AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿರುವ ಮುಸ್ಲಿಂ ಹೆಸರಿನ ರಸ್ತೆಗಳ ಮರು ನಾಮಕರಣಕ್ಕೆ ಬಿಜೆಪಿ ಸಿದ್ಧತೆ

ಬೆಂಗಳೂರಿನಲ್ಲಿರುವ ಟಿಪ್ಪು ರಸ್ತೆ, ಮಸೀದಿ ರೋಡ್ ಹೀಗೆ ನಾನಾ ಹೆಸರಿನ ರಸ್ತೆಗಳಿಗೆ ಹಿಂದೂ ದೇವರ ಅಥವಾ ಬೇರೆ ಹೆಸರಿಡಲು ಬೆಂಗಳೂರಿನ ಬಿಜೆಪಿ ಶಾಸಕರು ಹಾಗೂ ಜನ ಪ್ರತಿನಿಧಿಗಳು ತಯಾರಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿರುವ ಮುಸ್ಲಿಂ ಹೆಸರಿನ ರಸ್ತೆಗಳ ಮರು ನಾಮಕರಣಕ್ಕೆ ಬಿಜೆಪಿ ಸಿದ್ಧತೆ
ಬಿಜೆಪಿ
TV9 Web
| Updated By: ಆಯೇಷಾ ಬಾನು|

Updated on: Apr 12, 2022 | 8:23 AM

Share

ರಾಜ್ಯದಲ್ಲಿ ಹಿಜಾಬ್, ದೇವಸ್ಥಾನಗಳ ಬಳಿ ಹಿಂದೂಯೇತರ ವ್ಯಾಪಾರಕ್ಕೆ ನಿರ್ಬಂಧ, ಹಲಾಲ್ ಹೀಗೆ ಒಂದಲ್ಲ ಒಂದು ವಿಚಾರಕ್ಕೆ ಹಿಂದೂ ಮುಸ್ಲಿಮರ ನಡುವೆ ಸಂಘರ್ಷ ಉಂಟಾಗ್ತಾನೆ ಇದೆ. ಈಗ ಬೆಂಗಳೂರಿನಲ್ಲಿ ಹೊಸ ವಿವಾದ ಶುರುವಾಗ್ತಿದೆ ಬೆಂಗಳೂರಿನಲ್ಲಿರೋ ರಸ್ತೆ, ಏರಿಯಾ, ಪಾರ್ಕ್ಗಳಿಗೆ ಇರುವ ಮುಸ್ಲಿಮರ ಹೆಸರನ್ನ ಬದಲಾಯಿಸಲು ಸಿದ್ಧತೆ ಶುರುವಾಗಿದೆ. ಬೆಂಗಳೂರಿನಲ್ಲಿರುವ ಮುಸ್ಲಿಮರ ಹೆಸರಿನ ರಸ್ತೆಗಳಿಗೆ ಮರು ನಾಮಕರಣ? ಮಾಡಲು ಚಿಂತನೆ ನಡೆದಿದೆ.

ಬೆಂಗಳೂರಿನಲ್ಲಿರುವ ಟಿಪ್ಪು ರಸ್ತೆ, ಮಸೀದಿ ರೋಡ್ ಹೀಗೆ ನಾನಾ ಹೆಸರಿನ ರಸ್ತೆಗಳಿಗೆ ಹಿಂದೂ ದೇವರ ಅಥವಾ ಬೇರೆ ಹೆಸರಿಡಲು ಬೆಂಗಳೂರಿನ ಬಿಜೆಪಿ ಶಾಸಕರು ಹಾಗೂ ಜನ ಪ್ರತಿನಿಧಿಗಳು ತಯಾರಿ ನಡೆಸಿದ್ದಾರೆ. ಕಾಂಗ್ರೆಸ್ ಆಳ್ವಿಕೆಯಲ್ಲಿ ಕೆಲ ಪಾರ್ಕ್, ರಸ್ತೆ, ಸರ್ಕಲ್, ಬೀದಿಗಳಿಗೆ ಮುಸ್ಲಿಂ ಹೆಸರು ನಾಮಕರಣ ಮಾಡಲಾಗಿತ್ತು. ಈಗ ಅದನ್ನ ಬದಲಾಯಿಸಿ ಹಿಂದೂ ದೇವರ ಅಥವಾ ಬೇರೆ ಹೆಸರಿಡಲು ತಯಾರಿ ನಡೆದಿದೆ. ಹೀಗಾಗಿ ಬಿಜೆಪಿ ನಾಯಕರು ವಲಯವಾರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳಿಗೆ ಆತಂರಿಕವಾಗಿ ಮಾಹಿತಿ ರವಾನಿಸಲಾಗಿದ್ದು ಶೀಘ್ರದಲ್ಲೇ ಬಿಜೆಪಿ ನಾಯಕರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ಮುಖ್ಯ ಹಾಗೂ ಅಡ್ಡ ರಸ್ತೆಗಳು ಸೇರಿ ಅಂದಾಜು ಒಂದು ಸಾವಿರ ರಸ್ತೆಗಳಿಗೆ ಮರುನಾಮಕರಣಕ್ಕೆ‌ ಸಿದ್ಧತೆ ನಡೆದಿದೆ. ಟಿಪ್ಪು ಸುಲ್ತಾನ್ ಪ್ಯಾಲೇಸ್ ರೋಡ್, (ಮೆಕ್ರಿ ಸರ್ಕಲ್)ಇನಾಯುತೂಲ್ಲಾ ಮೇಕ್ರಿ, ಅಂಜನಾಪುರ ಮುಖ್ಯರಸ್ತೆಯಲ್ಲಿರೋ ಟಿಪ್ಪು ಸರ್ಕಲ್, ವಿದ್ಯಾರಣ್ಯಪುರದ ಮೊಹಮ್ಮದ್ ಸಾಬ್ ಪಾಳ್ಯ, ಜಾಮೀಯಾ‌ ಮಸೀದಿ ರೋಡ್, ಮುಬಾರಕ್ ರೋಡ್, ಶಾಂತಿನಗರದ ಬಿಲಾಲ್ ನಗರ, ಆರ್ ಟಿ ನಗರದ ಸುಲ್ತಾನ್ ಪಾಳ್ಯ, ಬನಶಂಕರಿ ಯಾಬರ್ ನಗರ, ಗುರಪ್ಪನಪಾಳ್ಯ ಬಿಸ್ಮಿಲ್ಲಾ ನಗರ, ಇಲಿಯಾಸ್ ನಗರ, ಕುಮಾರಸ್ವಾಮಿ ಲೇಔಟ್, ಮೈಸೂರು ರಸ್ತೆಯ ಟಿಪ್ಪು ನಗರ ಹೀಗೆ ನಾನಾ ಹೆಸರಿರುವ ರಸ್ತೆಗಳಿಗೆ ಮರು ನಾಮಕರಣ ಮಾಡಲು ತಯಾರಿ ನಡೆದಿದೆ.

ಹಿಂದೆ ಪಾದರಾಯನಪುರದಲ್ಲಿ ರಸ್ತೆಗಳಿಗೆ ಕುಟುಂಬದ ಹೆಸರಿಡಲು ಕಾರ್ಪೋರೇಟರ್ ಮುಂದಾಗಿದ್ದರು. ಇದಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಈಗ ಇದೇ ಮಾದರಿಯಲ್ಲಿ ಮರುನಾಮಕರಣ ವಾರ್ ಶುರುವಾಗಿದೆ. ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿ ರಸ್ತೆಗಳಿಗೆ ಹೆಸರಿಡಲು ಬಿಜೆಪಿ ಹೊರಟಿದೆ. ಇದಕ್ಕೆ ಹಿಂದೂಪರ ಸಂಘಟನೆಗಳು ಸಾಥ್ ನೀಡುತ್ತಿವೆ.

ಇದನ್ನೂ ಓದಿ: ಬೆಳಗಾವಿ ಬಿಜೆಪಿ ಒಳ ಜಗಳ ಶಮನಕ್ಕೆ ಮುಂದಾದ ಬಿಎಸ್ ಯಡಿಯೂರಪ್ಪ; ಎರಡೂ ಬಣಗಳ ಜೊತೆ ಸಭೆಗೆ ಸಿದ್ಧತೆ

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮಗಳ ಚರ್ಚೆ ಮುಂದುವರಿಕೆ: ಮೋದಿ ಜೊತೆಗಿನ ಮಾತುಕತೆಯಲ್ಲಿ ಬೈಡೆನ್ ಪುನರುಚ್ಚಾರ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?