ಬಿಜೆಪಿ ಶಾಸಕ ಸತೀಶ್​ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ ಬೆಂಕಿ; ದುಷ್ಕರ್ಮಿಗಳು ಪರಾರಿ

ಬಿಳಿ ಬಣ್ಣದ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದರೆ, ಜೀಪ್​ ಮಾದರಿಯ ಇನ್ನೊಂದು ವಾಹನ ಬಹುತೇಕ ಸುಟ್ಟು ಹೋಗಿದೆ. ರಾತ್ರೋರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ.

ಬಿಜೆಪಿ ಶಾಸಕ ಸತೀಶ್​ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ 2 ಐಷಾರಾಮಿ ಕಾರುಗಳಿಗೆ ಬೆಂಕಿ; ದುಷ್ಕರ್ಮಿಗಳು ಪರಾರಿ
ಸುಟ್ಟು ಕರಕಲಾದ ಶಾಸಕ ಸತೀಶ್ ರೆಡ್ಡಿ ಕಾರುಗಳು
Follow us
| Updated By: Skanda

Updated on:Aug 12, 2021 | 8:34 AM

ಬೆಂಗಳೂರು: ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಬೊಮ್ಮನಹಳ್ಳಿಯಲ್ಲಿರುವ ಸತೀಶ್ ರೆಡ್ಡಿ ಮನೆ ಮುಂಭಾಗದಲ್ಲಿದ್ದ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು 2 ಕಾರುಗಳು ಸುಟ್ಟು ಕರಕಲಾಗಿವೆ. ತಡರಾತ್ರಿ 1.30ರ ವೇಳೆಗೆ ನಾಲ್ವರು ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ. ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಶಾಸಕ ಸತೀಶ್​ ರೆಡ್ಡಿ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಎರಡು ಕಾರುಗಳೂ ಕೂಡಾ ದುಬಾರಿ ಬೆಲೆಯದ್ದಾಗಿದ್ದು, ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ಇಲ್ಲಿಯ ತನಕ ಸುಳಿವು ಸಿಕ್ಕಿಲ್ಲ. ರಾಜಕೀಯ ದ್ವೇಷಕ್ಕಾಗಿ ಬೆಂಕಿ ಹಚ್ಚಲಾಗಿದೆಯಾ? ವೈಯಕ್ತಿಕ ಕಾರಣಗಳೇನಾದರೂ ಇವೆಯಾ? ಎನ್ನುವುದು ತನಿಖೆಯಿಂದ ಗೊತ್ತಾಗಬೇಕಿದೆ. ಘಟನೆಯ ನಂತರ ಪೊಲೀಸರಿಗೆ ಸತೀಶ್ ರೆಡ್ಡಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿಳಿ ಬಣ್ಣದ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದರೆ, ಜೀಪ್​ ಮಾದರಿಯ ಇನ್ನೊಂದು ವಾಹನ ಬಹುತೇಕ ಸುಟ್ಟು ಹೋಗಿದೆ. ರಾತ್ರೋರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ತಡರಾತ್ರಿ 1.30ರ ವೇಳೆಗೆ ನಾಲ್ವರು ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ. ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಶಾಸಕ ಸತೀಶ್​ ರೆಡ್ಡಿ ಹೇಳಿರುವುದರಿಂದ ಆ ನಾಲ್ವರು ಕಿಡಿಗೇಳು ಯಾರು ಎನ್ನುವುದು ಸದ್ಯದ ಪ್ರಶ್ನೆ.

ಶಾಸಕ ಸತೀಶ್ ರೆಡ್ಡಿ ನಿವಾಸದ ಬಳಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ, ರಾತ್ರಿ 1 ಗಂಟೆ ಸುಮಾರಿಗೆ ಕಾರುಗಳಿಗೆ ಬೆಂಕಿ ಬಿದ್ದಿದೆ. ಯಾರು ಬೆಂಕಿ ಹಚ್ಚಿದ್ದಾರೆ ಅನ್ನೋದು ತನಿಖೆಯಿಂದ ಗೋತ್ತಾಗಬೇಕಿದೆ ಎಂದು ಹೇಳಿದ್ದಾರೆ.

ರಾತ್ರಿ 1 ಗಂಟೆ 23 ನಿಮಿಷಕ್ಕೆ ಬೈಕಿನಲ್ಲಿ ಬಂದವರು ಕೇವಲ 7 ನಿಮಿಷಗಳಲ್ಲಿ ಕೃತ್ಯ ಎಸಗಿ ಪರಾರಿ ಆಗಿದ್ದಾರೆ. ಭದ್ರತಾ ಸಿಬ್ಬಂದಿ ಮನೆ ಎದುರಿನ ಗೇಟ್‌ ಬಳಿ ಇದ್ದರು. ಆದರೆ, ಹಿಂದಿನ ಗೇಟ್‌ನಿಂದ ಆರೋಪಿಗಳು ಪರಾರಿ ಆಗಿದ್ದಾರೆ. ಮನೆಯ ಹಿಂದಿನ ಗೇಟ್‌ನಲ್ಲಿ ಸಿಸಿಟಿವಿ ಇದೆಯಾದರೂ ಅದರಲ್ಲಿ ಮುಖ ಸರಿಯಾಗಿ ಕಾಣಿಸುವುದಿಲ್ಲ. ಬೈಕ್‌ನಲ್ಲಿ ಇಬ್ಬರು ಬಂದಿದ್ದರು ಅನ್ನೋದು ಗೊತ್ತಾಗಿದೆ. ಇದು ರಾಜಕೀಯ ದ್ವೇಷ ಅಲ್ಲ. ಹೀಗಾಗಿ ಇದನ್ನು ರಾಜಕೀಯ ದೃಷ್ಟಿಯಲ್ಲಿ ನೋಡುವುದಿಲ್ಲ ಎಂದು ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

(BJP MLA Satish Reddy owned cars parked in front of his house are burnt during mid night in Bengaluru)

ಇದನ್ನೂ ಓದಿ: Bed Blocking Scam: ಬೆಡ್ ಬ್ಲಾಕಿಂಗ್ ದಂದೆ: ಸ್ವಪಕ್ಷೀಯರ ಕೈವಾಡದ ಬಗ್ಗೆ ಬಿಜೆಪಿಯ ಹಿರಿಯ ನಾಯಕರಿಗೆ ಶಾಸಕ ಸತೀಶ್ ರೆಡ್ಡಿ ದೂರು

ತುಮಕೂರಿನಲ್ಲಿ ಬೆಂಕಿ ತಗುಲಿ ಮನೆ ಭಸ್ಮ; ಸುಟ್ಟು ಕರುಕಲಾದ ವೃದ್ಧ

Published On - 7:18 am, Thu, 12 August 21

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ