AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SC, ST ಅನುದಾನದಲ್ಲಿ 11,144 ಕೋಟಿ ದುರ್ಬಳಕೆ ಆರೋಪ; ಕಾಂಗ್ರೆಸ್ ವಿರುದ್ಧ ಮೂರು ಹಂತಗಳಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜು

ದುರ್ಬಳಕೆ ಮಾಡಿಕೊಳ್ಳದೆ ಕೇವಲ SC, ST ಸಮುದಾಯಕ್ಕೆ ಅನುದಾನ ಬಳಸದಿದ್ದರೆ 3 ಹಂತದಲ್ಲಿ ಹೋರಾಟ ಮಾಡಿ ಪಾದಯಾತ್ರೆ ಮೂಲಕ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಚಿಂತನೆ ನಡೆಸಿದೆ. SC, ST ಸಮುದಾಯಕ್ಕೆ ಮೀಸಲಾದ ಅನುದಾನದಲ್ಲಿ 11,144 ಕೋಟಿಯನ್ನು ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.

SC, ST ಅನುದಾನದಲ್ಲಿ 11,144 ಕೋಟಿ ದುರ್ಬಳಕೆ ಆರೋಪ; ಕಾಂಗ್ರೆಸ್ ವಿರುದ್ಧ ಮೂರು ಹಂತಗಳಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜು
ಬಿಜೆಪಿ
ಕಿರಣ್​ ಹನಿಯಡ್ಕ
| Edited By: ಆಯೇಷಾ ಬಾನು|

Updated on:Sep 12, 2023 | 1:28 PM

Share

ಬೆಂಗಳೂರು, ಸೆ.12: SC, ST ಸಮುದಾಯಕ್ಕೆ ಮೀಸಲಾದ ಅನುದಾನದಲ್ಲಿ 11,144 ಕೋಟಿಯನ್ನು ಕಾಂಗ್ರೆಸ್ ಸರ್ಕಾರ(Congress Government) ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ(Govind Karjol) ಆರೋಪಿಸಿದ್ದಾರೆ. ಇನ್ನು ಈ ಆರೋಪ ಹಿನ್ನೆಲೆ ಮೂರು ಹಂತಗಳಲ್ಲಿ ಹೋರಾಟ ಮಾಡಲು ವಿಪಕ್ಷ ಬಿಜೆಪಿ(BJP) ನಾಯಕರು ಮುಂದಾಗಿದ್ದಾರೆ. ದುರ್ಬಳಕೆ ಮಾಡಿಕೊಳ್ಳದೆ ಕೇವಲ SC, ST ಸಮುದಾಯಕ್ಕೆ ಅನುದಾನ ಬಳಸದಿದ್ದರೆ 3 ಹಂತದಲ್ಲಿ ಹೋರಾಟ ಮಾಡಿ ಪಾದಯಾತ್ರೆ ಮೂಲಕ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಚಿಂತನೆ ನಡೆಸಿದೆ.

ಅನುದಾನವನ್ನು ಪರಿಶಿಷ್ಟ ಸಮುದಾಯಕ್ಕೆ ಬಳಸದೇ ಹೋದರೆ 3 ಹಂತದಲ್ಲಿ ಹೋರಾಟ ಮಾಡಲಾಗುತ್ತೆ. ಸೆ.25ರಿಂದ ಅಕ್ಟೋಬರ್ 10ರವರೆಗೆ ಮೊದಲ ಹಂತದಲ್ಲಿ ಜನಾಂದೋಲನ ನಡೆಸಲು, ಅ.11ರಿಂದ ಅಕ್ಟೋಬರ್ 25ರವರೆಗೆ ಎರಡನೇ ಹಂತದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸಚಿವರು ಹಾಗೂ ಶಾಸಕರಿಗೆ ಮುತ್ತಿಗೆ, ಜಿಲ್ಲಾ ಸಚಿವರ ಮನೆ ಮುಂದೆ ಧರಣಿ ನಡೆಸಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಹಾಗೂ ನವೆಂಬರ್​ 2ನೇ ವಾರದಲ್ಲಿ ಮೂರನೇ ಹಂತದಲ್ಲಿ ಹರಿಹರದ ಪ್ರೊ.ಬಿ.ಕೃಷ್ಣಪ್ಪ ಸಮಾಧಿಯಿಂದ ಪಾದಯಾತ್ರೆ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಚಿಂತನೆ ನಡೆದಿದೆ.

ಇದನ್ನೂ ಓದಿ: ಆಡಳಿತ ಯಂತ್ರಕ್ಕೆ ಚುರುಕು: ವಾರಕ್ಕೊಮ್ಮೆ ಜನ ಸಂಪರ್ಕ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಸರ್ಕಾರದ ವಿರುದ್ಧ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತೇವೆ -ಬಿಎಸ್​ವೈ

ಬಹಳ ಕಡಿಮೆ ಅವಧಿಯಲ್ಲಿ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನ ಛೀಮಾರಿ ಹಾಕುವ ಸ್ಥಿತಿ ಬಂದಿದೆ ಎಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದರು. ಗೌರಿ ಗಣೇಶ ಹಬ್ಬದ ನಂತರ ರಾಜ್ಯಾದ್ಯಂತ ಪ್ರವಾಸಕ್ಕೆ ತೀರ್ಮಾನಿಸಿದ್ದೇನೆ. ಸರ್ಕಾರದ ವಿರುದ್ಧ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತೇವೆ. ದೆಹಲಿಯಲ್ಲಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಿದೆ. ಸಭೆಯಲ್ಲಿ ಪಾಲ್ಗೊಳ್ಳಲು ನಾಳೆ ದೆಹಲಿಗೆ ತೆರಳುತ್ತಿದ್ದೇವೆ. ಜೆಡಿಎಸ್ ಜೊತೆ ಮೈತ್ರಿ ವಿಚಾರವಾಗಿ ವರಿಷ್ಠರು ತೀರ್ಮಾನಿಸುತ್ತಾರೆ. ಇದು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಿಟ್ಟ ವಿಚಾರ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:27 pm, Tue, 12 September 23

Follow Us
Kiran Haniyadka
Kiran Haniyadka
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ