AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಕಾಂತ್ ಪೂಜಾರಿ ಪರ ಕೋಮುದ್ವೇಷ ಸೃಷ್ಟಿಸುವ ಹೇಳಿಕೆ: ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕಾಂಗ್ರೆಸ್‌ ದೂರು

ಕೋಮುದ್ವೇಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ವಿರುದ್ಧ ಕಾಂಗ್ರೆಸ್‌(Congress) ದೂರು ನೀಡಿದೆ. ಶ್ರೀಕಾಂತ್ ಪೂಜಾರಿ ಪರ ಹೇಳಿಕೆ ನೀಡಿದ್ದ ಬಿ.ವೈ.ವಿಜಯೇಂದ್ರ ವಿರುದ್ದ ಇದೀಗ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ.

ಶ್ರೀಕಾಂತ್ ಪೂಜಾರಿ ಪರ ಕೋಮುದ್ವೇಷ ಸೃಷ್ಟಿಸುವ ಹೇಳಿಕೆ: ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕಾಂಗ್ರೆಸ್‌ ದೂರು
ಬಿವೈ ವಿಜಯೇಂದ್ರ
ಪ್ರಸನ್ನ ಗಾಂವ್ಕರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 03, 2024 | 5:58 PM

Share

ಬೆಂಗಳೂರು, ಜ.03: ಕೋಮುದ್ವೇಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ವಿರುದ್ಧ ಕಾಂಗ್ರೆಸ್‌(Congress) ದೂರು ನೀಡಿದೆ. ಶ್ರೀಕಾಂತ್ ಪೂಜಾರಿ ಪರ ಹೇಳಿಕೆ ನೀಡಿದ್ದ ಬಿ.ವೈ.ವಿಜಯೇಂದ್ರ ವಿರುದ್ದ ಇದೀಗ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ಎಂಬುವವರು ದೂರು ಸಲ್ಲಿಸಿದ್ದಾರೆ.

ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ನಿನ್ನೆ(ಜ.02) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ‘ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ, ನಾಳೆ ಬೃಹತ್ ಹೋರಾಟ ಮೂಲಕ ಈ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಈ ಸರ್ಕಾರ ಹಿಂದೂ ಬಿಜೆಪಿ‌ ಕಾರ್ಯಕರ್ತರನ್ನು ಬೆದರಿಸುವ ಕಲಸ ಮಾಡುತ್ತಿದೆ. ಇಂತಹ ಗೊಡ್ಡು ಬೆದರಿಕೆಗೆ‌ ನಾವು ಹೆದರುವುದಿಲ್ಲ. ಇದು ಹಿಂದೂ ವಿರೋಧಿ, ರಾಮ ವಿರೋಧಿ‌ ಸರ್ಕಾರ, ಇದು ಅಲ್ಪಸಂಖ್ಯಾತರ ಕಲ್ಯಾಣ ಮಾತ್ರ ಬಯಸುವ ಸರ್ಕಾರವಾಗಿದೆ. ಅಲ್ಪಸಂಖ್ಯಾತರನ್ನು‌ ಖುಷಿ ಪಡಿಸಲು ಹಿಂದೂಗಳ ಬಂಧನ ಮಾಡಲಾಗಿದೆ ಎಂದಿದ್ದರು.

ಇದನ್ನೂ ಓದಿ:ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ: ಬಿವೈ ವಿಜಯೇಂದ್ರ

ತಪ್ಪು ಮಾಡಿದ್ದಾರೋ ಇಲ್ಲವೋ, ಇವರು ತೀರ್ಮಾನ ಮಾಡುವುದಲ್ಲ. ಈ ಸಂದರ್ಭದಲ್ಲಿ ರಾಮಭಕ್ತರನ್ನು ಬಂಧಿಸುತ್ತಾರೆ ಎಂದರೆ ಏನರ್ಥ? ನಾಳೆ ದಿನ ನಡೆಯುವ ದುರ್ಘಟನೆಗೆ ರಾಜ್ಯ ಸರ್ಕಾರವೇ ಹೊಣೆ. ಕಾಂಗ್ರೆಸ್​ನವರ ನಾಲಿಗೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್​ನವವರ ಹುಚ್ಚು ಹೇಳಿಕೆಗೆ ಉತ್ತರ ಕೊಡುವ ಅಗತ್ಯಯಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ತರುವುದರಲ್ಲಿ ಕಾಂಗ್ರೆಸ್‌ನವರು ನಿಸ್ಸೀಮರು. ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಅವರಿಗೆ ಖುಷಿ ಕೊಡುತ್ತದೆ. 31 ವರ್ಷಗಳ ಹಳೇ ಕೇಸ್​ನ್ನು ಈಗ ಓಪನ್ ಮಾಡಬೇಕಾ? ಕಾನೂನು ಸುವ್ಯವಸ್ಥೆ ಹದಗೆಡುವ ದುಸ್ಸಾಹಕ್ಕೆ ಸಿಎಂ ಸಿದ್ದರಾಮಯ್ಯ ಕೈಹಾಕುತ್ತಿದ್ದಾರೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Wed, 3 January 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ