AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anti Conversion Bill: ವಿಧಾನ ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಿದ್ಧತೆ

ಮತಾಂತರ ನಿಷೇಧ ವಿಧೇಯಕಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ.

Anti Conversion Bill: ವಿಧಾನ ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಿದ್ಧತೆ
ಮತಾಂತರ ನಿಷೇಧ ಕಾನೂನು ಪರ-ವಿರೋಧದ ಚರ್ಚೆಗಳು ಮತ್ತೊಮ್ಮೆ ಗರಿಗೆದರಿವೆ
TV9 Web
| Edited By: |

Updated on: Sep 15, 2022 | 7:30 AM

Share

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ಗುರುವಾರ (ಸೆ 15) ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಆಡಳಿತಾರೂಢ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಮಂಡನೆಗೆ ಪೂರ್ವಭಾವಿಯಾಗಿ ನಿನ್ನೆ (ಸೆ 14) ನಗರದ ಚಾಮರಾಜಪೇಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (Rashtriya Swayamsevak Sangh – RSS) ಕಚೇರಿಯಲ್ಲಿ ವಿಧಾನ ಪರಿಷತ್​ನ ಬಿಜೆಪಿ ಸದಸ್ಯರ ಸಭೆ ನಡೆಯಿತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವಕೃಪಾದಲ್ಲಿ ವಿಧೇಯಕ ಮಂಡನೆ ವೇಳೆ ಪ್ರಬಲವಾಗಿ ಸಮರ್ಥಿಸಿಕೊಳ್ಳುವ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ವಿಧಾನ ಪರಿಷತ್​ ಬಿಜೆಪಿ ಸದಸ್ಯರಿಗೆ ಈ ಸಂಬಂಧ ಆರ್​ಎಸ್​ಎಸ್​ ನಿರ್ದೇಶನ ನೀಡಿದೆ. ವಿಧಾನ ಪರಿಷತ್​ನಲ್ಲಿ ಇಂದು ಪ್ರಶೋತ್ತರ ಕಲಾಪ ನಂತರ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ವಿಧೇಯಕವನ್ನು ಮಂಡಿಸಲಿದ್ದಾರೆ.

ಆರ್​ಎಸ್​ಎಸ್​ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್​ನ ಸರ್ಕಾರಿ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ಪರಿಷತ್​ ಸದಸ್ಯರಾದ ಎನ್.ರವಿಕುಮಾರ್, ತುಳಸಿ ಮುನಿರಾಜುಗೌಡ, ಕೆ.ಎಸ್.ನವೀನ್, ಪ್ರತಾಪಸಿಂಹ ನಾಯಕ, ಎಂ.ಕೆ.ಪ್ರಾಣೇಶ್​ ಉಪಸ್ಥಿತರಿದ್ದರು.

ಮತಾಂತರ ನಿಷೇಧ ವಿಧೇಯಕಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ಆದರೆ ವಿಧಾನ ಪರಿಷತ್​ನಲ್ಲಿ ಈವರೆಗೆ ಮಸೂದೆಯನ್ನು ಸರ್ಕಾರ ಮಂಡಿಸಿಲ್ಲ. ಮಸೂದೆ ಮಂಡಿಸುವ ತಡವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿತ್ತು. ಪ್ರಸ್ತುತ ವಿಧಾನ ಪರಿಷತ್​ನಲ್ಲಿ ಬಿಜೆಪಿಯ 41 ಸದಸ್ಯರಿದ್ದಾರೆ. ಕಾಂಗ್ರೆಸ್​ನ 26 ಮತ್ತು ಜೆಡಿಎಸ್​ನ 8 ಸದಸ್ಯರಿದ್ದಾರೆ. ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಿರುವುದರಿಂದ ಮಸೂದೆಗೆ ಅಂಗೀಕಾರ ಪಡೆದುಕೊಳ್ಳುವ ಉತ್ಸಾಹ ಬಿಜೆಪಿಗೆ ಬಂದಿದೆ.

ಮತಾಂತರ ನಿಷೇಧ ಕಾಯ್ದೆಯ ಮುಖ್ಯಾಂಶಗಳು

1) ಮತಾಂತರ ಅಗಬಯಸುವ ವ್ಯಕ್ತಿ 60 ದಿನಗಳ ಮೊದಲು ಫಾರ್ಮ್ 1 ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿ ಬಳಿ ಮಾಹಿತಿ ನೀಡತಕ್ಕದ್ದು.

2) ಮತಾಂತರ ಮಾಡಿಸುವ ವ್ಯಕ್ತಿಯೂ ಕೂಡ ಒಂದು ತಿಂಗಳ ಮೊದಲು ಈಗಾಗಲೇ ಫಾರ್ಮ್ 2 ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಮಾಹಿತಿ ನೀಡತಕ್ಕದ್ದು

3) ಮತಾಂತರವಾದ ಒಂದು ತಿಂಗಳ ಬಳಿಕ ಡಿಕ್ಲರೇಷನ್ ಫಾರ್ಮ್ ಅಥವಾ ಘೋಷಣಾಪತ್ರವನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಭರ್ತಿ ಮಾಡಿ ನೀಡತಕ್ಕದ್ದು

4) ಡಿಕ್ಲರೇಷನ್ ಮಾಡಿದ 21 ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ಗುರುತು ನೀಡತಕ್ಕದ್ದು

5) ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೊತ್ತರ ಘಟನೆಯ ಸಂಪೂರ್ಣ ಘಟನೆಯನ್ನು ದಾಖಲಿಸತಕ್ಕದ್ದು

6) ತಕರಾರುಗಳಿದ್ದಲ್ಲಿ ತಕರಾರು ಎತ್ತಿದ ವ್ಯಕ್ತಿ ಹಾಗೂ ತಕರಾರಿನ ಸ್ವರೂಪವನ್ನ ದಾಖಲಿಸತಕ್ಕದ್ದು

7) ಮತಾಂತರ ಹೊಂದಿದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡತಕ್ಕದ್ದು

8) ತಕರಾರುಗಳಿದ್ದ ಪಕ್ಷದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಬಂಧ ಪಟ್ಟ ಇಲಾಖೆಗಳಾದ ಕಂದಾಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸೇರಿದಂತೆ ಇತರ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡತಕ್ಕದ್ದು

9) ಮ್ಯಾಜಿಸ್ಟ್ರೇಟ್​‌ರಿಂದ ಮಾಹಿತಿ ಸ್ವಕರಿಸಿದ ಬಳಿಕ ಸಂಬಂಧಪಟ್ಟ ಇಲಾಖೆ ಮತಾಂತರ ಹೊಂದಿದ ವ್ಯಕ್ತಿಯ ಸಾಮಾಜಿಕ ಸ್ಥಾನಮಾನ ಹಾಗೂ ಸರ್ಕಾರದಿಂದ ಸಿಗುವ ಆರ್ಥಿಕ ಲಾಭಗಳ ಬಗ್ಗೆ ಸೂಕ್ತ ಕ್ರಮ ವಹಿಸುವುದು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ