗ ಪುನೀತ್​ ಇಲ್ಲ ಎಂಬ ಕಹಿ ಸತ್ಯದಿಂದ ಪುಟಾಣಿಗಳಿಗೆ ನೋವಾಗಿದೆ.

ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪ್ರತಿ ದಿನ ಭಾರಿ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಪೋಷಕರ ಜೊತೆ ಮಕ್ಕಳು ಕೂಡ ಸರದಿ ಸಾಲಿನಲ್ಲಿ ಬಂದು ಅಪ್ಪು ಸಮಾಧಿಗೆ ನಮಿಸುತ್ತಿದ್ದಾರೆ. ಸಮಾಧಿ ಎದುರು ಪುನೀತ್​ ಸಿನಿಮಾಗಳ ಹಾಡುಗಳನ್ನು ಹೇಳಿ ನಮನ ಸಲ್ಲಿಸಲಾಗುತ್ತಿದೆ. ಇಷ್ಟೆಲ್ಲ ಜನರ ಪ್ರೀತಿ ಗಳಿಸಿದ್ದ ಪುನೀತ್​ ಅವರು ಅಕಾಲಿಕ ಮರಣ ಹೊಂದಿದ್ದನ್ನು ಸಹಿಸುವುದಾದರೂ ಹೇಗೆ?

ಇದನ್ನೂ ಓದಿ: ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು; ಪುಟ್ಟ ಹೃದಯಗಳಿಗೆ ಅಪ್ಪು ಎಂದರೆ ಪಂಚಪ್ರಾಣ

ಇದನ್ನೂ ಓದಿ: Puneeth Rajkumar: ಪುನೀತ್ ಸಮಾಧಿ ದರ್ಶನದ ಅವಧಿ ಇಂದು 7 ಗಂಟೆವರೆಗೆ ವಿಸ್ತರಣೆ; ನಾಳೆ ಕಾರ್ಯ ಮುಗಿಸಿದ ನಂತರ ದರ್ಶನಕ್ಕೆ ಅವಕಾಶ

Published On - 4:34 pm, Sun, 7 November 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ