AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿನಲ್ಲೂ ಸಾರ್ಥಕತೆ: ಬಿಜೆಪಿ ಶಾಸಕ ಸುರೇಶ್ ಕುಮಾರ್ ತಾಯಿಯ ದೇಹದಾನ

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ಅವರು ನಿಧನದ ನಂತರ ಅವರ ದೇಹ ಮತ್ತು ನೇತ್ರಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆಯಲಾಗಿದೆ. ಈ ಕುರಿತಾಗಿ ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಾವಿನಲ್ಲೂ ಸಾರ್ಥಕತೆ: ಬಿಜೆಪಿ ಶಾಸಕ ಸುರೇಶ್ ಕುಮಾರ್ ತಾಯಿಯ ದೇಹದಾನ
ತಾಯಿ ಸುಶೀಲಮ್ಮ, ಶಾಸಕ ಸುರೇಶ್ ಕುಮಾರ್
ಗಂಗಾಧರ​ ಬ. ಸಾಬೋಜಿ
|

Updated on:Sep 25, 2025 | 12:41 PM

Share

ಬೆಂಗಳೂರು, ಸೆಪ್ಟೆಂಬರ್​ 25: ಮನುಷ್ಯ ಸತ್ತ ನಂತರವೂ ಸಾರ್ಥಕ ಬಾಳು ಬಾಳಬೇಕು ಅಂದರೆ ದೇಹ ಮಣ್ಣು ಮಾಡುವ ಬದಲು ದೇಹದಾನ (Body Donate) ಮಾಡಬೇಕು ಎಂದು ಹೇಳುತ್ತಾರೆ. ಇದೀಗ ಮಾಜಿ ಸಚಿವ, ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್​​ (Suresh Kumar) ಅವರ ತಾಯಿ ಸುಶೀಲಮ್ಮ ಅವರ ನೇತ್ರ ಸೇರಿದಂತೆ ದೇಹದಾನ ಮಾಡಲಾಗಿದೆ. ಆ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆಯಲಾಗಿದೆ.

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್​​ ಅವರ ತಾಯಿ ಸುಶೀಲಮ್ಮ ಅವರು ಸೆಪ್ಟೆಂಬರ್ 23ರಂದು ಬೆಳಿಗ್ಗೆ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದರು. ಈ ದುಃಖದ ವಿಚಾರವನ್ನು ಸ್ವತಃ ಸುರೇಶ್ ಕುಮಾರ್ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು.

ಎಸ್​​ ಸುರೇಶ್ ಕುಮಾರ್ ಪೋಸ್ಟ್

ಇದೀಗ ಸುಶೀಲಮ್ಮ ಅವರ ನೇತ್ರ ಮತ್ತು ದೇಹದಾನ ಮಾಡಲಾಗಿದೆ. ನಾರಾಯಣ ನೇತ್ರಾಯಲಕ್ಕೆ ಕಣ್ಣುಗಳನ್ನು ಮತ್ತು ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹವನ್ನು ದಾನವಾಗಿ ನೀಡಲಾಗಿದೆ. ಈ ಕುರಿತಾಗಿಯೂ ಎಸ್. ಸುರೇಶ್ ಕುಮಾರ್​​ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಮೊನ್ನೆ ನಮ್ಮನ್ನು ಬಿಟ್ಟು ತೆರಳಿದ ನನ್ನಮ್ಮ, ಸುಶೀಲಮ್ಮ ಟೀಚರ್​​ ಹೆಸರಿಗೆ ಸಿಕ್ಕ ಕೊನೆಯ CERTIFICATES. (ನೇತ್ರದಾನ, ದೇಹದಾನ) ಎಂದು ಬರೆದುಕೊಂಡಿದ್ದಾರೆ.

ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ಎಸ್. ಸುರೇಶ್ ಕುಮಾರ್

‘ನನ್ನನ್ನು ಹೊತ್ತು, ಹೆತ್ತು ಸಾಕಿ, ತಿದ್ದಿ ತೀಡಿ ಬೆಳೆಸಿದ ನನ್ನಮ್ಮ, ಎಲ್ಲರ ಸುಶೀಲಮ್ಮ ಟೀಚರ್​ ಇನ್ನಿಲ್ಲ. ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟು ಬಿಟ್ಟರು’ ಎಂದು ತಮ್ಮ ತಾಯಿಯ ಭಾವಚಿತ್ರದೊಂದಿಗೆ ಎಸ್. ಸುರೇಶ್ ಕುಮಾರ್​​ ಅವರು ಭಾವನಾತ್ಮಕ ಪೋಸ್ಟ್​​ ಹಂಚಿಕೊಂಡಿದ್ದರು.

ಇದನ್ನೂ ಓದಿ: 1 ವಾರ ಬಾನು ಮುಷ್ತಾಕ್ ಮನೆಯಲ್ಲಿ ತಂಗಿದ್ದ ಭೈರಪ್ಪ, ಮಸೀದಿಗೂ ಹೋಗಿದ್ರು: ಕುತೂಹಲಕಾರಿ ಸಂಗತಿಗಳು ಇಲ್ಲಿವೆ

ಇನ್ನು ಶಾಸಕ ಸುರೇಶ್‌ ಕುಮಾರ್​​ ಅವರ ತಾಯಿ ಸುಶೀಲಮ್ಮ ಅವರು ಶಿಕ್ಷಕಿ ಆಗಿದ್ದರು. ಆ ಮೂಲಕ ಹಲವಾರು ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕು ಚೆಲ್ಲಿದ್ದರು. ಅಷ್ಟೇ ಅಲ್ಲದೆ ಸಮಾಜದಲ್ಲಿ ವಿವಿಧ ಆಯಾಮಗಳಲ್ಲಿ ಅವರು ಗುರುತಿಸಿಕೊಳ್ಳುವುರೊಂದಿಗೆ ಜನಪ್ರಿಯರಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:34 pm, Thu, 25 September 25

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು