AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟಿಕೆಟ್​ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ: ಚೈತ್ರಾ ಜೈಲಿನಿಂದ ಬಿಡುಗಡೆ

ಉದ್ಯಮಿ ಗೋವಿಂದಬಾಬು ಅವರಿಗೆ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ವಂಚಿಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬಿಜೆಪಿ ಟಿಕೆಟ್​ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ: ಚೈತ್ರಾ ಜೈಲಿನಿಂದ ಬಿಡುಗಡೆ
ಚೈತ್ರಾ
ರಾಮು, ಆನೇಕಲ್​
| Edited By: |

Updated on:Dec 06, 2023 | 8:25 PM

Share

ಬೆಂಗಳೂರು ಡಿ.06: ಉದ್ಯಮಿ ಗೋವಿಂದಬಾಬು ಅವರಿಗೆ ಬಿಜೆಪಿ (BJP) ಟಿಕೆಟ್​ ಕೊಡಿಸುವುದಾಗಿ ವಂಚಿಸಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ (Chaitra) ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಡಿಸೆಂಬರ್​ 4ರಂದು (Court) ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಏನಿದು ಪ್ರಕರಣ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಐದು ಕೋಟಿ ರೂ. ಹಣ ಪಡೆದು ಚೈತ್ರಾ ವಂಚಿಸಿದ್ದರು. ಈ ಬಗ್ಗೆ ಉದ್ಯಮಿ ದೂರು ನೀಡಿದ್ದರು. ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ಸಿಸಿಬಿ ಪೊಲೀಸರು ಪ್ರಕರಣದ ಆರೋಪಿಗಳಾದ ಹಿಂದೂಪರ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಹಾಗೂ ಶ್ರೀಕಾಂತ್‌ ಅವರನ್ನು ಸೆಪ್ಟೆಂಬರ್​​ 13 ರಂದು ಬಂಧಿಸಿದ್ದರು.

ಇದನ್ನೂ ಓದಿ: ಚೈತ್ರಾ ಆ್ಯಂಡ್ ಗ್ಯಾಂಗ್ ವಂಚನೆ ಪ್ರಕರಣ: 9 ಆರೋಪಿಗಳ ವಿರುದ್ಧ ಚಾರ್ಜ್​​ಶೀಟ್ ಸಲ್ಲಿಸಿದ ಸಿಸಿಬಿ 

ಇನ್ನು ಪ್ರಕರಣದ ಇನ್ನೂಳಿದ ಆರೋಪಿಗಳಾದ ರಮೇಶ್‌, ಗಗನ್‌, ಪ್ರಜ್ವಲ್‌ ಹಾಗೂ ಧನರಾಜ್‌ ಅವರನ್ನು ಬಂಧಿಸಿದ್ದರು. ದೂರುದಾರರಿಂದ 1.5 ಕೋಟಿ ರೂ. ಪಡೆದ ಆರೋಪದ ಮೇಲೆ ಹಾಲಶ್ರೀ ಸ್ವಾಮೀಜಿಯನ್ನು 2023 ರ ಸೆಪ್ಟೆಂಬರ್​ 19 ರಂದು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದರು.

ಮೂರನೇ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿಗೆ ಹೈಕೋರ್ಟ್‌ ನವೆಂಬರ್​ 8 ರಂದು ಜಾಮೀನು ಮಂಜೂರು ಮಾಡಿತ್ತು. ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಅರ್ಜಿ ಮಾನ್ಯ ಮಾಡಿತ್ತು. ನವೆಂಬರ್​ 11 ರಂದು ಹಾಲಶ್ರೀ ಪರಪ್ಪನ ಅಗ್ರಹಾರದಿಂದ ಹೊರ ಬಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:24 pm, Wed, 6 December 23

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ