AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನಲ್ಲೂ ಸಾರ್ಥಕತೆ: ಬಿಜೆಪಿ ಶಾಸಕ ಸುರೇಶ್ ಕುಮಾರ್ ತಾಯಿಯ ದೇಹದಾನ

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ಅವರು ನಿಧನದ ನಂತರ ಅವರ ದೇಹ ಮತ್ತು ನೇತ್ರಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆಯಲಾಗಿದೆ. ಈ ಕುರಿತಾಗಿ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಾವಿನಲ್ಲೂ ಸಾರ್ಥಕತೆ: ಬಿಜೆಪಿ ಶಾಸಕ ಸುರೇಶ್ ಕುಮಾರ್ ತಾಯಿಯ ದೇಹದಾನ
ತಾಯಿ ಸುಶೀಲಮ್ಮ, ಶಾಸಕ ಸುರೇಶ್ ಕುಮಾರ್
ಗಂಗಾಧರ​ ಬ. ಸಾಬೋಜಿ
|

Updated on:Sep 25, 2025 | 12:41 PM

Share

ಬೆಂಗಳೂರು, ಸೆಪ್ಟೆಂಬರ್​ 25: ಮನುಷ್ಯ ಸತ್ತ ನಂತರವೂ ಸಾರ್ಥಕ ಬಾಳು ಬಾಳಬೇಕು ಅಂದರೆ ದೇಹ ಮಣ್ಣು ಮಾಡುವ ಬದಲು ದೇಹದಾನ (Body Donate) ಮಾಡಬೇಕು ಎಂದು ಹೇಳುತ್ತಾರೆ. ಇದೀಗ ಮಾಜಿ ಸಚಿವ, ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್​​ (Suresh Kumar) ಅವರ ತಾಯಿ ಸುಶೀಲಮ್ಮ ಅವರ ನೇತ್ರ ಸೇರಿದಂತೆ ದೇಹದಾನ ಮಾಡಲಾಗಿದೆ. ಆ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆಯಲಾಗಿದೆ.

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್​​ ಅವರ ತಾಯಿ ಸುಶೀಲಮ್ಮ ಅವರು ಸೆಪ್ಟೆಂಬರ್ 23ರಂದು ಬೆಳಿಗ್ಗೆ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದರು. ಈ ದುಃಖದ ವಿಚಾರವನ್ನು ಸ್ವತಃ ಸುರೇಶ್ ಕುಮಾರ್ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು.

ಎಸ್​​ ಸುರೇಶ್ ಕುಮಾರ್ ಪೋಸ್ಟ್

ಇದೀಗ ಸುಶೀಲಮ್ಮ ಅವರ ನೇತ್ರ ಮತ್ತು ದೇಹದಾನ ಮಾಡಲಾಗಿದೆ. ನಾರಾಯಣ ನೇತ್ರಾಯಲಕ್ಕೆ ಕಣ್ಣುಗಳನ್ನು ಮತ್ತು ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹವನ್ನು ದಾನವಾಗಿ ನೀಡಲಾಗಿದೆ. ಈ ಕುರಿತಾಗಿಯೂ ಎಸ್. ಸುರೇಶ್ ಕುಮಾರ್​​ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಮೊನ್ನೆ ನಮ್ಮನ್ನು ಬಿಟ್ಟು ತೆರಳಿದ ನನ್ನಮ್ಮ, ಸುಶೀಲಮ್ಮ ಟೀಚರ್​​ ಹೆಸರಿಗೆ ಸಿಕ್ಕ ಕೊನೆಯ CERTIFICATES. (ನೇತ್ರದಾನ, ದೇಹದಾನ) ಎಂದು ಬರೆದುಕೊಂಡಿದ್ದಾರೆ.

ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ಎಸ್. ಸುರೇಶ್ ಕುಮಾರ್

‘ನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ ನನ್ನಮ್ಮ, ಎಲ್ಲರ ಸುಶೀಲಮ್ಮ ಟೀಚರ್​ ಇನ್ನಿಲ್ಲ. ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರು’ ಎಂದು ತಮ್ಮ ತಾಯಿಯ ಭಾವಚಿತ್ರದೊಂದಿಗೆ ಎಸ್. ಸುರೇಶ್ ಕುಮಾರ್​​ ಅವರು ಭಾವನಾತ್ಮಕ ಪೋಸ್ಟ್​​ ಹಂಚಿಕೊಂಡಿದ್ದರು.

ಇದನ್ನೂ ಓದಿ: 1 ವಾರ ಬಾನು ಮುಷ್ತಾಕ್ ಮನೆಯಲ್ಲಿ ತಂಗಿದ್ದ ಭೈರಪ್ಪ, ಮಸೀದಿಗೂ ಹೋಗಿದ್ರು: ಕುತೂಹಲಕಾರಿ ಸಂಗತಿಗಳು ಇಲ್ಲಿವೆ

ಇನ್ನು ಶಾಸಕ ಸುರೇಶ್‌ ಕುಮಾರ್​​ ಅವರ ತಾಯಿ ಸುಶೀಲಮ್ಮ ಅವರು ಶಿಕ್ಷಕಿ ಆಗಿದ್ದರು. ಆ ಮೂಲಕ ಹಲವಾರು ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕು ಚೆಲ್ಲಿದ್ದರು. ಅಷ್ಟೇ ಅಲ್ಲದೆ ಸಮಾಜದಲ್ಲಿ ವಿವಿಧ ಆಯಾಮಗಳಲ್ಲಿ ಅವರು ಗುರುತಿಸಿಕೊಳ್ಳುವುರೊಂದಿಗೆ ಜನಪ್ರಿಯರಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:34 pm, Thu, 25 September 25

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ