AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನಗಳ ವಿಧಾನಮಂಡಲ ಅಧಿವೇಶನಕ್ಕೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕೆ. ಎಸ್​ ಈಶ್ವರಪ್ಪ ಗೈರು: ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ

10 ದಿನಗಳ ವಿಧಾನಮಂಡಲ ಅಧಿವೇಶನದಲ್ಲಿ ಶೇಕಡಾ 90ರಷ್ಟು ಹಾಜರಾತಿ ಇತ್ತು ಎಂದು ವಿಧಾನಸೌಧದಲ್ಲಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

10 ದಿನಗಳ ವಿಧಾನಮಂಡಲ ಅಧಿವೇಶನಕ್ಕೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕೆ. ಎಸ್​ ಈಶ್ವರಪ್ಪ ಗೈರು: ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
TV9 Web
| Edited By: ವಿವೇಕ ಬಿರಾದಾರ|

Updated on: Sep 23, 2022 | 6:28 PM

Share

ಬೆಂಗಳೂರು: 10 ದಿನಗಳ ವಿಧಾನಮಂಡಲ (Vidhan Mandal) ಅಧಿವೇಶನದಲ್ಲಿ ಶೇಕಡಾ 90ರಷ್ಟು ಹಾಜರಾತಿ ಇತ್ತು ಎಂದು ವಿಧಾನಸೌಧದಲ್ಲಿ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಹೇಳಿದ್ದಾರೆ. 10 ದಿನಗಳ ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡಿದ್ದು ಈ ಬಗ್ಗೆ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕೆ. ಎಸ್​ ಈಶ್ವರಪ್ಪ ಗೈರಾಗಿದ್ದು, ಅಧಿವೇಶನಕ್ಕೆ ಗೈರುಹಾಜರಾಗಿದ್ದ ಬಗ್ಗೆ ನನಗೆ ಮಾಹಿತಿ ನೀಡಿಲ್ಲ ಮತ್ತು ನನ್ನ ಅನುಮತಿ ಪಡೆದಿಲ್ಲ.

ವಿಧಾನಸಭೆಯಲ್ಲಿ 16 ವಿಧೇಯಗಳ ಮಂಡನೆಯಾಗಿ ಅಂಗೀಕಾರವಾಗಿವೆ. ವಿಧಾನಪರಿಷತ್​ನಲ್ಲಿ 14 ವಿಧೇಯಕ ಮಂಡನೆಯಾಗಿ, ಅಂಗೀಕಾರಗೊಂಡಿವೆ. ಇನ್ನೂ 2 ವಿಧೇಯಕಗಳ ಬಗ್ಗೆ ಚರ್ಚೆ ಆಗಬೇಕಿದೆ. ಒಂದು ವಿಧೇಯಕವನ್ನು ವಾಪಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ನಿಯಮ 60ರಲ್ಲಿ ಸೂಚಿಸಿದ್ದ ವಿಷಯಗಳನ್ನು 69ರಡಿ ಚರ್ಚೆ ಮಾಡಲಾಗಿದೆ. 150 ಪ್ರಶ್ನೆಗಳಿಗೆ ಲಿಖಿತ ಮೂಲಕ ಉತ್ತರ ಕೊಡಲಾಗಿದೆ. ಗಮನ ಸೆಳೆಯುವ ಸೂಚನೆಯಡಿ 857 ಪ್ರಶ್ನೆಗಳು ಬಂದಿದ್ದು, 177 ಪ್ರಶ್ನೆಗಳಿಗೆ ಉತ್ತರ ಕೊಡಲಾಗಿದೆ. ಅತ್ಯುತ್ತಮ ಶಾಸಕ ಆಯ್ಕೆಗೆ ಸಮಿತಿ ಸಭೆ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕರು, ಕಾನೂನು ಸಚಿವರು ಸಭೆ ಮಾಡಿದ್ದಾರೆ ಎಂದು ತಿಳಿಸಿದರು.

ಅತ್ಯುತ್ತಮ ಶಾಸಕ ಎಂದು ಹಲವು ಶಾಸಕರ ಹೆಸರು ಬಂದಿದ್ದು, ಆಯ್ಕೆಯಾದವರಿಗೆ ಬೆಳಗಾವಿ ಅಧಿವೇಶನದಲ್ಲಿ ಸನ್ಮಾನ ಮಾಡಲಾಗುತ್ತದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಸಂಪುಟಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಾರಿ ಅಧಿವೇಶನದಲ್ಲಿ ಅತಿವೃಷ್ಟಿಗೆ ಕುರಿತು ಚರ್ಚಿಸಲಾದ ವಿಷಯ ಫಲಪ್ರದವಾಗಿದೆ. 36 ಸದಸ್ಯರು ಈ ಚರ್ಚೆಯಲ್ಲಿ ನೇರವಾಗಿ ಭಾಗಿಯಾಗಿದ್ದರು. ಒಟ್ಟು 12 ಗಂಟೆ 44 ನಿಮಿಷ ಅತಿವೃಷ್ಟಿ ಮೇಲೆ ಚರ್ಚೆ ನಡೆದಿದೆ ಎಂದರು.

ಯಾವುದೇ ಸಚಿವರು, ಶಾಸಕರು ಅಧಿವೇಶನದ ವೇಳೆ ಗೈರಾದರೆ ಮಾಹಿತಿ ನೀಡುವುದು ಸಂಪ್ರದಾಯ, ಇನ್ನು ಮುಂದೆ ಕೂಡಾ ಆ ಸಂಪ್ರದಾಯವನ್ನು ಮುಂದುವರಿಸಲಾಗುತ್ತದೆ. ನಾನು‌ ಸ್ಪೀಕರ್ ಆಗಿ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಮತ್ತು ಮಾಡುತ್ತೇನೆ. ಮಂತ್ರಿಮಂಡಲ ಪುನಾರಚನೆಯಂತಹ ಯಾವುದೂ ಈಗ ನನ್ನ ಪರಿಮಿತಿಯಲ್ಲಿ ಇಲ್ಲ. ಅಂತಹ ಸಂದರ್ಭಗಳು ಬಂದಾಗಲಷ್ಟೇ ಚರ್ಚಿಸಬಹುದು. ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ