AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ

ಬಹು ನಿರೀಕ್ಷಿತ ಬೈಯಪ್ಪನಹಳ್ಳಿ- ಕೆಆರ್‌ ಪುರ ಮೆಟ್ರೋ ಓಡಾಡಕ್ಕೆ ಸಿದ್ಧವಾಗಿದೆ. ನಮ್ಮ ಮೆಟ್ರೋ ನೇರಳೆ ಮಾರ್ಗದ ಬಾಕಿ ಉಳಿದಿರುವ ಕೆಆರ್‌ ಪುರ - ಬೈಯಪ್ಪನಹಳ್ಳಿ ನಡುವಿನ 2 ಕಿ.ಮೀ. ಮಾರ್ಗದ ಸುರಕ್ಷತಾ ಪರಿಶೀಲನೆ ಈಗಾಗಲೇ ಪೂರ್ಣಗೊಂಡಿದೆ. ಆದ್ರೆ, ಅದ್ಯಾಕೋ ಉದ್ಘಾಟನೆ ವಿಳಂಬವಾಗಿದೆ. ಇದಕ್ಕೆ ಇದೀಗ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 02, 2023 | 10:50 AM

ಬೆಂಗಳೂರು, (ಅಕ್ಟೋಬರ್ 02): ಬೆಂಗಳೂರಿನ ಬೈಯ್ಯಪ್ಪನಹಳ್ಳಿ-ಕೆ.ಆರ್​​.ಪುರಂ ಮೆಟ್ರೋ (Byappanahalli – KR Pura Metro) ಮಾರ್ಗ ಉದ್ಘಾಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (tejasvi surya) ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂಆರ್​ಎಸ್​​ನಿಂದ ಅನುಮತಿ ಪಡೆದರೂ ಸರ್ಕಾರ ವಿಳಂಬ ಮಾಡುತ್ತಿದೆ. ರಾಹುಲ್​ ಗಾಂಧಿಯಿಂದ ಉದ್ಘಾಟಿಸಲು ಸರ್ಕಾರ ನಿರ್ಧಾರ ಮಾಡಿದೆ. ಆದರೆ, ರಾಹುಲ್ ಗಾಂಧಿ ಈವರೆಗೂ ಸಮಯ ನೀಡಿಲ್ಲ. ಹೀಗಾಗಿ ಬೈಯ್ಯಪ್ಪನಹಳ್ಳಿ-ಕೆ.ಆರ್​​.ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಲು ವಿನಾಕಾರಣ ವಿಳಂಬ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಯುವ ಮೋರ್ಚಾ ಆಯೋಜಿಸಿದ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಉದ್ಘಾಟನೆಯಾದರೆ ಈ ಸಂಖ್ಯೆಯಲ್ಲಿ ಸುಮಾರು ಶೇ. 50-60 ರಷ್ಟು ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ. ನೂತನ ಮೆಟ್ರೋ ಮಾರ್ಗವನ್ನು ಕೂಡಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಆಗ್ರಹಿಸಿದ್ದಾರೆ.

ಸೆಪ್ಟೆಂಬರ್ 21ರಂದು ನೇರಳೆ ಮಾರ್ಗದ ಮಿಸ್ಸಿಂಗ್ ಲಿಂಕ್ ಎನಿಸಿಕೊಂಡಿದ್ದ ಆರ್ ಪುರ – ಬೈಯಪ್ಪನಹಳ್ಳಿ ನಡುವಿನ 2-ಕಿಮೀ ಮಾರ್ಗದ ಸುರಕ್ಷತಾ ಪರಿಶೀಲನೆ ಮಾಡಿದ್ದ ಸಿಎಂಆರ್‌ಎಸ್ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿತ್ತು. ಆದ್ರೆ, ಇದುವರೆಗೂ ಉದ್ಘಾಟನೆಯಾಗಿಲ್ಲ. ವಿಳಂಬಕ್ಕೆ ಕಾರಣವೇನು ಎನ್ನುವುದು ಸಹ ತಿಳಿದುಬಂದಿಲ್ಲ.

Daily Horoscope: ಚಂದ್ರನು ಮಕರ ರಾಶಿಯಿಂದ ಶ್ರವಣ ನಕ್ಷತ್ರದೆಡೆಗೆ ಸಂಚಾರ
Daily Horoscope: ಚಂದ್ರನು ಮಕರ ರಾಶಿಯಿಂದ ಶ್ರವಣ ನಕ್ಷತ್ರದೆಡೆಗೆ ಸಂಚಾರ
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ