AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ: ಭಾಷಣದಲ್ಲಿ ಗಾಂಧಿ ಕುಟುಂಬದ ಬಗ್ಗೆ ಪ್ರಸ್ತಾವನೆಗೆ ಬಿಜೆಪಿ ಸೂಚನೆ

ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ ಮಾಡಲು ಮುಂದಾಗಿದೆ.

ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ: ಭಾಷಣದಲ್ಲಿ ಗಾಂಧಿ ಕುಟುಂಬದ ಬಗ್ಗೆ ಪ್ರಸ್ತಾವನೆಗೆ ಬಿಜೆಪಿ ಸೂಚನೆ
ಸತೀಶ್​ ಜಾರಕಿಹೋಳಿ ವಿರುದ್ಧ ಪ್ರತಿಭಟನೆಗೆ ಮುಂದಾದ ಬಿಜೆಪಿ
TV9 Web
| Edited By: |

Updated on: Nov 08, 2022 | 10:31 PM

Share

ಬೆಂಗಳೂರು: ಹಿಂದೂ (Hindu) ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿಕೆ ನೀಡಿ ತೀರ್ವ ಟೀಕೆಗೆ ಗುರಿಯಾದ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ (Satish Jarkiholi) ವಿರುದ್ಧ ಬಿಜೆಪಿ (BJP) ನವೆಂಬರ್​ 9 ರಂದು ರಾಜ್ಯವ್ಯಾಪಿ ಪ್ರತಿಭಟನೆ ಮಾಡಲು ಮುಂದಾಗಿದೆ. ಈ ಹಿನ್ನೆಲೆ ಪ್ರತಿಭಟನೆ ವೇಳೆ ಸಚಿವರು, ಶಾಸಕರು, ಸಂಸದರು, ಜಿಲ್ಲಾ ಮುಖಂಡರು ಪ್ರತಿಭಟನೆಯಲ್ಲಿ ಭಾಷಣ ಮಾಡಬೇಕು ಎಂದು ರಾಜ್ಯ ಬಿಜೆಪಿ ಘಟಕ, ಬಿಜೆಪಿ ಜಿಲ್ಲಾ ಘಟಕಗಳಿಗೆ ಸೂಚನೆ ನೀಡಿದೆ. ಅಲ್ಲದೇ ಭಾಷಣದ ವೇಳೆ ಗಾಂಧಿ ಕುಟುಂಬ, ಗಾಂಧಿ ಉಪನಾಮದ ವಿಷಯ, ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಟಿಪ್ಪು ಜಯಂತಿ ಆಚರಣೆ, ರಾಮನಗರ ಕಪಾಲಬೆಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಯೇಸು ಪ್ರತಿಮೆ ಸ್ಥಾಪನೆಗೆ ಮುಂದಾಗಿದ್ದ ವಿಷಯ ಪ್ರಸ್ತಾಪಿಸಬೇಕು ಎಂದು ಸೂಚನೆ ನೀಡಿದೆ. ಹಾಗೇ ಭಾಷಣದ ಬಳಿಕ ಎಸ್ಪಿ ಕಚೇರಿಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಬೇಕು ಎಂದು ಸಂದೇಶ ರವಾನೆ ಮಾಡಿದೆ.

ಹಿಂದೂ ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂದು ಉಲ್ಲೇಖವಿದೆ: ಸತೀಶ್​ ಜಾರಕಿಹೋಳಿ

ಬೆಳಗಾವಿ: ಹಿಂದೂ ಪದಕ್ಕೆ ಇರುವ ಅರ್ಥದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ (Satish Jarkiholi) ಮತ್ತೊಮ್ಮೆ ಸ್ಪಷ್ಟನೆ ನೀಡಲು ಯತ್ನಿಸಿದರು. ತಮ್ಮ ಹೇಳಿಕೆಯು ವ್ಯಾಪಕ ವಿವಾದಕ್ಕೆ ಗ್ರಾಸವಾದ ಹಿನ್ನೆಲೆಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ವಿವರ ನೀಡಿದ ಅವರು, ನನ್ನ ಹೇಳಿಕೆಯು ತಪ್ಪು ಎಂದಾದರೆ ಕ್ಷಮೆ ಯಾಚಿಸುವುದಷ್ಟೇ ಅಲ್ಲ, ರಾಜೀನಾಮೆಯನ್ನೂ ಕೊಡುತ್ತೇನೆ ಎಂದರು. ‘ನಾನು ಅರೆಬರೆ ಓದಿದವನಲ್ಲ, 30 ವರ್ಷಗಳಿಂದ ಓದುತ್ತಲೇ ಇದ್ದೇನೆ. ಆಳವಾದ ಅಧ್ಯಯನದ ಅನುಭವದಿಂದಲೇ ನಾನು ಈ ಹೇಳಿಕೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ತಿರುಗೇಟು ನೀಡಿದರು.

ಹಿಂದೂ ಎಂಬುದು ಪರ್ಷಿಯನ್ ಭಾಷೆಯಿಂದ ಬಂದ ಶಬ್ದ. ಹಿಂದೂ ಪದದ ಬಗ್ಗೆ ಶಬ್ದಕೋಶದಲ್ಲಿ, ವಿಕಿಪಿಡಿಯಾದಲ್ಲಿ ಇರುವ ವಿವರಣೆಯನ್ನು ನಾನು ಹೇಳಿದ್ದೇನೆ. ಹಿಂದೂ ಪದದ ಬಗ್ಗೆ ಚರ್ಚೆಯಾಗಬೇಕು ಎಂದು ನಾನು ಹೇಳಿದ್ದೇನೆ. ಆದರೆ ನಾನು ಏನು ಹೇಳಿದ್ದೇನೆಯೋ ಅದರ ಬಗ್ಗೆ ಅಥವಾ ಹಿಂದೂ ಪದದ ನಿಜವಾದ ಅರ್ಥದ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಬೇರೆ ಯಾವ್ಯಾವುದೋ ವಿಷಯಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾನು ತಪ್ಪು ಹೇಳಿದ್ದೇನೆಂದು ಸಾಬೀತುಪಡಿಸಿದರೆ ಕ್ಷಮೆಯಾಚಿಸುವುದಷ್ಟೇ ಅಲ್ಲ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದರು.

ಹಿಂದೂ ಪದಕ್ಕೆ ಶಬ್ದಕೋಶದಲ್ಲಿ ಅಶ್ಲೀಲ ಎಂಬ ಅರ್ಥವಿದೆ. ಶಬ್ದಕೋಶ ಮತ್ತು ವಿಕಿಪೀಡಿಯಾದಲ್ಲಿ ಇರುವುದನ್ನೇ ನಾನು ಹೇಳಿದ್ದೇನೆ. ನನ್ನ ಹೇಳಿಕೆಯನ್ನು ಸಾರಾಸಗಟಾಗಿ ವಿರೋಧಿಸುವ ಬದಲು, ಸಮರ್ಪಕವಾಗಿ ಪರಿಶೀಲಿಸಲಿ. ಯಾವುದೇ ಧರ್ಮ, ಜಾತಿ, ಸಮಾಜದ ವಿರುದ್ಧ ನಾನು ಹೇಳಿಕೆ ನೀಡಿಲ್ಲ. ಈಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ, ಅವರಿಗೆ ಸೂಕ್ತ ಎನಿಸುವ ಸಂಸ್ಥೆಗಳಿಗೆ ತನಿಖೆ ಮಾಡಿಸಲಿ. ನನ್ನ ಜತೆ ಚರ್ಚೆಗೆ ಬಂದರೆ ನಾನೇ ಅವರಿಗೆ ಮನವರಿಕೆ ಮಾಡಿಕೊಡುವೆ. ಚರ್ಚೆಗೆ ಬಂದವರಿಗೆ ದಾಖಲೆ ಸಮೇತ ವಿವರಣೆ ನೀಡಲು ಸಿದ್ಧನಿರುವೆ ಎಂದು ಹೇಳಿದರು.

ಹಿಂದೂ ಶಬ್ದಕ್ಕೆ ಅಶ್ಲೀಲ ಎನ್ನುವ ಅರ್ಥವಿದೆ ಎಂದು ನಾನು ಹೇಳಿದ ಬಳಿಕ ನನ್ನ ಹೇಳಿಕೆಯನ್ನು ಎಲ್ಲೆಲ್ಲಿಗೋ ತೆಗೆದುಕೊಂಡು ಹೋಗಿದ್ದಾರೆ. ಮನಸ್ಸಿಗೆ ಬಂದಂತೆ ವ್ಯಾಖ್ಯಾನಿಸುತ್ತಿದ್ದಾರೆ. ಹಿಂದೂ ಶಬ್ದವು ಪರ್ಷಿಯನ್ ಭಾಷೆಯಿಂದ ಬಂದಿದ್ದು ಎಂದು ನಾನು ಹೇಳಿದ್ದೇನೆ. ಅವರು ಕೆಟ್ಟ ಶಬ್ದ ಬಳಸಿದ್ದಾರೆ ಅಂತ ನಾವು ಹೇಳಬೇಕಿತ್ತು. ಆದರೆ ಇವರು ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿದ್ದನ್ನೇ ದೊಡ್ಡದು ಮಾಡಿಕೊಂಡು ಕುಳಿತಿದ್ದಾರೆ. ಇದು ನನ್ನ ವೈಯಕ್ತಿಕ ಅಭಿಪ್ರಾಯವಲ್ಲ ಎಂದು ಸ್ಪಷ್ಟಪಡಿಸಿದರು.

ಹಿಂದೂ ಶಬ್ದದ ಬಗ್ಗೆ ಪ್ರಸ್ತಾಪಿಸಿ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆಯು ವಿವಾದಕ್ಕೀಡಾದ ನಂತರ ಕಾಂಗ್ರೆಸ್​ನ ಹಿರಿಯ ನಾಯಕರು ಚರ್ಚೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಜಾಧವ್ ನಗರದಲ್ಲಿರುವ ಕಚೇರಿಯಲ್ಲಿ ಸತೀಶ್ ಜಾರಕಿಹೊಳಿ ಮಾಧ್ಯಮಗೋಷ್ಠಿ ಕರೆದಿದ್ದರು. ಕಳೆದ ಭಾನುವಾರ (ನ 6) ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ‘ಮನೆಮನೆಗೆ ಬುದ್ಧ, ಬಸವ, ಅಂಬೇಡ್ಕರ್ ಕಾರ್ಯಕ್ರಮ’ದಲ್ಲಿ ಹಿಂದೂ ಶಬ್ದದ ಅರ್ಥದ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್