AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಂಚೂಣಿ ನಾಯಕರೇ ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದಾರೆ; ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ -ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಕಾಂಗ್ರೆಸ್ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವ ಫೋಟೋಗಳ ಸಮೇತ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ಮುಂಚೂಣಿ ನಾಯಕರೇ ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದಾರೆ; ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ -ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 04, 2022 | 2:25 PM

Share

ಬೆಂಗಳೂರು: ರಕ್ತ ಹರಿಸಿದವರೆಲ್ಲ ಕೇಸರಿ ಶಾಲು ಹಾಕಿಕೊಳ್ಳಲು ಮುಗಿಬೀಳ್ತಿದ್ದಾರೆ. ಇದರ ಜೊತೆಗೆ ರಾಜಕೀಯ ನಾಯಕರು ರೌಡಿಶೀಟರ್​ಗಳೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಸದ್ಯ ಕಾಂಗ್ರೆಸ್-ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವ ಫೋಟೋಗಳ ಸಮೇತ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಪಕ್ಷದ ತುಂಬಾ ಗೂಂಡಾಗಳನ್ನು ತುಂಬಿಸಿಕೊಂಡಿರುವ ಕಾಂಗ್ರೆಸ್, ಬಿಜೆಪಿಯ ನೈತಿಕತೆ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ. ಕಾಂಗ್ರೆಸ್ ಮುಂಚೂಣಿ ನಾಯಕರೇ ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದಾರೆ. ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ ಎಂಬಂತಾಗಿದೆ ಎಂದು ಟ್ವೀಟ್ ಮೂಲಕ ಕಾಂಗ್ರೆಸ್​ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ.

ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ವಾಗ್ದಾಳಿ

ರೌಡಿಗಳ ಕಿಂಗ್ ಕೊತ್ವಾಲನ ಚಹಾ ಲೋಟ ಎತ್ತುತ್ತಿದ್ದ ಪುಡಿ ರೌಡಿ ಡಿಕೆ ಶಿವಕುಮಾರ್​ ನ ರಾಜ್ಯಾಧ್ಯಕ್ಷನನ್ನಾಗಿ ಮಾಡಿದ ಕಾಂಗ್ರೆಸ್‌ಗೆ ಬಿಜೆಪಿಯ ಬಗ್ಗೆ ಮಾತಾಡೋ ನೈತಿಕೆಯಿದೆಯಾ ಎಂದು ಪ್ರಶ್ನಿಸಿಕೊಳ್ಳಲಿ. ಅಧ್ಯಕ್ಷರಿಂದ ಆರಂಭವಾಗುವ ಇವರ ಕ್ರೂರ ನಾಯಕರ ಪಟ್ಟಿ ಮೊನ್ನೆ ಮೊನ್ನೆ ಬಾರಲ್ಲಿ ಅಮಾಯಕರಿಗೆ‌ ಹೊಡೆದ ಮರಿರೌಡಿ ನಲಪಾಡ್​ ವರೆಗೂ ಇದೆ ಎಂದಿದೆ.

ರೌಡಿ ಪಾಲಿಟಿಕ್ಸ್ ವಿಚಾರದಲ್ಲಿ ಎಚ್ಚರಿಕೆ​ ನೀಡುವಾಗ ಬಿಜೆಪಿ ಎಡವಟ್ಟು

ರೌಡಿ ಪಾಲಿಟಿಕ್ಸ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧದ ಸೋಶಿಯಲ್ ಮೀಡಿಯಾ ವಾರ್ನಲ್ಲಿ ಬಿಜೆಪಿ ಎಡವಟ್ಟು ಮಾಡಿಕೊಂಡಿದೆ. ಜಯನಗರದ ಕಾಂಗ್ರೆಸ್ ಕಾರ್ಯಕರ್ತನನ್ನು ರೌಡಿ ಎಂಬಂತೆ ಬಿಂಬಿಸಿ ಬಿಜೆಪಿ ಟ್ವೀಟ್ ಮಾಡಿದೆ. ಕಾಂಗ್ರೆಸ್ ನಾಯಕರ ಜೊತೆಗಿನ ಜಯನಗರದ ಕಾಂಗ್ರೆಸ್ ಕಾರ್ಯಕರ್ತ ಚೇತನ್ ಫೋಟೋ ಟ್ವೀಟ್ ಮಾಡಿ ಇವರು ಯಾರು ಉತ್ತರಿಸಲಿ ಎಂದು ಬಿಜೆಪಿ ಪ್ರಶ್ನಿಸಿತ್ತು. ಬಿಜೆಪಿ ಟ್ವೀಟ್ ಗೆ ಚೇತನ್ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ಟ್ವೀಟ್​ನಿಂದ ಪೋಟೋ ತೆಗೆದು ಹಾಕಿ ಕ್ಷಮೆ ಕೇಳದಿದ್ದರೆ ಕಾನೂನು ಕ್ರಮ ಕೈಗೊಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಚೇತನ್ ಎಚ್ಚರಿಕೆ ಬಳಿಕ ಬಿಜೆಪಿ ಟ್ವೀಟ್ ಡಿಲೀಟ್ ಮಾಡಿದೆ.

Published On - 2:25 pm, Sun, 4 December 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ