AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೊಡೆತ ಬಿದ್ದಿದ್ದು ಬಿಜೆಪಿಯಿಂದ..ಟಿಎಂಸಿ ಗೆದ್ದಿದ್ದೂ ಬಿಜೆಪಿಯಿಂದ’

ಪಶ್ಚಿಮ ಬಂಗಾಳದಲ್ಲಿ 2016ರಿಂದಲೂ ಕಾಂಗ್ರೆಸ್​ ಮತ್ತು ಎಡಪಕ್ಷಗಳ ಮೈತ್ರಿ ಇದೆ. ಆದರೆ 2021ರ ಚುನಾವಣೆಯಲ್ಲಿ ಈ ಮೈತ್ರಿ ಒಂದೇಒಂದು ಸೀಟ್​ ಕೂಡ ಗೆಲ್ಲಲಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಧೀರ್​ ರಂಜನ್ ಚೌಧರಿ, ನಾವು ಬೇರೆಯಾಗುವ ಬಗ್ಗೆ ಯೋಚನೆಯಿಲ್ಲ ಎಂದಿದ್ದಾರೆ.

‘ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೊಡೆತ ಬಿದ್ದಿದ್ದು ಬಿಜೆಪಿಯಿಂದ..ಟಿಎಂಸಿ ಗೆದ್ದಿದ್ದೂ ಬಿಜೆಪಿಯಿಂದ’
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ
TV9 Web
| Edited By: |

Updated on:Jun 20, 2021 | 9:27 AM

Share

ಕೋಲ್ಕತ್ತ: ಈ ಬಾರಿ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂಬ ಪಣತೊಟ್ಟಿದ್ದ ಬಿಜೆಪಿ ಅದಕ್ಕಾಗಿ ಸಂಪೂರ್ಣ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಕಾಂಗ್ರೆಸ್​ ಪಶ್ಚಿಮ ಬಂಗಾಳದ ವಿಚಾರದಲ್ಲಿ ಮೌನವಾಗಿಯೇ ಇತ್ತು. ಕೇರಳವನ್ನು ತೆಗೆದುಕೊಂಡಷ್ಟು ಗಂಭೀರವಾಗಿ ಪಶ್ಚಿಮ ಬಂಗಾಳವನ್ನು ಪರಿಗಣಿಸಲಿಲ್ಲ. ಆದರೆ ಕೊನೆಗೂ ಅಲ್ಲಿ ಗೆದ್ದಿದ್ದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ. ಪಶ್ಚಿಮ ಬಂಗಾಳದ ಚುನಾವಣೆ ಫಲಿತಾಂಶ ಹೊರಬಿದ್ದು ತಿಂಗಳ ನಂತರ ಇದೀಗ ಕಾಂಗ್ರೆಸ್​ ನಾಯಕ ಅಧೀರ್ ರಂಜನ್​ ಚೌಧರಿ ಬಿಜೆಪಿ ಸೋಲಿಗೆ ಕಾರಣವೇನು ಎಂಬುದನ್ನು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸನ್ನಿವೇಶ ಬಿಜೆಪಿ ಪರವಾಗಿ ಇರಲಿಲ್ಲ. ಆ ಪಕ್ಷದ ಧ್ರುವೀಕರಣ ರಾಜಕಾರಣದಿಂದ ಮಮತಾ ಬ್ಯಾನರ್ಜಿಗೆ ಗೆಲ್ಲಲು ತುಂಬ ಸಹಾಯವಾಯಿತು. ಆದರೆ ಕಾಂಗ್ರೆಸ್​​ಗೆ ಹೊಡೆತ ಬಿತ್ತು. ಬಿಜೆಪಿಯಂಥ ಕೋಮುಶಕ್ತಿ ಪಕ್ಷವನ್ನು ನಿರ್ಮೂಲನ ಮಾಡಲು ಸಾಧ್ಯವಾಗುವುದು ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷಕ್ಕೆ ಮಾತ್ರವೆಂದು ಇಲ್ಲಿನ ಅಲ್ಪಸಂಖ್ಯಾತರು ನಿರ್ಧರಿಸಿದ್ದಾರೆ ಎಂದೂ ಅಧೀರ್ ರಂಜನ್​ ಚೌಧರಿ ಹೇಳಿದ್ದಾರೆ. ​

ಪಶ್ಚಿಮ ಬಂಗಾಳದಲ್ಲಿ 2016ರಿಂದಲೂ ಕಾಂಗ್ರೆಸ್​ ಮತ್ತು ಎಡಪಕ್ಷಗಳ ಮೈತ್ರಿ ಇದೆ. ಆದರೆ 2021ರ ಚುನಾವಣೆಯಲ್ಲಿ ಈ ಮೈತ್ರಿ ಒಂದೇಒಂದು ಸೀಟ್​ ಕೂಡ ಗೆಲ್ಲಲಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಧೀರ್​ ರಂಜನ್ ಚೌಧರಿ, ನಾವು ಬೇರೆಯಾಗುವ ಬಗ್ಗೆ ಯೋಚನೆಯಿಲ್ಲ. ನಮ್ಮ ಮೈತ್ರಿ ಮುಂದುವರಿಯಲಿದೆ ಎಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 8 ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. 294 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಟಿಎಂಸಿ 213 ಸೀಟ್​​ಗೆದ್ದು, ಅಮೋಘ ಜಯ ಸಾಧಿಸಿತ್ತು. ಬಿಜೆಪಿ 77 ಕ್ಷೇತ್ರಗಳಲ್ಲಿ ಗೆದ್ದಿದೆ.

ಇದನ್ನೂ ಓದಿ: ಜೀರಿಗೆ ಸೇವನೆಯ ಆರೋಗ್ಯ ಪ್ರಯೋಜನ ತಿಳಿಯಿರಿ; ಜೀರಿಗೆ ನೀರು ಕುಡಿಯುವ ಅಭ್ಯಾಸ ರೂಢಿಯಲ್ಲಿರಲಿ

Published On - 9:15 am, Sun, 20 June 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್