AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ

ಬಹು ನಿರೀಕ್ಷಿತ ಬೈಯಪ್ಪನಹಳ್ಳಿ- ಕೆಆರ್‌ ಪುರ ಮೆಟ್ರೋ ಓಡಾಡಕ್ಕೆ ಸಿದ್ಧವಾಗಿದೆ. ನಮ್ಮ ಮೆಟ್ರೋ ನೇರಳೆ ಮಾರ್ಗದ ಬಾಕಿ ಉಳಿದಿರುವ ಕೆಆರ್‌ ಪುರ - ಬೈಯಪ್ಪನಹಳ್ಳಿ ನಡುವಿನ 2 ಕಿ.ಮೀ. ಮಾರ್ಗದ ಸುರಕ್ಷತಾ ಪರಿಶೀಲನೆ ಈಗಾಗಲೇ ಪೂರ್ಣಗೊಂಡಿದೆ. ಆದ್ರೆ, ಅದ್ಯಾಕೋ ಉದ್ಘಾಟನೆ ವಿಳಂಬವಾಗಿದೆ. ಇದಕ್ಕೆ ಇದೀಗ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ
TV9 Web
| Edited By: |

Updated on: Oct 02, 2023 | 10:50 AM

Share

ಬೆಂಗಳೂರು, (ಅಕ್ಟೋಬರ್ 02): ಬೆಂಗಳೂರಿನ ಬೈಯ್ಯಪ್ಪನಹಳ್ಳಿ-ಕೆ.ಆರ್​​.ಪುರಂ ಮೆಟ್ರೋ (Byappanahalli – KR Pura Metro) ಮಾರ್ಗ ಉದ್ಘಾಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (tejasvi surya) ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂಆರ್​ಎಸ್​​ನಿಂದ ಅನುಮತಿ ಪಡೆದರೂ ಸರ್ಕಾರ ವಿಳಂಬ ಮಾಡುತ್ತಿದೆ. ರಾಹುಲ್​ ಗಾಂಧಿಯಿಂದ ಉದ್ಘಾಟಿಸಲು ಸರ್ಕಾರ ನಿರ್ಧಾರ ಮಾಡಿದೆ. ಆದರೆ, ರಾಹುಲ್ ಗಾಂಧಿ ಈವರೆಗೂ ಸಮಯ ನೀಡಿಲ್ಲ. ಹೀಗಾಗಿ ಬೈಯ್ಯಪ್ಪನಹಳ್ಳಿ-ಕೆ.ಆರ್​​.ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಲು ವಿನಾಕಾರಣ ವಿಳಂಬ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಯುವ ಮೋರ್ಚಾ ಆಯೋಜಿಸಿದ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಉದ್ಘಾಟನೆಯಾದರೆ ಈ ಸಂಖ್ಯೆಯಲ್ಲಿ ಸುಮಾರು ಶೇ. 50-60 ರಷ್ಟು ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ. ನೂತನ ಮೆಟ್ರೋ ಮಾರ್ಗವನ್ನು ಕೂಡಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಆಗ್ರಹಿಸಿದ್ದಾರೆ.

ಸೆಪ್ಟೆಂಬರ್ 21ರಂದು ನೇರಳೆ ಮಾರ್ಗದ ಮಿಸ್ಸಿಂಗ್ ಲಿಂಕ್ ಎನಿಸಿಕೊಂಡಿದ್ದ ಆರ್ ಪುರ – ಬೈಯಪ್ಪನಹಳ್ಳಿ ನಡುವಿನ 2-ಕಿಮೀ ಮಾರ್ಗದ ಸುರಕ್ಷತಾ ಪರಿಶೀಲನೆ ಮಾಡಿದ್ದ ಸಿಎಂಆರ್‌ಎಸ್ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿತ್ತು. ಆದ್ರೆ, ಇದುವರೆಗೂ ಉದ್ಘಾಟನೆಯಾಗಿಲ್ಲ. ವಿಳಂಬಕ್ಕೆ ಕಾರಣವೇನು ಎನ್ನುವುದು ಸಹ ತಿಳಿದುಬಂದಿಲ್ಲ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ