AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟಿಕೆಟ್​ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ: ಚೈತ್ರಾ ಜೈಲಿನಿಂದ ಬಿಡುಗಡೆ

ಉದ್ಯಮಿ ಗೋವಿಂದಬಾಬು ಅವರಿಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ವಂಚಿಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬಿಜೆಪಿ ಟಿಕೆಟ್​ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ: ಚೈತ್ರಾ ಜೈಲಿನಿಂದ ಬಿಡುಗಡೆ
ಚೈತ್ರಾ
ರಾಮು, ಆನೇಕಲ್​
| Edited By: ವಿವೇಕ ಬಿರಾದಾರ|

Updated on:Dec 06, 2023 | 8:25 PM

Share

ಬೆಂಗಳೂರು ಡಿ.06: ಉದ್ಯಮಿ ಗೋವಿಂದಬಾಬು ಅವರಿಗೆ ಬಿಜೆಪಿ (BJP) ಟಿಕೆಟ್​ ಕೊಡಿಸುವುದಾಗಿ ವಂಚಿಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ (Chaitra) ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಡಿಸೆಂಬರ್​ 4ರಂದು (Court) ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಏನಿದು ಪ್ರಕರಣ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಐದು ಕೋಟಿ ರೂ. ಹಣ ಪಡೆದು ಚೈತ್ರಾ ವಂಚಿಸಿದ್ದರು. ಈ ಬಗ್ಗೆ ಉದ್ಯಮಿ ದೂರು ನೀಡಿದ್ದರು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಸಿಸಿಬಿ ಪೊಲೀಸರು ಪ್ರಕರಣದ ಆರೋಪಿಗಳಾದ ಹಿಂದೂಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಹಾಗೂ ಶ್ರೀಕಾಂತ್‌ ಅವರನ್ನು ಸೆಪ್ಟೆಂಬರ್​​ 13 ರಂದು ಬಂಧಿಸಿದ್ದರು.

ಇದನ್ನೂ ಓದಿ: ಚೈತ್ರಾ ಆ್ಯಂಡ್ ಗ್ಯಾಂಗ್ ವಂಚನೆ ಪ್ರಕರಣ: 9 ಆರೋಪಿಗಳ ವಿರುದ್ಧ ಚಾರ್ಜ್​​ಶೀಟ್ ಸಲ್ಲಿಸಿದ ಸಿಸಿಬಿ 

ಇನ್ನು ಪ್ರಕರಣದ ಇನ್ನೂಳಿದ ಆರೋಪಿಗಳಾದ ರಮೇಶ್‌, ಗಗನ್‌, ಪ್ರಜ್ವಲ್‌ ಹಾಗೂ ಧನರಾಜ್‌ ಅವರನ್ನು ಬಂಧಿಸಿದ್ದರು. ದೂರುದಾರರಿಂದ 1.5 ಕೋಟಿ ರೂ. ಪಡೆದ ಆರೋಪದ ಮೇಲೆ ಹಾಲಶ್ರೀ ಸ್ವಾಮೀಜಿಯನ್ನು 2023 ರ ಸೆಪ್ಟೆಂಬರ್​ 19 ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು.

ಮೂರನೇ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್‌ ನವೆಂಬರ್​ 8 ರಂದು ಜಾಮೀನು ಮಂಜೂರು ಮಾಡಿತ್ತು. ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಅರ್ಜಿ ಮಾನ್ಯ ಮಾಡಿತ್ತು. ನವೆಂಬರ್​ 11 ರಂದು ಹಾಲಶ್ರೀ ಪರಪ್ಪನ ಅಗ್ರಹಾರದಿಂದ ಹೊರ ಬಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:24 pm, Wed, 6 December 23

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ