AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಡ್​​ಲೈನ್​ ಮುಗಿದ್ರೂ ಬಗೆಹರೆಯದ ರಸ್ತೆ ಗುಂಡಿ: ಜೇಬು ತುಂಬಿಸಿಕೊಂಡ್ರಾ ಎಂದ ಬಿಜೆಪಿ ಎಂಪಿ

ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ‘ಟಿವಿ9’ ನಿರಂತರ ವರದಿ ಬೆನ್ನಲ್ಲೇ ರಸ್ತೆಗುಂಡಿಗಳನ್ನ ಮುಚ್ಚಲು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಡೆಡ್​ಲೈನ್ ಅಂತ್ಯವಾಗಿದೆ. ಪಾಲಿಕೆ ಅಧಿಕಾರಿಗಳು ಕೂಡ ಗುಂಡಿ ಮುಚ್ಚುವ ಕೆಲಸಕ್ಕೆ ವೇಗ ನೀಡಿದ್ದಾರೆ. ಭಾನುವಾರವೂ ಫೀಲ್ಡ್​​ಗಿಳಿದ ಪಾಲಿಕೆ ಅಧಿಕಾರಿಗಳು ಸಿಬ್ಬಂದಿ ಮೂಲಕ ರಸ್ತೆಗುಂಡಿಗಳಿಗೆ ತೇಪೆ ಹಚ್ಚಿಸಿದ್ದಾರೆ. ಆದರೂ ಸಹ ಕೆಲ ಗಡೆಗಳಲ್ಲಿ ಹಾಗೇ ಗುಂಡಿಗಳು ಇವೆ. ಇದಕ್ಕೆ ಬಿಜೆಪಿ ಸಂಸದ ಪಿಸಿ ಮೋಹನ್ ಅವರು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಡೆಡ್​​ಲೈನ್​ ಮುಗಿದ್ರೂ ಬಗೆಹರೆಯದ ರಸ್ತೆ ಗುಂಡಿ: ಜೇಬು ತುಂಬಿಸಿಕೊಂಡ್ರಾ ಎಂದ ಬಿಜೆಪಿ ಎಂಪಿ
Follow us
ರಮೇಶ್ ಬಿ. ಜವಳಗೇರಾ
|

Updated on: Sep 18, 2024 | 7:25 PM

ಬೆಂಗಳೂರು, (ಸೆಪ್ಟೆಂಬರ್ 18): ಬೆಂಗಳೂರಲ್ಲಿ ಮುಂದಿನ 15 ದಿನಗಳಲ್ಲಿ ರಸ್ತೆಗುಂಡಿಗಳನ್ನು ಮುಚ್ಚಿಬಿಡುತ್ತೇವೆ. ಎಲ್ಲ ರಸ್ತೆಗಳನ್ನು ಜನಸ್ನೇಹಿ ಆಗಿಸುತ್ತೇವೆ ಎಂದು ಕಾಂಗ್ರೆಸ್‌ ಸರ್ಕಾರ ಹೇಳಿತ್ತು. ಕಾಂಗ್ರೆಸ್‌ ಸರ್ಕಾರ ನೀಡಿದ್ದ ಗಡುವು ಈಗಾಗಲೇ ಮುಕ್ತಾಯವಾಗಿದೆ. ಆದರೆ, ಬೆಂಗಳೂರಿನಲ್ಲಿ ರಸ್ತೆಗುಂಡಿಗಳು ಇನ್ನೂ ಇವೆ ಎಂದು ಬಿಜೆಪಿ ಸಂಸದ ಪಿ.ಸಿ ಮೋಹನ್‌ ಹೇಳಿದ್ದಾರೆ. ಮುಂದುವರಿದು, ರಸ್ತೆಗುಂಡಿಗಳನ್ನು ಮುಚ್ಚುವ ಬದಲು ಅವರ ಜೇಬು ತುಂಬಿಸಿಕೊಂಡರೆ ಎಂದು ಗುಂಡಿ ಇರುವ ರಸ್ತೆಯ ವಿಡಿಯೋ ಶೇರ್ ಮಾಡಿ ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಿಸಿ ಮೋಹನ್, ಬೆಂಗಳೂರಿನಲ್ಲಿ ಗುಂಡಿಯಲ್ಲಿ ರಸ್ತೆಯೋ ರಸ್ತೆಯಲ್ಲಿ ಗುಂಡಿಯೋ ಎನ್ನುವಂತಿರುವ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು, ಇದೇನಾ 15 ದಿನಗಳಲ್ಲಿ ರಸ್ತೆಗುಂಡಿ ಮುಚ್ಚುವ ಪರಿ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ರಸ್ತೆಗುಂಡಿಗಳನ್ನು ಮುಚ್ಚುವ ಬದಲು ಅವರ ಜೇಬು ತುಂಬಿಸಿಕೊಂಡರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ರಸ್ತೆ ಗುಂಡಿ ಮುಚ್ಚುವ ಗಡುವು ಇಂದು ಅಂತ್ಯ: ರಜಾ ದಿನವಾದ ಭಾನುವಾರವೂ ಮುಂದುವರಿದ ಕಾಮಗಾರಿ!

ಇನ್ನು ಬಿಜೆಪಿ ಸಂಸದ ಪಿ.ಸಿ ಮೋಹನ್‌ ಅವರ ಟ್ವೀಟ್‌ಗೆ ಜನ ಕಾಮೆಂಟ್‌ ಮಾಡಿರುವುದನ್ನು ನೋಡಿದರೆ, ಈ ಟ್ವೀಟ್‌ ಅವರಿಗೆ ತಿರುಗುಬಾಣವಾದಂತಿದೆ. ಹೌದು….ನೀವು ಓರ್ವ ಸಂಸದರಾಗಿ ಏನು ಮಾಡುತ್ತೀರಿ ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ನೀವು 15 ವರ್ಷಗಳಿಂದ ಸಂಸದರು ಎಂದು ಭಾವಿಸುತ್ತೇನೆ. ನಿಮ್ಮ ಕ್ಷೇತ್ರ ಹೆಂಗಿದೆ ಎಂದು ಕೇಳಿದ್ದಾರೆ. ಇನ್ನು ಕೆಲವರು ಬಿಡಿ ಸರ್‌ ಇದಕ್ಕಿಂತ ಮುಂಚೆ ಏನಾದರು ಬದಲಾಗಿತ್ತಾ ಅಂತಲೂ ಕೇಳಿದ್ದಾರೆ. ಈ ಬೆಂಗಳೂರು ರಸ್ತೆಗುಂಡಿಗಳನ್ನು ಮುಚ್ಚುವುದರಲ್ಲಿ ಬಿಜೆಪಿಯ ಪಾತ್ರವೇನು ಇಲ್ಲವೇ. ಬಿಜೆಪಿ ಪಕ್ಷವು ಕಾಂಗ್ರೆಸ್‌ ಪಕ್ಷವನ್ನು ಬ್ಲೈಮ್‌ ಮಾಡ್ತಿದೆ. ನಿಮಗೆ ಜನರ ಸಮಸ್ಯೆಯನ್ನು ಪರಿಹರಿಸುವ ಇಚ್ಛಾಶಕ್ತಿ ಇಲ್ಲವೇ ಎಂದು ಜನ ಪ್ರಶ್ನೆ ಮಾಡಿದ್ದಾರೆ.

ನೀವು ಬರೀ ಟ್ವೀಟ್‌ ಮಾಡಿದರೆ ಸಾಕೇ, ನೀವೇನೂ ಮಾಡಲ್ವಾ ಪ್ರಧಾನಿ ಮೋದಿ ಅವರ ಹಿಂದೆ ಕುಳಿತು ಚಪ್ಪಾಳೆ ತಟ್ಟುತ್ತೀರಾ ಎಂದು ಕೆಲವರು ಹಿಂದಿಯಲ್ಲೂ ಟ್ವೀಟ್‌ ಮಾಡಿ ಸಂಸದರನ್ನು ಪ್ರಶ್ನೆ ಮಾಡಿದ್ದಾರೆ. ಕೆಲವೇ ಕೆಲವರು ಮಾತ್ರ ಬಿಜೆಪಿ ಸಂಸದರನ್ನು ಸಮರ್ಥನೆ ಮಾಡಿಕೊಂಡು ಟ್ವೀಟ್‌ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು