AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ

ಬಹು ನಿರೀಕ್ಷಿತ ಬೈಯಪ್ಪನಹಳ್ಳಿ- ಕೆಆರ್‌ ಪುರ ಮೆಟ್ರೋ ಓಡಾಡಕ್ಕೆ ಸಿದ್ಧವಾಗಿದೆ. ನಮ್ಮ ಮೆಟ್ರೋ ನೇರಳೆ ಮಾರ್ಗದ ಬಾಕಿ ಉಳಿದಿರುವ ಕೆಆರ್‌ ಪುರ - ಬೈಯಪ್ಪನಹಳ್ಳಿ ನಡುವಿನ 2 ಕಿ.ಮೀ. ಮಾರ್ಗದ ಸುರಕ್ಷತಾ ಪರಿಶೀಲನೆ ಈಗಾಗಲೇ ಪೂರ್ಣಗೊಂಡಿದೆ. ಆದ್ರೆ, ಅದ್ಯಾಕೋ ಉದ್ಘಾಟನೆ ವಿಳಂಬವಾಗಿದೆ. ಇದಕ್ಕೆ ಇದೀಗ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ
TV9 Web
| Edited By: |

Updated on: Oct 02, 2023 | 10:50 AM

Share

ಬೆಂಗಳೂರು, (ಅಕ್ಟೋಬರ್ 02): ಬೆಂಗಳೂರಿನ ಬೈಯ್ಯಪ್ಪನಹಳ್ಳಿ-ಕೆ.ಆರ್​​.ಪುರಂ ಮೆಟ್ರೋ (Byappanahalli – KR Pura Metro) ಮಾರ್ಗ ಉದ್ಘಾಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (tejasvi surya) ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂಆರ್​ಎಸ್​​ನಿಂದ ಅನುಮತಿ ಪಡೆದರೂ ಸರ್ಕಾರ ವಿಳಂಬ ಮಾಡುತ್ತಿದೆ. ರಾಹುಲ್​ ಗಾಂಧಿಯಿಂದ ಉದ್ಘಾಟಿಸಲು ಸರ್ಕಾರ ನಿರ್ಧಾರ ಮಾಡಿದೆ. ಆದರೆ, ರಾಹುಲ್ ಗಾಂಧಿ ಈವರೆಗೂ ಸಮಯ ನೀಡಿಲ್ಲ. ಹೀಗಾಗಿ ಬೈಯ್ಯಪ್ಪನಹಳ್ಳಿ-ಕೆ.ಆರ್​​.ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಲು ವಿನಾಕಾರಣ ವಿಳಂಬ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಯುವ ಮೋರ್ಚಾ ಆಯೋಜಿಸಿದ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಉದ್ಘಾಟನೆಯಾದರೆ ಈ ಸಂಖ್ಯೆಯಲ್ಲಿ ಸುಮಾರು ಶೇ. 50-60 ರಷ್ಟು ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ. ನೂತನ ಮೆಟ್ರೋ ಮಾರ್ಗವನ್ನು ಕೂಡಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಆಗ್ರಹಿಸಿದ್ದಾರೆ.

ಸೆಪ್ಟೆಂಬರ್ 21ರಂದು ನೇರಳೆ ಮಾರ್ಗದ ಮಿಸ್ಸಿಂಗ್ ಲಿಂಕ್ ಎನಿಸಿಕೊಂಡಿದ್ದ ಆರ್ ಪುರ – ಬೈಯಪ್ಪನಹಳ್ಳಿ ನಡುವಿನ 2-ಕಿಮೀ ಮಾರ್ಗದ ಸುರಕ್ಷತಾ ಪರಿಶೀಲನೆ ಮಾಡಿದ್ದ ಸಿಎಂಆರ್‌ಎಸ್ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿತ್ತು. ಆದ್ರೆ, ಇದುವರೆಗೂ ಉದ್ಘಾಟನೆಯಾಗಿಲ್ಲ. ವಿಳಂಬಕ್ಕೆ ಕಾರಣವೇನು ಎನ್ನುವುದು ಸಹ ತಿಳಿದುಬಂದಿಲ್ಲ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!