AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಪಟಾಕಿ ಸಿಡಿಸಬಾರದು ಎಂಬ ಜಾಹೀರಾತು ಹಿಂಪಡೆಯಲು ಸಿಯೆಟ್ ಕಂಪೆನಿಗೆ ಅನಂತಕುಮಾರ್ ಹೆಗಡೆ ಪತ್ರ

ಸಿಯೆಟ್ ಕಂಪೆನಿಯ ಬಾಲಿವುಡ್ ನಟ ಆಮೀರ್ ಖಾನ್ ನಟಿಸಿರುವ ಜಾಹೀರಾತು ದೀಪಾವಳಿಗೆ ಪಟಾಕಿ ಸಿಡಿಸಬಾರದೆಂದು ಹೇಳಿದೆ. ಈ ಬಗ್ಗೆ ಸಿಯೆಟ್ ಕಂಪನಿಗೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಪತ್ರ ಬರೆದಿದ್ದಾರೆ.

ದೀಪಾವಳಿಗೆ ಪಟಾಕಿ ಸಿಡಿಸಬಾರದು ಎಂಬ ಜಾಹೀರಾತು ಹಿಂಪಡೆಯಲು ಸಿಯೆಟ್ ಕಂಪೆನಿಗೆ ಅನಂತಕುಮಾರ್ ಹೆಗಡೆ ಪತ್ರ
ಅನಂತ್​ ಕುಮಾರ್ ಹೆಗಡೆ
TV9 Web
| Edited By: |

Updated on:Oct 20, 2021 | 7:15 PM

Share

ಬೆಂಗಳೂರು: ದೀಪಾವಳಿಗೆ ಪಟಾಕಿ ಸಿಡಿಸಬಾರದೆಂಬ ಜಾಹೀರಾತು ನೀಡಿದ ಹಿನ್ನೆಲೆ ಜಾಹೀರಾತು ಹಿಂಪಡೆಯುವಂತೆ ಸಿಯೆಟ್ ಕಂಪನಿಗೆ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಪತ್ರ ಬರೆದಿದ್ದಾರೆ. ಆ ಮೂಲಕ, ಹಿಂದೂಗಳ ಭಾವನೆಗೆ ಧಕ್ಕೆ ಬರದಂತೆ ನೋಡಿಕೊಳ್ಳಲು ಮನವಿ ಮಾಡಿದ್ದಾರೆ. ಸಿಯೆಟ್ ಕಂಪೆನಿಯ ಬಾಲಿವುಡ್ ನಟ ಆಮೀರ್ ಖಾನ್ ನಟಿಸಿರುವ ಜಾಹೀರಾತು ದೀಪಾವಳಿಗೆ ಪಟಾಕಿ ಸಿಡಿಸಬಾರದೆಂದು ಹೇಳಿದೆ. ಈ ಬಗ್ಗೆ ಸಿಯೆಟ್ ಕಂಪನಿಗೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಪತ್ರ ಬರೆದಿದ್ದಾರೆ.

ದೀಪಾವಳಿ ಜಾಹೀರಾತಿನಿಂದ ವಿವಾದಕ್ಕೀಡಾದ ಫ್ಯಾಬ್ ​ಇಂಡಿಯಾದಿಂದ ಸ್ಪಷ್ಟನೆ ಜನಪ್ರಿಯ ವಸ್ತ್ರ ಬ್ರ್ಯಾಂಡ್​ ಫ್ಯಾಬ್​ ಇಂಡಿಯಾ (Fabindia) ಇದೀಗ ಭರ್ಜರಿ ಸುದ್ದಿಯಲ್ಲಿದೆ. ಒಂದೇ ಒಂದು ಜಾಹಿರಾತಿನಿಂದ ಸಿಕ್ಕಾಪಟೆ ಟ್ರೋಲ್​ ಆಗಿ, ಇದೀಗ ಆ ಜಾಹೀರಾತನ್ನೇ ಹಿಂಪಡೆದಿದೆ. ಹಿಂದುಗಳ ಹಬ್ಬ ದೀಪಾವಳಿಗೆ ಉರ್ದು ಲಿಂಕ್​ ಮಾಡಿ, ಜೈಷ್ನ್​ ಎ ರಿವಾಜ್ (Jashn-e-Riwaaz)​ ಎಂದು ಕರೆದಿತ್ತು. ಅಂದರೆ ದೀಪಾವಳಿಯ ಹೊಸ ಬಟ್ಟೆ ಕಲೆಕ್ಷನ್​​ಗೆ ಉರ್ದುವಿನಲ್ಲಿ ಜೈಷ್ನ್​ ಎ ರಿವಾಜ್​ ಎಂದು ಹೆಸರಿಟ್ಟಿತ್ತು. ಆದರೆ ಅದು ಕೆಲವೇ ಕ್ಷಣಗಳಲ್ಲಿ ಸಿಕ್ಕಾಪಟೆ ಆಕ್ರೋಶಕ್ಕೆ ಕಾರಣವಾದ ನಂತರ ತನ್ನ ಟ್ವೀಟ್ ಡಿಲೀಟ್​ ಮಾಡಿ, ಜಾಹೀರಾತನ್ನೇ ಹಿಂಪಡೆದಿದೆ.

ಜಾಹೀರಾತು ಹಿಂಪಡೆದ ಕಂಪನಿ ಇದೀಗ ಒಂದು ಸ್ಪಷ್ಟೀಕರಣ ಬಿಡುಗಡೆ ಮಾಡಿದೆ. ಜೈಷ್ನ್​ ಎ ರಿವಾಜ್​ ಎಂಬುದು ಕಂಪನಿಯು ದೀಪಾವಳಿ ಬಟ್ಟೆ ಕಲೆಕ್ಷನ್​​ಗೆ ಇಟ್ಟಿದ್ದ ಹೆಸರಲ್ಲ. ದೀಪಾವಳಿ ಕಲೆಕ್ಷನ್​ ಝಿಲ್​ ಮಿಲ್​ ಸೆ ದಿವಾಲಿ ಇನ್ನೂ ಬಿಡುಗಡೆಯಾಗಿಲ್ಲ ಎಂದು ಹೇಳಿಕೊಂಡಿದೆ. ಈ ಫ್ಯಾಬ್​ ಇಂಡಿಯಾ ಕಂಪನಿ ಪ್ರತಿ 15ದಿನಗಳಿಗೊಮ್ಮೆ ಹೊಸ ಕಲೆಕ್ಷನ್​ ಬಿಡುಗಡೆ ಮಾಡುತ್ತದೆ ಎಂದೂ ಹೇಳಲಾಗಿದೆ. ಅಂದರೆ ನಿನ್ನೆ ಬಿಡುಗಡೆಯಾಗಿದ್ದು ದೀಪಾವಳಿ ಕಲೆಕ್ಷನ್​ ಆಗಿರಲಿಲ್ಲ ಎಂಬುದು ಕಂಪನಿಯ ಸ್ಪಷ್ಟನೆ.

ಇದನ್ನೂ ಓದಿ: ದೀಪಾವಳಿ ಜಾಹೀರಾತಿನಿಂದ ವಿವಾದಕ್ಕೀಡಾದ ಫ್ಯಾಬ್ ​ಇಂಡಿಯಾದಿಂದ ಸ್ಪಷ್ಟನೆ; ಇದು ದೀಪಾವಳಿ ಕಲೆಕ್ಷನ್​ ಅಲ್ಲವೆಂದ ಕಂಪನಿ !

ಇದನ್ನೂ ಓದಿ: Big Diwali Sale: ಫ್ಲಿಪ್​ಕಾರ್ಟ್​ನಲ್ಲಿ ದೀಪಾವಳಿ ಆಫರ್: ಕೇವಲ 6,499 ರೂ. ಗೆ ಖರೀದಿಸಿ ಈ ಸ್ಮಾರ್ಟ್​ಫೋನ್

Published On - 7:13 pm, Wed, 20 October 21

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!