AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಜನ್ಮ ದಿನಕ್ಕೆ ಬಿಜೆಪಿ ಭರ್ಜರಿ ಸಿದ್ದತೆ; ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ

ಅಮೃತ ಸರೋವರ ಯೋಜನೆಯಡಿ ಪ್ರತಿ ತಾಲೂಕಲ್ಲಿ ಕೆರೆ ಅಭಿವೃದ್ಧಿ, ಜಲವೇ ಜೀವನ ಮಂತ್ರದಡಿ ಮಳೆ ನೀರಿನ ಶೇಖರಣೆ ಕುರಿತು ಜನಜಾಗೃತಿ ಮೂಡಿಸಲು ಜೆ.ಪಿ.ನಡ್ಡಾ ಸೂಚನೆ ನೀಡಿದ್ದಾರೆ.

ಪ್ರಧಾನಿ ಮೋದಿ ಜನ್ಮ ದಿನಕ್ಕೆ ಬಿಜೆಪಿ ಭರ್ಜರಿ ಸಿದ್ದತೆ; ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ
ಜೆಪಿ ನಡ್ಡಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 15, 2022 | 1:52 PM

ಶಿವಮೊಗ್ಗ: ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಜನ್ಮದಿನ(Narendra Modi Birthday) ಹಿನ್ನೆಲೆ ಅಂದಿನಿಂದ ಗಾಂಧೀಜಿ ಜನ್ಮ ದಿನವಾದ(Gandhi Jayanthi) ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ ಆಯೋಜನೆ ಮಾಡಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ(Jp Nadda) ಸೂಚನೆ ನೀಡಿದ್ದಾರೆ ಎಂದು ಶಿವಮೊಗ್ಗದಲ್ಲಿ ಸಂಸದ ಬಿವೈ ರಾಘವೇಂದ್ರ ತಿಳಿಸಿದರು.

ಈ ಬಗ್ಗೆ ಮಾತನಾಡಿದ ಬಿವೈ ರಾಘವೇಂದ್ರ, 15 ದಿನಗಳ ಕಾಲ ಸೇವಾ ಚಟುವಟಿಕೆಗಳು ರಾಷ್ಟ್ರಾದ್ಯಂತ ನಡೆಯಲಿದೆ. ಕೇಂದ್ರ ಸರ್ಕಾರದ ಸಾಧನೆ ಕುರಿತು ಪ್ರದರ್ಶಿನಿ ಆಯೋಜನೆ, ಕರಪತ್ರ ವಿತರಣೆ ನಡೆಯಲಿದೆ. ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಆಯೋಜನೆ ಮಾಡಲಾಗಿದೆ. ಪ್ರತಿ ಬೂತ್ ನಲ್ಲಿ ವನಮಹೋತ್ಸವ, ಸ್ವಚ್ಛತಾ ಅಭಿಯಾನ ಸೇರಿದಂತೆ 2030ರೊಳಗೆ ಕ್ಷಯ ನಿರ್ಮೂಲನೆ ಗುರಿ ಹಿನ್ನೆಲೆ ಕ್ಷಯರೋಗಿಗಳ ಪಟ್ಟಿಗೆ ರಾಷ್ಟ್ರಾಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದರು.

ಅಮೃತ ಸರೋವರ ಯೋಜನೆಯಡಿ ಪ್ರತಿ ತಾಲೂಕಲ್ಲಿ ಕೆರೆ ಅಭಿವೃದ್ಧಿ, ಜಲವೇ ಜೀವನ ಮಂತ್ರದಡಿ ಮಳೆ ನೀರಿನ ಶೇಖರಣೆ ಕುರಿತು ಜನಜಾಗೃತಿ ಮೂಡಿಸಲು ಜೆ.ಪಿ.ನಡ್ಡಾ ಸೂಚನೆ ನೀಡಿದ್ದಾರೆ. ಸೆ.25ರಂದು ಪಂಡಿತ್ ದೀನದಯಾಳ ಜನ್ಮದಿನವನ್ನು ಬೂತ್ ಮಟ್ಟದಲ್ಲಿ ಆಚರಣೆ ಮಾಡಬೇಕು. ಗಾಂಧಿ ಜಯಂತಿಯಂದು ಆತ್ಮನಿರ್ಭರ ಕಾರ್ಯಕ್ರಮದಡಿ ಪ್ರತಿ ತಾಲೂಕಲ್ಲಿ ಖಾದಿ ವ್ಯಾಪಾರಸ್ಥರನ್ನು ಗುರುತಿಸಿ ಉತ್ತೇಜನ ನೀಡಬೇಕು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ವಿಕಲಚೇತನರಿಗೆ ಸಲಕರಣೆ ನೀಡಲು ಕಳೆದ ವರ್ಷ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿತ್ತು. ಅದರಂತೆ ಜ. 22ರಂದು ಅಸೆಸ್ಮೆಂಟ್ ಶಿಬಿರ ನಡೆಸಿ, 1.20 ವಿಕಲಚೇತನರನ್ನು ಗುರುತಿಸಲಾಗಿತ್ತು. ಅವರಿಗೆ ಮೋದಿ ಜನ್ಮದಿನದಂದು ಕುವೆಂಪು ರಂಗಮಂದಿರದಲ್ಲಿ ಉಚಿತವಾಗಿ ಸಲಕರಣೆ ವಿತರಣೆ ಮಾಡಲಾಗುತ್ತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:05 pm, Thu, 15 September 22

ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್