AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ

ಬಹು ನಿರೀಕ್ಷಿತ ಬೈಯಪ್ಪನಹಳ್ಳಿ- ಕೆಆರ್‌ ಪುರ ಮೆಟ್ರೋ ಓಡಾಡಕ್ಕೆ ಸಿದ್ಧವಾಗಿದೆ. ನಮ್ಮ ಮೆಟ್ರೋ ನೇರಳೆ ಮಾರ್ಗದ ಬಾಕಿ ಉಳಿದಿರುವ ಕೆಆರ್‌ ಪುರ - ಬೈಯಪ್ಪನಹಳ್ಳಿ ನಡುವಿನ 2 ಕಿ.ಮೀ. ಮಾರ್ಗದ ಸುರಕ್ಷತಾ ಪರಿಶೀಲನೆ ಈಗಾಗಲೇ ಪೂರ್ಣಗೊಂಡಿದೆ. ಆದ್ರೆ, ಅದ್ಯಾಕೋ ಉದ್ಘಾಟನೆ ವಿಳಂಬವಾಗಿದೆ. ಇದಕ್ಕೆ ಇದೀಗ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 02, 2023 | 10:50 AM

Share

ಬೆಂಗಳೂರು, (ಅಕ್ಟೋಬರ್ 02): ಬೆಂಗಳೂರಿನ ಬೈಯ್ಯಪ್ಪನಹಳ್ಳಿ-ಕೆ.ಆರ್​​.ಪುರಂ ಮೆಟ್ರೋ (Byappanahalli – KR Pura Metro) ಮಾರ್ಗ ಉದ್ಘಾಟಿಸಲು ವಿಳಂಬ ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (tejasvi surya) ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂಆರ್​ಎಸ್​​ನಿಂದ ಅನುಮತಿ ಪಡೆದರೂ ಸರ್ಕಾರ ವಿಳಂಬ ಮಾಡುತ್ತಿದೆ. ರಾಹುಲ್​ ಗಾಂಧಿಯಿಂದ ಉದ್ಘಾಟಿಸಲು ಸರ್ಕಾರ ನಿರ್ಧಾರ ಮಾಡಿದೆ. ಆದರೆ, ರಾಹುಲ್ ಗಾಂಧಿ ಈವರೆಗೂ ಸಮಯ ನೀಡಿಲ್ಲ. ಹೀಗಾಗಿ ಬೈಯ್ಯಪ್ಪನಹಳ್ಳಿ-ಕೆ.ಆರ್​​.ಪುರಂ ಮೆಟ್ರೋ ಮಾರ್ಗ ಉದ್ಘಾಟಿಸಲು ವಿನಾಕಾರಣ ವಿಳಂಬ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಯುವ ಮೋರ್ಚಾ ಆಯೋಜಿಸಿದ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ, ಬೈಯಪ್ಪನಹಳ್ಳಿ-ಕೆಆರ್ ಪುರ ಮಾರ್ಗ ಉದ್ಘಾಟನೆಯಾದರೆ ಈ ಸಂಖ್ಯೆಯಲ್ಲಿ ಸುಮಾರು ಶೇ. 50-60 ರಷ್ಟು ಪ್ರಯಾಣಿಕರಿಗೆ ಪ್ರಯೋಜನವಾಗಲಿದೆ. ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ. ನೂತನ ಮೆಟ್ರೋ ಮಾರ್ಗವನ್ನು ಕೂಡಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಆಗ್ರಹಿಸಿದ್ದಾರೆ.

ಸೆಪ್ಟೆಂಬರ್ 21ರಂದು ನೇರಳೆ ಮಾರ್ಗದ ಮಿಸ್ಸಿಂಗ್ ಲಿಂಕ್ ಎನಿಸಿಕೊಂಡಿದ್ದ ಆರ್ ಪುರ – ಬೈಯಪ್ಪನಹಳ್ಳಿ ನಡುವಿನ 2-ಕಿಮೀ ಮಾರ್ಗದ ಸುರಕ್ಷತಾ ಪರಿಶೀಲನೆ ಮಾಡಿದ್ದ ಸಿಎಂಆರ್‌ಎಸ್ ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿತ್ತು. ಆದ್ರೆ, ಇದುವರೆಗೂ ಉದ್ಘಾಟನೆಯಾಗಿಲ್ಲ. ವಿಳಂಬಕ್ಕೆ ಕಾರಣವೇನು ಎನ್ನುವುದು ಸಹ ತಿಳಿದುಬಂದಿಲ್ಲ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ