AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC, ST ಅನುದಾನದಲ್ಲಿ 11,144 ಕೋಟಿ ದುರ್ಬಳಕೆ ಆರೋಪ; ಕಾಂಗ್ರೆಸ್ ವಿರುದ್ಧ ಮೂರು ಹಂತಗಳಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜು

ದುರ್ಬಳಕೆ ಮಾಡಿಕೊಳ್ಳದೆ ಕೇವಲ SC, ST ಸಮುದಾಯಕ್ಕೆ ಅನುದಾನ ಬಳಸದಿದ್ದರೆ 3 ಹಂತದಲ್ಲಿ ಹೋರಾಟ ಮಾಡಿ ಪಾದಯಾತ್ರೆ ಮೂಲಕ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಚಿಂತನೆ ನಡೆಸಿದೆ. SC, ST ಸಮುದಾಯಕ್ಕೆ ಮೀಸಲಾದ ಅನುದಾನದಲ್ಲಿ 11,144 ಕೋಟಿಯನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.

SC, ST ಅನುದಾನದಲ್ಲಿ 11,144 ಕೋಟಿ ದುರ್ಬಳಕೆ ಆರೋಪ; ಕಾಂಗ್ರೆಸ್ ವಿರುದ್ಧ ಮೂರು ಹಂತಗಳಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜು
ಬಿಜೆಪಿ
ಕಿರಣ್​ ಹನಿಯಡ್ಕ
| Edited By: |

Updated on:Sep 12, 2023 | 1:28 PM

Share

ಬೆಂಗಳೂರು, ಸೆ.12: SC, ST ಸಮುದಾಯಕ್ಕೆ ಮೀಸಲಾದ ಅನುದಾನದಲ್ಲಿ 11,144 ಕೋಟಿಯನ್ನು ಕಾಂಗ್ರೆಸ್ ಸರ್ಕಾರ(Congress Government) ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ(Govind Karjol) ಆರೋಪಿಸಿದ್ದಾರೆ. ಇನ್ನು ಈ ಆರೋಪ ಹಿನ್ನೆಲೆ ಮೂರು ಹಂತಗಳಲ್ಲಿ ಹೋರಾಟ ಮಾಡಲು ವಿಪಕ್ಷ ಬಿಜೆಪಿ(BJP) ನಾಯಕರು ಮುಂದಾಗಿದ್ದಾರೆ. ದುರ್ಬಳಕೆ ಮಾಡಿಕೊಳ್ಳದೆ ಕೇವಲ SC, ST ಸಮುದಾಯಕ್ಕೆ ಅನುದಾನ ಬಳಸದಿದ್ದರೆ 3 ಹಂತದಲ್ಲಿ ಹೋರಾಟ ಮಾಡಿ ಪಾದಯಾತ್ರೆ ಮೂಲಕ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಚಿಂತನೆ ನಡೆಸಿದೆ.

ಅನುದಾನವನ್ನು ಪರಿಶಿಷ್ಟ ಸಮುದಾಯಕ್ಕೆ ಬಳಸದೇ ಹೋದರೆ 3 ಹಂತದಲ್ಲಿ ಹೋರಾಟ ಮಾಡಲಾಗುತ್ತೆ. ಸೆ.25ರಿಂದ ಅಕ್ಟೋಬರ್ 10ರವರೆಗೆ ಮೊದಲ ಹಂತದಲ್ಲಿ ಜನಾಂದೋಲನ ನಡೆಸಲು, ಅ.11ರಿಂದ ಅಕ್ಟೋಬರ್ 25ರವರೆಗೆ ಎರಡನೇ ಹಂತದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸಚಿವರು ಹಾಗೂ ಶಾಸಕರಿಗೆ ಮುತ್ತಿಗೆ, ಜಿಲ್ಲಾ ಸಚಿವರ ಮನೆ ಮುಂದೆ ಧರಣಿ ನಡೆಸಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಹಾಗೂ ನವೆಂಬರ್​ 2ನೇ ವಾರದಲ್ಲಿ ಮೂರನೇ ಹಂತದಲ್ಲಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಸಮಾಧಿಯಿಂದ ಪಾದಯಾತ್ರೆ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಚಿಂತನೆ ನಡೆದಿದೆ.

ಇದನ್ನೂ ಓದಿ: ಆಡಳಿತ ಯಂತ್ರಕ್ಕೆ ಚುರುಕು: ವಾರಕ್ಕೊಮ್ಮೆ ಜನ ಸಂಪರ್ಕ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಸರ್ಕಾರದ ವಿರುದ್ಧ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತೇವೆ -ಬಿಎಸ್​ವೈ

ಬಹಳ ಕಡಿಮೆ ಅವಧಿಯಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನ ಛೀಮಾರಿ ಹಾಕುವ ಸ್ಥಿತಿ ಬಂದಿದೆ ಎಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದರು. ಗೌರಿ ಗಣೇಶ ಹಬ್ಬದ ನಂತರ ರಾಜ್ಯಾದ್ಯಂತ ಪ್ರವಾಸಕ್ಕೆ ತೀರ್ಮಾನಿಸಿದ್ದೇನೆ. ಸರ್ಕಾರದ ವಿರುದ್ಧ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತೇವೆ. ದೆಹಲಿಯಲ್ಲಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಿದೆ. ಸಭೆಯಲ್ಲಿ ಪಾಲ್ಗೊಳ್ಳಲು ನಾಳೆ ದೆಹಲಿಗೆ ತೆರಳುತ್ತಿದ್ದೇವೆ. ಜೆಡಿಎಸ್ ಜೊತೆ ಮೈತ್ರಿ ವಿಚಾರವಾಗಿ ವರಿಷ್ಠರು ತೀರ್ಮಾನಿಸುತ್ತಾರೆ. ಇದು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಿಟ್ಟ ವಿಚಾರ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:27 pm, Tue, 12 September 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ