AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ರಾಜ್ಯದಲ್ಲಿ ವಿದ್ಯುತ್ ದುರ್ಬಳಕೆಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ -ಸಿಎಂ ಸಿದ್ದರಾಮಯ್ಯ

ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ ವಿದ್ಯುತ್ ದುರ್ಬಳಕೆ ಮತ್ತು ದುಂದುವೆಚ್ಚಕ್ಕೆ ಪ್ರಚೋದನೆ ನೀಡುತ್ತಿದೆ. ಇದು ಜನವಿರೋಧಿ ನಡೆ. ರಾಜ್ಯದ ಪ್ರಜ್ಞಾವಂತರು ಇದಕ್ಕೆ ಮಣಿಯುವುದಿಲ್ಲ ಎಂಬ ಭರವಸೆ ನಮಗಿದೆ ಎಂದ ಸಿದ್ದರಾಮಯ್ಯ.

Siddaramaiah: ರಾಜ್ಯದಲ್ಲಿ ವಿದ್ಯುತ್ ದುರ್ಬಳಕೆಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ -ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಆಯೇಷಾ ಬಾನು
|

Updated on: Jun 06, 2023 | 3:04 PM

Share

ಬೆಂಗಳೂರು: 200 ಯೂನಿಟ್‌ವರೆಗಿನ ಉಚಿತ ವಿದ್ಯುತ್‌ ಯೋಜನೆಯ(Gruha Jyothi Scheme) ದುರುಪಯೋಗಕ್ಕೆ, ವಿದ್ಯುತ್ ದುಂದುವೆಚ್ಚಕ್ಕೆ ಬಿಜೆಪಿ(BJP) ಪ್ರಚೋದನೆ ನೀಡುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಆರೋಪಿಸಿದ್ದಾರೆ. ಜೂನ್ 5ರ ಸೋಮವಾರ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದ ಸಿಎಂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವೇಳೆ ಸಿದ್ದರಾಮಯ್ಯ ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ ಎನ್ನುವ ಮೂಲಕ ಪ್ರಕೃತಿ ವಿನಾಶವನ್ನು ಮಾನವನ ನಾಶಕ್ಕೆ ಹೋಲಿಸಿದರು. ಜನರನ್ನುದ್ದೇಶಿಸಿ ಮಾತನಾಡಿದ ಅವರು, ‘ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ, ಪ್ರಕೃತಿ ವಿನಾಶವೇ ನಮ್ಮ ವಿನಾಶ, ಹಾಗಾಗಿ ಪ್ರಕೃತಿಯೊಂದಿಗೆ ಬೆಳೆದು ಬದುಕಬೇಕು’ ಎಂದರು.

ಸಂಕಷ್ಟದಲ್ಲಿರುವ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಜನರ ನೆರವಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಒಂದು ವರ್ಷದಲ್ಲಿ ಸರಾಸರಿ ಬಳಕೆಗಿಂತ ಶೇ.10ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡಿದ್ದೇವೆ. ಇದನ್ನು ಒಪ್ಪಿಕೊಂಡು ರಾಜ್ಯದ ಜನರು ಸ್ವಾಗತಿಸಿದ್ದಾರೆ.

ಇದನ್ನೂ ಓದಿ: World Environment Day: ಸೆಂಟ್ರಲ್ ಕಾಲೇಜಿನಲ್ಲಿ ಪರಿಸರ ದಿನ ಆಚರಿಸಿದ ಸಿಎಂ, ಡಿಸಿಎಂ

ಆದರೆ ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ ವಿದ್ಯುತ್ ದುರ್ಬಳಕೆ ಮತ್ತು ದುಂದುವೆಚ್ಚಕ್ಕೆ ಪ್ರಚೋದನೆ ನೀಡುತ್ತಿದೆ. ಇದು ಜನವಿರೋಧಿ ನಡೆ. ರಾಜ್ಯದ ಪ್ರಜ್ಞಾವಂತರು ಇದಕ್ಕೆ ಮಣಿಯುವುದಿಲ್ಲ ಎಂಬ ಭರವಸೆ ನಮಗಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಮನೆಗಳಿಗೆ (ಗೃಹ ಜ್ಯೋತಿ) 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ ಎಂದರು.

ಪರಿಸರ ಸಂರಕ್ಷಣೆ, ಬೆಳೆಸುವುದು ಮತ್ತು ಅರಣ್ಯ ಬೆಳೆಸುವುದು ಅರಣ್ಯ ಇಲಾಖೆಯ ಕರ್ತವ್ಯ ಮಾತ್ರವಲ್ಲದೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರಕೃತಿಯ ಸದುಪಯೋಗ ಪಡೆಯುತ್ತಿರುವ ಪ್ರತಿಯೊಬ್ಬರಿಗೂ ಪ್ರಕೃತಿಯನ್ನು ಉಳಿಸುವ ಹೊಣೆಗಾರಿಕೆ ಇದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!