AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ, ನಿಫಾ ಆತಂಕದ ನಡುವೆ ಸದ್ದಿಲ್ಲದೆ ಉಲ್ಬಣಿಸುತ್ತಿದೆ ಬ್ಲ್ಯಾಕ್​ ಫಂಗಸ್​; 10 ದಿನಗಳಲ್ಲಿ 25 ಮಂದಿಗೆ ಸೋಂಕು, 7 ಸಾವು

ರಾಜ್ಯದಲ್ಲಿ ಪತ್ತೆಯಾದ ಬ್ಲ್ಯಾಕ್​ ಫಂಗಸ್​  ಸೊಂಕಿನ ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ ಶೇ.30ರಷ್ಟು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಡುಬಂದಿದ್ದು, ಬೆಂಗಳೂರು ಒಂದರಲ್ಲೇ ಒಟ್ಟು 1,236 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ತಗುಲಿದೆ. ಆ ಪೈಕಿ ಈವರೆಗೆ 154 ಜನ ಸಾವಿಗೀಡಾಗಿದ್ದಾರೆ.

ಕೊರೊನಾ, ನಿಫಾ ಆತಂಕದ ನಡುವೆ ಸದ್ದಿಲ್ಲದೆ ಉಲ್ಬಣಿಸುತ್ತಿದೆ ಬ್ಲ್ಯಾಕ್​ ಫಂಗಸ್​; 10 ದಿನಗಳಲ್ಲಿ 25 ಮಂದಿಗೆ ಸೋಂಕು, 7 ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 09, 2021 | 7:14 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಸೃಷ್ಟಿಸಿದ ಅವಾಂತರ ಇನ್ನೂ ಹಸಿಯಾಗಿದೆ. ಸದ್ಯ ಮೇಲ್ನೋಟಕ್ಕೆ ಕೊರೊನಾ ನಿಯಂತ್ರಣಕ್ಕೆ ಬಂದಂತೆ ತೋರುತ್ತಿದೆಯಾದರೂ ಯಾವ ಕ್ಷಣದಲ್ಲಿ ಸೋಂಕು ಮತ್ತೆ ಮೂರನೇ ಅಲೆಯನ್ನು ಎಬ್ಬಿಸುವುದೋ ಎಂಬ ಭಯ ಜನರಲ್ಲಿದೆ. ಇನ್ನೊಂದೆಡೆ ಕೇರಳದಲ್ಲಿ ಆತಂಕ ಹುಟ್ಟಿಸಿರುವ ನಿಫಾ ವೈರಸ್​ ಕೂಡಾ ರಾಜ್ಯಕ್ಕೆ ತಲೆನೋವಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲೇ ಕರ್ನಾಟಕದಲ್ಲಿ ಬ್ಲ್ಯಾಕ್​ ಫಂಗಸ್​​ ಪ್ರಕರಣಗಳೂ ಹೆಚ್ಚಾಗುತ್ತಿದ್ದು, 10 ದಿನಗಳ ಅವಧಿಯಲ್ಲಿ 25 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ತಗುಲಿ, 7 ಜನ ಸಾವಿಗೀಡಾಗಿದ್ದಾರೆ ಎಂಬ ವರದಿ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ದಿನೇದಿನೆ ಹೆಚ್ಚಾಗುತ್ತಿರುವ ವೈರಸ್‌ಗಳ ಕಾಟ ಆರೋಗ್ಯ ಇಲಾಖೆಗೆ ದೊಡ್ಡ ಸವಾಲಾಗುವಂತೆ ಕಾಣುತ್ತಿದೆ. ಕೊರೊನಾ, ನಿಫಾ, ಬ್ಲ್ಯಾಕ್​ ಫಂಗಸ್​ ಎಲ್ಲವೂ ಒಂದರ ಬೆನ್ನಿಗೆ ಒಂದು ನಿಂತಿರುವಂತೆ ಆಗಿದ್ದು, ಜನ ಮೈಮರೆತರೆ ಯಾವಾಗ ಬೇಕಾದರೂ ಅಪಾಯದ ಸನ್ನಿವೇಶ ಉದ್ಭವಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈವರೆಗೆ 3,904 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ತಗುಲಿದ್ದು, 458 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಪತ್ತೆಯಾದ ಬ್ಲ್ಯಾಕ್​ ಫಂಗಸ್​  ಸೊಂಕಿನ ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ ಶೇ.30ರಷ್ಟು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಡುಬಂದಿದ್ದು, ಬೆಂಗಳೂರು ಒಂದರಲ್ಲೇ ಒಟ್ಟು 1,236 ಮಂದಿಗೆ ಬ್ಲ್ಯಾಕ್ ಫಂಗಸ್ ಸೋಂಕು ತಗುಲಿದೆ. ಆ ಪೈಕಿ ಈವರೆಗೆ 154 ಜನ ಸಾವಿಗೀಡಾಗಿದ್ದಾರೆ. ಬಹುಮುಖ್ಯವಾಗಿ ಕಳೆದ ಹತ್ತು ದಿನಗಳಲ್ಲಿ 25 ಮಂದಿಗೆ ಬ್ಲಾಕ್ ಫಂಗಸ್ ಸೋಂಕು ತಗುಲಿದ್ದು, ಏಳು ಜನರ ಸಾವು ಸಂಭವಿಸಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಬ್ಲ್ಯಾಕ್​ ಫಂಗಸ್ ಪ್ರಕರಣಗಳು ದಾಖಾಲಾಗಿವೆ ಎನ್ನುವುದರ ಮಾಹಿತಿ ಇಲ್ಲಿದೆ 100ಕ್ಕಿಂತ ಹೆಚ್ಚು ಪ್ರಕರಣಗಳಿಗೆ ಸಾಕ್ಷಿಯಾದ ಜಿಲ್ಲೆಗಳು: ಧಾರವಾಡದಲ್ಲಿ- 345 ವಿಜಯಪುರದಲ್ಲಿ – 236 ಕಲಬುರುಗಿಯಲ್ಲಿ 216 ಬಳ್ಳಾರಿಯಲ್ಲಿ – 176 ಚಿತ್ರದುರ್ಗದಲ್ಲಿ- 167 ಬೆಳಗಾವಿಯಲ್ಲಿ – 159 ರಾಯಚೂರಿನಲ್ಲಿ‌ – 142 ಮೈಸೂರಿನಲ್ಲಿ – 137 ಬಾಗಲಕೋಟೆಯಲ್ಲಿ -131 ದಾವಣಗೆರೆಯಲ್ಲಿ- 127 ಕೋಲಾರದಲ್ಲಿ – 114 ದಕ್ಷಿಣ ಕನ್ನಡದಲ್ಲಿ – 106

ಕಡಿಮೆ ಪ್ರಕರಣಗಳು ಕಂಡುಬಂದ ಜಿಲ್ಲೆಗಳು ಧಾರವಾಡ – 50 ಬಳ್ಳಾರಿ – 28 ದಕ್ಷಿಣ ಕನ್ನಡದಲ್ಲಿ – 25 ಕಲಬುರ್ಗಿಯಲ್ಲಿ – 24 ದಾವಣಗೆರೆ ಹಾಗೂ ಮೈಸೂರಿನಲ್ಲಿ‌ ತಲಾ 20 ಶಿವಮೊಗ್ಗ – 15 ಬಾಗಲಕೋಟೆಯಲ್ಲಿ – 13 ರಾಯಚೂರಿನಲ್ಲಿ – 12 ಕೋಲಾರ, ಹಾಸನ, ಚಿಕ್ಕಬಳ್ಳಾಪುರದಲ್ಲಿ ತಲಾ 11 ಗದಗದಲ್ಲಿ 10

ಇದನ್ನೂ ಓದಿ: Nipah Virus: ಕೊವಿಡ್​ಗಿಂತಲೂ ಅಪಾಯಕಾರಿಯಾಗಿರುವ ನಿಫಾ ವೈರಸ್ ಬಗ್ಗೆ ನಿಮಗೆಷ್ಟು ಗೊತ್ತು?

ಬ್ಲ್ಯಾಕ್‌ ಫಂಗಸ್‌ ಚಿಕಿತ್ಸೆಗೆ ದಾಖಲಾಗಿದ್ದವರ ಪೈಕಿ ಶೇ.30ರಷ್ಟು ಸೋಂಕಿತರಿಗೆ ಸಂಪೂರ್ಣ ದೃಷ್ಟಿ ಹಾನಿ -ಮಿಂಟೋ ಆಸ್ಪತ್ರೆ ವರದಿ

(Black Fungus cases increasing silently amid of Covid 19 and Nipah fear in Karnataka)

ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!