AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​​ಎಸ್ ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು

ಬೆಂಗಳೂರಿನಲ್ಲಿ ನಡೆದ ಅಖಂಡ ಭಾರತ ಸಂಕಲ್ಪ ದಿನದಲ್ಲಿ, ಬಿ.ಎಲ್. ಸಂತೋಷ್ ಅವರು ಆರ್‌ಎಸ್‌ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೀಕ್ಷ್ಣ ತಿರುಗೇಟು ನೀಡಿದರು. ಆರ್‌ಎಸ್‌ಎಸ್ ಎಂದಿಗೂ ನೋಂದಣಿಯಾಗಿಲ್ಲ, ಸಮಾಜ ರಕ್ಷಣೆಯೇ ಅದರ ಧ್ಯೇಯ ಎಂದರು. ದೇಶದ ಇತಿಹಾಸದಲ್ಲಿ ಆರ್‌ಎಸ್‌ಎಸ್ ಕೊಡುಗೆ ಮತ್ತು ಹಿಂದೂಗಳ ಬಲಿದಾನವನ್ನು ಒತ್ತಿಹೇಳಿದ ಸಂತೋಷ್, ಸಂಘವನ್ನು ನೋಂದಣಿಯ ಶರತ್ತುಗಳಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಆರ್​ಎಸ್​​ಎಸ್ ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆಗೆ ಬಿ.ಎಲ್. ಸಂತೋಷ್ ತಿರುಗೇಟು
ಬಿ.ಎಲ್. ಸಂತೋಷ್, ಪ್ರಿಯಾಂಕ್ ಖರ್ಗೆ
ಅಕ್ಷಯ್​ ಪಲ್ಲಮಜಲು​​
|

Updated on:Aug 15, 2026 | 6:44 AM

Share

ಬೆಂಗಳೂರು ಆ.15: 80ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಬೆಂಗಳೂರಿನ ಬನ್ನಪ್ಪ ಪಾರ್ಕ್‌ನಲ್ಲಿ ಆಯೋಜಿಸಿದ್ದ ‘ಅಖಂಡ ಭಾರತ ಸಂಕಲ್ಪ ದಿನ’ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಿ, ಆರ್‌ಎಸ್‌ಎಸ್ ನೋಂದಣಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತೀವ್ರ ತಿರುಗೇಟು ನೀಡಿದ್ದಾರೆ. ನಡುವೆ ತಿರಂಗ ಧ್ವಜ ಹಾಗೂ ಕೇಸರಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ನೂರಾರು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ದೇಶದ ಇತಿಹಾಸ ಹಾಗೂ ಆರ್‌ಎಸ್‌ಎಸ್ ಕೊಡುಗೆಗಳ ಕುರಿತು ಪ್ರಸ್ತಾಪಿಸಿದರು.

“ಆರ್‌ಎಸ್‌ಎಸ್ ರಿಜಿಸ್ಟ್ರೇಷನ್ (ನೋಂದಣಿ) ಆಗಿರಲಿಲ್ಲ, ಮುಂದೆಯೂ ಆಗಲ್ಲ. ಪ್ರಿಯಾಂಕ್ ಖರ್ಗೆ ಅವರೇ, ಪ್ರತಿಯೊಂದಕ್ಕೂ ನೋಂದಣಿಯೇ ಮಾನದಂಡವಲ್ಲ. ನಿಮ್ಮ ಕುಟುಂಬ ಕಲ್ಬುರ್ಗಿಗೆ ಓಡಿ ಬಂದಾಗ, ರಜಾಕಾರರ ವಿರುದ್ಧ ನಿಂತಿದ್ದು ಇದೇ ಆರ್‌ಎಸ್‌ಎಸ್‌ನ ಹುಡುಗರು” ಎಂದು ತಿರುಗೇಟು ನೀಡಿದರು.

“ನಮಗೆ ಉಪ್ಪು ತಯಾರಿಕೆ ಮತ್ತು ಚರಕದಿಂದ ಮಾತ್ರವೇ ಸ್ವಾತಂತ್ರ್ಯ ಬಂತು ಎಂದು ತಪ್ಪಾಗಿ ಹೇಳಿಕೊಡಲಾಗಿದೆ. ಆದರೆ 35 ಲಕ್ಷಕ್ಕೂ ಹೆಚ್ಚು ಹಿಂದೂಗಳ ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. 1200 ವರ್ಷಗಳ ಕಾಲ ಖಿಲ್ಜಿ, ಕುಶಾನರು, ಅರಬರು, ಯುರೋಪಿಯನ್ನರು ಹಾಗೂ ಬ್ರಿಟಿಷರ ನಿರಂತರ ದಾಳಿಯನ್ನು ಎದುರಿಸಿ ಸಮಾಜವನ್ನು ರಕ್ಷಿಸಲಾಗಿದೆ” ಎಂದರು.ಸಂಘವು ಸಮಾಜದ ರಕ್ಷಣೆ ಮತ್ತು ಸೇವೆಗೆ ಬದ್ಧವಾಗಿದ್ದು, ಅದನ್ನು ನೋಂದಣಿಯ ಶರತ್ತುಗಳಿಗೆ ಸೀಮಿತಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಗಾಂಧಿ ಸರ್​​ನೇಮ್ ಹೆಸರಿಟ್ಟುಕೊಂಡು ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂತರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ತಜ್ಞ ಹಾಗೂ ಪ್ಯಾರಿಸ್ ಬ್ರಿಕ್ಸ್ ಅಂತರಾಷ್ಟ್ರೀಯ ಉಪಾಧ್ಯಕ್ಷ ಡಾ. ಕೆ.ಜೆ. ಪುರುಷೋತ್ತಮ್ ವಹಿಸಿದ್ದರು. ಕಿಡ್ನಿ ಫೌಂಡೇಶನ್ ಆಸ್ಪತ್ರೆಯ ನಿರ್ದೇಶಕರಾದ ಡಾ. ಹೆಚ್.ಕೆ. ನಾಗರಾಜ್, ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್, ನಾಯಕರಾದ ಜಯನಗರ ರಾಮಮೂರ್ತಿ, ಚಿ.ನಾ.ರಾಮು ಹಾಗೂ ಮಾಜಿ ಶಾಸಕ ನಂದೀಶ್ ರೆಡ್ಡಿ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 am, Sat, 15 August 26

Follow Us
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ