AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ S.T.ಸೋಮಶೇಖರ್‌ ಪುತ್ರನಿಗೆ ಬ್ಲ್ಯಾಕ್‌ಮೇಲ್; ಆರೋಪಿ ರಾಹುಲ್ ಭಟ್ ಬಂಧನ, 5 ದಿನ ಸಿಸಿಬಿ ವಶಕ್ಕೆ

ಸಚಿವ ಎಸ್.ಟಿ.ಸೋಮಶೇಖರ್‌ ಪುತ್ರ ನಿಶಾಂತ್‌ ಅವರಿಗೆ ಕೆಲವು ದಿನಗಳ ಹಿಂದೆ ಅಪರಿಚಿತ ನಂಬರ್‌ನಿಂದ ವಾಟ್ಸಾಪ್‌ನಲ್ಲಿ 1 ಮೆಸೇಜ್ ಬಂದಿತ್ತು. ವಿಡಿಯೋದಲ್ಲಿ ತನ್ನ ಫೋಟೋ ಎಡಿಟ್ ಮಾಡಿ ಕಳಿಸಿದ್ದರು. ಬಳಿಕ ವಾಟ್ಸಾಪ್ ಮೂಲಕ ತನಗೆ, ತಂದೆಗೆ ಬೆದರಿಕೆ ಹಾಕಿದ್ದಾರೆ.

ಸಚಿವ S.T.ಸೋಮಶೇಖರ್‌ ಪುತ್ರನಿಗೆ ಬ್ಲ್ಯಾಕ್‌ಮೇಲ್; ಆರೋಪಿ ರಾಹುಲ್ ಭಟ್ ಬಂಧನ, 5 ದಿನ ಸಿಸಿಬಿ ವಶಕ್ಕೆ
ಸಚಿವ ಸೋಮಶೇಖರ್‌ ಮತ್ತು ಪುತ್ರ ನಿಶಾಂತ್
TV9 Web
| Updated By: ಆಯೇಷಾ ಬಾನು|

Updated on:Jan 09, 2022 | 2:27 PM

Share

ಬೆಂಗಳೂರು: ವಿಡಿಯೋ ಕಳಿಸಿ 1 ಕೋಟಿ ರೂ. ನೀಡುವಂತೆ ಸಚಿವ S.T.ಸೋಮಶೇಖರ್‌ ಪುತ್ರನಿಗೆ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಸಚಿವ S.T.ಸೋಮಶೇಖರ್‌ ಪುತ್ರ ನಿಶಾಂತ್ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ರಾಹುಲ್ ಭಟ್ನನ್ನು ಪೊಲೀಸರು ಬಂಧಿಸಿದ್ದಾರೆ.

ಸಚಿವ ಎಸ್.ಟಿ.ಸೋಮಶೇಖರ್‌ ಪುತ್ರ ನಿಶಾಂತ್‌ ಅವರಿಗೆ ಕೆಲವು ದಿನಗಳ ಹಿಂದೆ ಅಪರಿಚಿತ ನಂಬರ್‌ನಿಂದ ವಾಟ್ಸಾಪ್‌ನಲ್ಲಿ 1 ಮೆಸೇಜ್ ಬಂದಿತ್ತು. ವಿಡಿಯೋದಲ್ಲಿ ತನ್ನ ಫೋಟೋ ಎಡಿಟ್ ಮಾಡಿ ಕಳಿಸಿದ್ದರು. ಬಳಿಕ ವಾಟ್ಸಾಪ್ ಮೂಲಕ ತನಗೆ, ತಂದೆಗೆ ಬೆದರಿಕೆ ಹಾಕಿದ್ದಾರೆ. ಪಿಎಗೆ ಕಳಿಸಿ ಬೆದರಿಕೆ ಹಾಕಿದ್ದಾಗಿ ನಿಶಾಂತ್ ದೂರು ನೀಡಿದ್ದಾರೆ. 1 ಕೋಟಿ ನೀಡದಿದ್ದರೆ ವಿಡಿಯೋ ಬಿಡುಗಡೆ ಮಾಡುವ ಬೆದರಿಕೆ ಹಾಕಿದ್ದಾರೆ. ಈ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸೈಬರ್‌ ಕ್ರೈಂ ಪೊಲೀಸರಿಗೆ ಎಸ್.ಟಿ.ಸೋಮಶೇಖರ್‌ ಪುತ್ರ ದೂರು ನೀಡಿದ್ದಾರೆ.

ಇನ್ನು ದೂರು ದಾಖಲಾಗುತ್ತಿದ್ದಂತೆ ಆರೋಪಿ ರಾಹುಲ್ ಭಟ್ನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ 5 ದಿನ ಸಿಸಿಬಿ ವಶಕ್ಕೆ ಪಡೆಯಲಾಗಿದೆ. ದುಬೈನಿಂದ ವಾಪಸಾದ ಬಳಿಕ ರಾಹುಲ್ ಭಟ್ ವಶಕ್ಕೆ ಪಡೆದಿದ್ದು ಮತ್ತೋರ್ವ ಆರೋಪಿ ಶಾಸಕರ ಪುತ್ರಿಗಾಗಿ ಹುಡುಕಾಟ ನಡೆಯುತ್ತಿದೆ.

ಕೇಸ್​ನಲ್ಲಿ ವಿಜಯಪುರ ಜಿಲ್ಲೆಯ ಓರ್ವ ಎಮ್​ಎಲ್​ಎ ಪುತ್ರಿ ಹೆಸರು ಪ್ರಸ್ತಾಪ ಈ ಕೇಸ್​ ಸಂಬಂಧ ತನಿಖೆ ವೇಳೆ ವಿಜಯಪುರ ಜಿಲ್ಲೆಯ ಓರ್ವ ಎಮ್​ಎಲ್​ಎ ಪುತ್ರಿ ಹೆಸರು ಪ್ರಸ್ತಾಪವಾಗಿದೆ. ಸದ್ಯ ಎಂಎಲ್​ಎ ಮಗಳು ಲಂಡನ್​ನಲ್ಲಿ ಇರುವುದಾಗಿ ಮಾಹಿತಿ ಸಿಕ್ಕಿದೆ. ಹಾಗೂ ಆರ್​ಟಿ ನಗರದಲ್ಲಿ ನೆಲೆಸಿರುವ ಓರ್ವ ಅಸ್ಟ್ರಾಲಜಿಸ್ಟ್ ಪುತ್ರನನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಈ ಕೇಸ್​ ಸಂಬಂಧ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದ್ದಾರೆ. ಒಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆದಿರುವುದಾಗಿ ಹೇಳಿದ್ದಾರೆ. ಇಷ್ಟು ಬಿಟ್ಟರೆ ಬೇರೆ ಯಾವುದೇ ಮಾಹಿತಿಯನ್ನು ಹೇಳಿಲ್ಲ ಎಂದಿದ್ದಾರೆ. ಪ್ರಕರಣ ಸಂಬಂಧ ಯಾರನ್ನೂ ಬಂಧಿಸಿದ್ದಾರೆಂದು ಗೊತ್ತಿಲ್ಲ. ಆದರೆ ಇದರ ಹಿಂದಿನ ಉದ್ದೇಶ ಏನೆಂದು ಕೇಳಿದ್ದೇನೆ. ಸಂಪೂರ್ಣ ತನಿಖೆ ನಡೆಸಿದ ಬಳಿಕ ಮಾಹಿತಿ ನೀಡಲಿದ್ದಾರೆ. ಅನುಮಾನ ಹಿನ್ನೆಲೆ ಗನ್‌ಮ್ಯಾನ್ ವಿಚಾರಣೆ ಮಾಡಿದ್ದಾರೆ. ನನ್ನ ಪುತ್ರನ ಗನ್‌ಮ್ಯಾನ್ ಪ್ರತಿನಿತ್ಯ ಫೋಟೋ ತೆಗೆಯುತ್ತಿದ್ದ. ಹೀಗಾಗಿ ಗನ್‌ಮ್ಯಾನ್‌ನನ್ನು ವಿಚಾರಣೆ ನಡೆಸಿದ್ದಾರಷ್ಟೇ. ಎಫ್‌ಎಸ್‌ಎಲ್ ತನಿಖೆಯಲ್ಲಿ ಮಾಹಿತಿ ತಿಳಿಯಲಿದೆ. ಅವರು ಪದೇಪದೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ಕಾಲ ಮಿಂಚಿಲ್ಲ ಈಗಲೇ ನಿರ್ಧಾರ ಮಾಡಿ ಎನ್ನುತ್ತಿದ್ದರು. ಬೇಗ ಸೆಟಲ್‌ಮೆಂಟ್ ಮಾಡಿಕೊಳ್ಳುವಂತೆ ಹೇಳುತ್ತಿದ್ದರು. ಯುಕೆ ಸಂಖ್ಯೆಯಿಂದ ಕರೆ ಮಾಡಿ ಫೋಟೋ ಬಿಡುಗಡೆ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: Best Smartphone: ಜನವರಿಯಲ್ಲಿ 25,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್​ ಸ್ಮಾರ್ಟ್​ಫೋನ್​ಗಳು ಇಲ್ಲಿವೆ ನೋಡಿ

Published On - 1:52 pm, Sun, 9 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ