AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಚುನಾವಣೆಗೆ ಬಿಜೆಪಿಯಿಂದ ಸಿದ್ಧತೆ; ಜನವರಿ 25 ರಿಂದ 3 ದಿನಗಳ ಕಾಲ ಸಿಎಂ ಬಸವರಾಜ ಬೊಮ್ಮಾಯಿ ಸಭೆ

ಇದೇ ಭಾನುವಾರ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಬೆಂಗಳೂರಿನ ಮೂರು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಉಸ್ತುವಾರಿಗಳು ಮತ್ತು ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ನಿವಾಸದಲ್ಲಿ ಭಾನುವಾರ ಸಭೆ ನಡೆಯಲಿದೆ.

ಬಿಬಿಎಂಪಿ ಚುನಾವಣೆಗೆ ಬಿಜೆಪಿಯಿಂದ ಸಿದ್ಧತೆ; ಜನವರಿ 25 ರಿಂದ 3 ದಿನಗಳ ಕಾಲ ಸಿಎಂ ಬಸವರಾಜ ಬೊಮ್ಮಾಯಿ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jan 20, 2022 | 6:10 PM

Share

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ (BBMP Election) ಬಿಜೆಪಿ ಸಿದ್ಧತೆ ಮುಂದುವರಿಸಿದ್ದು, ಈ ಕುರಿತು ಇನ್ನಷ್ಟು ಮಾಹಿತಿ ಪಡೆಯುವ ಸಲುವಾಗಿ ಜನವರಿ 25 ರಿಂದ 3 ದಿನಗಳ ಕಾಲ ಅಂದರೆ ಜನವರಿ 25, 26, 27 ರಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸಭೆ ನಡೆಸಲಿದ್ದಾರೆ. ಸಿಎಂ ಜತೆಗಿನ ಈ ಸಭೆಯ ಚರ್ಚೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ರಾಜ್ಯ ಬಿಜೆಪಿ (BJP) ಕಚೇರಿ ಜಗನ್ನಾಥ ಭವನದಲ್ಲಿ ಈ ಸಭೆ ನಡೆಯಲಿದೆ. ಬೆಂಗಳೂರಿನ ಮೂರು ಜಿಲ್ಲೆಗಳ ಪದಾಧಿಕಾರಿಗಳ ಜೊತೆ ಮೂರು ದಿನಗಳ ಕಾಲ ಸಿಎಂ ಸಭೆ ನಡೆಸಲಿದ್ದಾರೆ. ಜನವರಿ 25 ರಂದು ಬೆಂಗಳೂರು ಉತ್ತರ, 26 ರಂದು ಬೆಂಗಳೂರು ಕೇಂದ್ರ ಮತ್ತು 27 ರಂದು ಬೆಂಗಳೂರು ದಕ್ಷಿಣ ಜಿಲ್ಲೆಗಳ ಸಭೆ ನಡೆಯಲಿದೆ.

ಇದೇ ಭಾನುವಾರ ಸಿಎಂ ಜೊತೆ ಬೆಂಗಳೂರಿನ ಮೂರು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಉಸ್ತುವಾರಿಗಳು ಮತ್ತು ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ನಿವಾಸದಲ್ಲಿ ಭಾನುವಾರ ಸಭೆ ನಡೆಯಲಿದೆ.

ವೀಕೆಂಡ್ ಕರ್ಫ್ಯೂನಿಂದ ಸೊಂಕು ನಿಯಂತ್ರಣಕ್ಕೆ ಸಹಾಯ ಆಗಿದೆ: ಆರೋಗ್ಯ ಇಲಾಖೆ ಆಯುಕ್ತ ರಂದೀಪ್

ಜನವರಿ ಕೊನೆವಾರ ಅಥವಾ ಫ್ರೆಬ್ರವರಿ ಮೊದಲ ವಾರದಲ್ಲಿ ಕೊರೊನಾ ಪೀಕ್​ಗೆ ಹೋಗುತ್ತದೆ ಎಂದು ಹೇಳಲಾಗುತ್ತಿದೆ ಎಂದು ಹೇಳಿದ್ದೇವು. ವೀಕೆಂಡ್ ಕರ್ಫ್ಯೂನಿಂದ ಸೊಂಕು ನಿಯಂತ್ರಣಕ್ಕೆ ಸಹಾಯ ಆಗಿದೆ. ಈಗ ಅದರ ಕಾಲ ಬದಲಾಗಿದೆ. ಈಗ ಇನ್ನೂ 45 ಸಾವಿರದಲ್ಲೇ ಕೇಸ್ ಇದೆ. ಇನ್ನೂ ಪೀಕ್​ಗೆ ಹೋಗಿಲ್ಲ. ಐಐಎಸ್​ಸಿ ಮಾಡೆಲಿಂಗ್ ಅವರನ್ನು ಕೇಳುತ್ತಾ ಇದ್ದೇವೆ.  ವೀಕೆಂಡ್ ಕರ್ಫ್ಯೂನಿಂದ ಕೇಸ್ ಹತೋಟಿಗೆ ಬಂತಾ ಎಂದು ಕೇಳಿದ್ದೇವೆ. ಐಐಎಸ್​ಸಿ ಅವರು ಕೂಡ ಅಧ್ಯಯನ ಮಾಡಿದ್ದಾರೆ. ನಾಳೆ ಸಿಎಂ ಸಭೆಯಲ್ಲಿ ಈ ವರದಿ ಕೂಡ ಚರ್ಚೆ ಮಾಡುತ್ತೇವೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಹೇಳಿದ್ದಾರೆ.

ಕೊರೊನಾ ಪ್ರಕರಣ ಏರಿಕೆ ಬಗ್ಗೆ ಸಿಎಂ ಬೊಮ್ಮಾಯಿಗೆ ಮಾಹಿತಿ ನೀಡಲಾಗಿದೆ. ನಾಳಿನ ಸಭೆಯಲ್ಲಿ ಸಿಎಂ ಬೊಮ್ಮಾಯಿಗೆ ಮಾಹಿತಿ ನೀಡುತ್ತೇವೆ. ರಾಜ್ಯದಲ್ಲಿ ಈಗ ಹೆಚ್ಚು ಕೊವಿಡ್ ಪಾಸಿಟಿವ್ ಪ್ರಕರಣ ಬರುತ್ತಿವೆ. ರೋಗ ಲಕ್ಷಣಗಳು ಇಲ್ಲದಿದ್ದರೂ ಕೇಸ್ ಹೆಚ್ಚು ಬರುತ್ತಿವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಇದನ್ನೂ ಓದಿ: ಕುಶಾಲನಗರ ಖಾಸಗಿ ಶಾಲೆಯ 26 ವಿದ್ಯಾರ್ಥಿಗಳಿಗೆ ಕೊರೊನಾ ದೃಢ; ಒಮಿಕ್ರಾನ್ ಆತಂಕ ಹಿನ್ನೆಲೆ ಭಾನುವಾರ ಸಿಎಂ ಸಭೆ

ಸಿಸಿಟಿವಿಯಲ್ಲಿ ದಾಖಲು: ಮನೆಯಲ್ಲಿ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಸಿಬಿ ದಾಳಿ, ಆನೇಕಲ್ ಪುರಸಭೆ ಅಧಿಕಾರಿ ಸೇರಿ ಮೂವರ ಸೆರೆ

Published On - 3:39 pm, Thu, 20 January 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​