AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಪಟಾಕಿ ಸಿಡಿಸಬಾರದು ಎಂಬ ಜಾಹೀರಾತು ಹಿಂಪಡೆಯಲು ಸಿಯೆಟ್ ಕಂಪೆನಿಗೆ ಅನಂತಕುಮಾರ್ ಹೆಗಡೆ ಪತ್ರ

ಸಿಯೆಟ್ ಕಂಪೆನಿಯ ಬಾಲಿವುಡ್ ನಟ ಆಮೀರ್ ಖಾನ್ ನಟಿಸಿರುವ ಜಾಹೀರಾತು ದೀಪಾವಳಿಗೆ ಪಟಾಕಿ ಸಿಡಿಸಬಾರದೆಂದು ಹೇಳಿದೆ. ಈ ಬಗ್ಗೆ ಸಿಯೆಟ್ ಕಂಪನಿಗೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಪತ್ರ ಬರೆದಿದ್ದಾರೆ.

ದೀಪಾವಳಿಗೆ ಪಟಾಕಿ ಸಿಡಿಸಬಾರದು ಎಂಬ ಜಾಹೀರಾತು ಹಿಂಪಡೆಯಲು ಸಿಯೆಟ್ ಕಂಪೆನಿಗೆ ಅನಂತಕುಮಾರ್ ಹೆಗಡೆ ಪತ್ರ
ಅನಂತ್​ ಕುಮಾರ್ ಹೆಗಡೆ
TV9 Web
| Edited By: |

Updated on:Oct 20, 2021 | 7:15 PM

Share

ಬೆಂಗಳೂರು: ದೀಪಾವಳಿಗೆ ಪಟಾಕಿ ಸಿಡಿಸಬಾರದೆಂಬ ಜಾಹೀರಾತು ನೀಡಿದ ಹಿನ್ನೆಲೆ ಜಾಹೀರಾತು ಹಿಂಪಡೆಯುವಂತೆ ಸಿಯೆಟ್ ಕಂಪನಿಗೆ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಪತ್ರ ಬರೆದಿದ್ದಾರೆ. ಆ ಮೂಲಕ, ಹಿಂದೂಗಳ ಭಾವನೆಗೆ ಧಕ್ಕೆ ಬರದಂತೆ ನೋಡಿಕೊಳ್ಳಲು ಮನವಿ ಮಾಡಿದ್ದಾರೆ. ಸಿಯೆಟ್ ಕಂಪೆನಿಯ ಬಾಲಿವುಡ್ ನಟ ಆಮೀರ್ ಖಾನ್ ನಟಿಸಿರುವ ಜಾಹೀರಾತು ದೀಪಾವಳಿಗೆ ಪಟಾಕಿ ಸಿಡಿಸಬಾರದೆಂದು ಹೇಳಿದೆ. ಈ ಬಗ್ಗೆ ಸಿಯೆಟ್ ಕಂಪನಿಗೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಪತ್ರ ಬರೆದಿದ್ದಾರೆ.

ದೀಪಾವಳಿ ಜಾಹೀರಾತಿನಿಂದ ವಿವಾದಕ್ಕೀಡಾದ ಫ್ಯಾಬ್ ​ಇಂಡಿಯಾದಿಂದ ಸ್ಪಷ್ಟನೆ ಜನಪ್ರಿಯ ವಸ್ತ್ರ ಬ್ರ್ಯಾಂಡ್​ ಫ್ಯಾಬ್​ ಇಂಡಿಯಾ (Fabindia) ಇದೀಗ ಭರ್ಜರಿ ಸುದ್ದಿಯಲ್ಲಿದೆ. ಒಂದೇ ಒಂದು ಜಾಹಿರಾತಿನಿಂದ ಸಿಕ್ಕಾಪಟೆ ಟ್ರೋಲ್​ ಆಗಿ, ಇದೀಗ ಆ ಜಾಹೀರಾತನ್ನೇ ಹಿಂಪಡೆದಿದೆ. ಹಿಂದುಗಳ ಹಬ್ಬ ದೀಪಾವಳಿಗೆ ಉರ್ದು ಲಿಂಕ್​ ಮಾಡಿ, ಜೈಷ್ನ್​ ಎ ರಿವಾಜ್ (Jashn-e-Riwaaz)​ ಎಂದು ಕರೆದಿತ್ತು. ಅಂದರೆ ದೀಪಾವಳಿಯ ಹೊಸ ಬಟ್ಟೆ ಕಲೆಕ್ಷನ್​​ಗೆ ಉರ್ದುವಿನಲ್ಲಿ ಜೈಷ್ನ್​ ಎ ರಿವಾಜ್​ ಎಂದು ಹೆಸರಿಟ್ಟಿತ್ತು. ಆದರೆ ಅದು ಕೆಲವೇ ಕ್ಷಣಗಳಲ್ಲಿ ಸಿಕ್ಕಾಪಟೆ ಆಕ್ರೋಶಕ್ಕೆ ಕಾರಣವಾದ ನಂತರ ತನ್ನ ಟ್ವೀಟ್ ಡಿಲೀಟ್​ ಮಾಡಿ, ಜಾಹೀರಾತನ್ನೇ ಹಿಂಪಡೆದಿದೆ.

ಜಾಹೀರಾತು ಹಿಂಪಡೆದ ಕಂಪನಿ ಇದೀಗ ಒಂದು ಸ್ಪಷ್ಟೀಕರಣ ಬಿಡುಗಡೆ ಮಾಡಿದೆ. ಜೈಷ್ನ್​ ಎ ರಿವಾಜ್​ ಎಂಬುದು ಕಂಪನಿಯು ದೀಪಾವಳಿ ಬಟ್ಟೆ ಕಲೆಕ್ಷನ್​​ಗೆ ಇಟ್ಟಿದ್ದ ಹೆಸರಲ್ಲ. ದೀಪಾವಳಿ ಕಲೆಕ್ಷನ್​ ಝಿಲ್​ ಮಿಲ್​ ಸೆ ದಿವಾಲಿ ಇನ್ನೂ ಬಿಡುಗಡೆಯಾಗಿಲ್ಲ ಎಂದು ಹೇಳಿಕೊಂಡಿದೆ. ಈ ಫ್ಯಾಬ್​ ಇಂಡಿಯಾ ಕಂಪನಿ ಪ್ರತಿ 15ದಿನಗಳಿಗೊಮ್ಮೆ ಹೊಸ ಕಲೆಕ್ಷನ್​ ಬಿಡುಗಡೆ ಮಾಡುತ್ತದೆ ಎಂದೂ ಹೇಳಲಾಗಿದೆ. ಅಂದರೆ ನಿನ್ನೆ ಬಿಡುಗಡೆಯಾಗಿದ್ದು ದೀಪಾವಳಿ ಕಲೆಕ್ಷನ್​ ಆಗಿರಲಿಲ್ಲ ಎಂಬುದು ಕಂಪನಿಯ ಸ್ಪಷ್ಟನೆ.

ಇದನ್ನೂ ಓದಿ: ದೀಪಾವಳಿ ಜಾಹೀರಾತಿನಿಂದ ವಿವಾದಕ್ಕೀಡಾದ ಫ್ಯಾಬ್ ​ಇಂಡಿಯಾದಿಂದ ಸ್ಪಷ್ಟನೆ; ಇದು ದೀಪಾವಳಿ ಕಲೆಕ್ಷನ್​ ಅಲ್ಲವೆಂದ ಕಂಪನಿ !

ಇದನ್ನೂ ಓದಿ: Big Diwali Sale: ಫ್ಲಿಪ್​ಕಾರ್ಟ್​ನಲ್ಲಿ ದೀಪಾವಳಿ ಆಫರ್: ಕೇವಲ 6,499 ರೂ. ಗೆ ಖರೀದಿಸಿ ಈ ಸ್ಮಾರ್ಟ್​ಫೋನ್

Published On - 7:13 pm, Wed, 20 October 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!