AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಜನ್ಮ ದಿನಕ್ಕೆ ಬಿಜೆಪಿ ಭರ್ಜರಿ ಸಿದ್ದತೆ; ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ

ಅಮೃತ ಸರೋವರ ಯೋಜನೆಯಡಿ ಪ್ರತಿ ತಾಲೂಕಲ್ಲಿ ಕೆರೆ ಅಭಿವೃದ್ಧಿ, ಜಲವೇ ಜೀವನ ಮಂತ್ರದಡಿ ಮಳೆ ನೀರಿನ ಶೇಖರಣೆ ಕುರಿತು ಜನಜಾಗೃತಿ ಮೂಡಿಸಲು ಜೆ.ಪಿ.ನಡ್ಡಾ ಸೂಚನೆ ನೀಡಿದ್ದಾರೆ.

ಪ್ರಧಾನಿ ಮೋದಿ ಜನ್ಮ ದಿನಕ್ಕೆ ಬಿಜೆಪಿ ಭರ್ಜರಿ ಸಿದ್ದತೆ; ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ
ಜೆಪಿ ನಡ್ಡಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Sep 15, 2022 | 1:52 PM

Share

ಶಿವಮೊಗ್ಗ: ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಜನ್ಮದಿನ(Narendra Modi Birthday) ಹಿನ್ನೆಲೆ ಅಂದಿನಿಂದ ಗಾಂಧೀಜಿ ಜನ್ಮ ದಿನವಾದ(Gandhi Jayanthi) ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ಕಾರ್ಯಕ್ರಮ ಆಯೋಜನೆ ಮಾಡಲು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ(Jp Nadda) ಸೂಚನೆ ನೀಡಿದ್ದಾರೆ ಎಂದು ಶಿವಮೊಗ್ಗದಲ್ಲಿ ಸಂಸದ ಬಿವೈ ರಾಘವೇಂದ್ರ ತಿಳಿಸಿದರು.

ಈ ಬಗ್ಗೆ ಮಾತನಾಡಿದ ಬಿವೈ ರಾಘವೇಂದ್ರ, 15 ದಿನಗಳ ಕಾಲ ಸೇವಾ ಚಟುವಟಿಕೆಗಳು ರಾಷ್ಟ್ರಾದ್ಯಂತ ನಡೆಯಲಿದೆ. ಕೇಂದ್ರ ಸರ್ಕಾರದ ಸಾಧನೆ ಕುರಿತು ಪ್ರದರ್ಶಿನಿ ಆಯೋಜನೆ, ಕರಪತ್ರ ವಿತರಣೆ ನಡೆಯಲಿದೆ. ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಆಯೋಜನೆ ಮಾಡಲಾಗಿದೆ. ಪ್ರತಿ ಬೂತ್ ನಲ್ಲಿ ವನಮಹೋತ್ಸವ, ಸ್ವಚ್ಛತಾ ಅಭಿಯಾನ ಸೇರಿದಂತೆ 2030ರೊಳಗೆ ಕ್ಷಯ ನಿರ್ಮೂಲನೆ ಗುರಿ ಹಿನ್ನೆಲೆ ಕ್ಷಯರೋಗಿಗಳ ಪಟ್ಟಿಗೆ ರಾಷ್ಟ್ರಾಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದರು.

ಅಮೃತ ಸರೋವರ ಯೋಜನೆಯಡಿ ಪ್ರತಿ ತಾಲೂಕಲ್ಲಿ ಕೆರೆ ಅಭಿವೃದ್ಧಿ, ಜಲವೇ ಜೀವನ ಮಂತ್ರದಡಿ ಮಳೆ ನೀರಿನ ಶೇಖರಣೆ ಕುರಿತು ಜನಜಾಗೃತಿ ಮೂಡಿಸಲು ಜೆ.ಪಿ.ನಡ್ಡಾ ಸೂಚನೆ ನೀಡಿದ್ದಾರೆ. ಸೆ.25ರಂದು ಪಂಡಿತ್ ದೀನದಯಾಳ ಜನ್ಮದಿನವನ್ನು ಬೂತ್ ಮಟ್ಟದಲ್ಲಿ ಆಚರಣೆ ಮಾಡಬೇಕು. ಗಾಂಧಿ ಜಯಂತಿಯಂದು ಆತ್ಮನಿರ್ಭರ ಕಾರ್ಯಕ್ರಮದಡಿ ಪ್ರತಿ ತಾಲೂಕಲ್ಲಿ ಖಾದಿ ವ್ಯಾಪಾರಸ್ಥರನ್ನು ಗುರುತಿಸಿ ಉತ್ತೇಜನ ನೀಡಬೇಕು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ವಿಕಲಚೇತನರಿಗೆ ಸಲಕರಣೆ ನೀಡಲು ಕಳೆದ ವರ್ಷ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿತ್ತು. ಅದರಂತೆ ಜ. 22ರಂದು ಅಸೆಸ್ಮೆಂಟ್ ಶಿಬಿರ ನಡೆಸಿ, 1.20 ವಿಕಲಚೇತನರನ್ನು ಗುರುತಿಸಲಾಗಿತ್ತು. ಅವರಿಗೆ ಮೋದಿ ಜನ್ಮದಿನದಂದು ಕುವೆಂಪು ರಂಗಮಂದಿರದಲ್ಲಿ ಉಚಿತವಾಗಿ ಸಲಕರಣೆ ವಿತರಣೆ ಮಾಡಲಾಗುತ್ತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:05 pm, Thu, 15 September 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!