AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ S.T.ಸೋಮಶೇಖರ್‌ ಪುತ್ರನಿಗೆ ಬ್ಲ್ಯಾಕ್‌ಮೇಲ್; ಆರೋಪಿ ರಾಹುಲ್ ಭಟ್ ಬಂಧನ, 5 ದಿನ ಸಿಸಿಬಿ ವಶಕ್ಕೆ

ಸಚಿವ ಎಸ್.ಟಿ.ಸೋಮಶೇಖರ್‌ ಪುತ್ರ ನಿಶಾಂತ್‌ ಅವರಿಗೆ ಕೆಲವು ದಿನಗಳ ಹಿಂದೆ ಅಪರಿಚಿತ ನಂಬರ್‌ನಿಂದ ವಾಟ್ಸಾಪ್‌ನಲ್ಲಿ 1 ಮೆಸೇಜ್ ಬಂದಿತ್ತು. ವಿಡಿಯೋದಲ್ಲಿ ತನ್ನ ಫೋಟೋ ಎಡಿಟ್ ಮಾಡಿ ಕಳಿಸಿದ್ದರು. ಬಳಿಕ ವಾಟ್ಸಾಪ್ ಮೂಲಕ ತನಗೆ, ತಂದೆಗೆ ಬೆದರಿಕೆ ಹಾಕಿದ್ದಾರೆ.

ಸಚಿವ S.T.ಸೋಮಶೇಖರ್‌ ಪುತ್ರನಿಗೆ ಬ್ಲ್ಯಾಕ್‌ಮೇಲ್; ಆರೋಪಿ ರಾಹುಲ್ ಭಟ್ ಬಂಧನ, 5 ದಿನ ಸಿಸಿಬಿ ವಶಕ್ಕೆ
ಸಚಿವ ಸೋಮಶೇಖರ್‌ ಮತ್ತು ಪುತ್ರ ನಿಶಾಂತ್
TV9 Web
| Edited By: |

Updated on:Jan 09, 2022 | 2:27 PM

Share

ಬೆಂಗಳೂರು: ವಿಡಿಯೋ ಕಳಿಸಿ 1 ಕೋಟಿ ರೂ. ನೀಡುವಂತೆ ಸಚಿವ S.T.ಸೋಮಶೇಖರ್‌ ಪುತ್ರನಿಗೆ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಸಚಿವ S.T.ಸೋಮಶೇಖರ್‌ ಪುತ್ರ ನಿಶಾಂತ್ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು ಆರೋಪಿ ರಾಹುಲ್ ಭಟ್ನನ್ನು ಪೊಲೀಸರು ಬಂಧಿಸಿದ್ದಾರೆ.

ಸಚಿವ ಎಸ್.ಟಿ.ಸೋಮಶೇಖರ್‌ ಪುತ್ರ ನಿಶಾಂತ್‌ ಅವರಿಗೆ ಕೆಲವು ದಿನಗಳ ಹಿಂದೆ ಅಪರಿಚಿತ ನಂಬರ್‌ನಿಂದ ವಾಟ್ಸಾಪ್‌ನಲ್ಲಿ 1 ಮೆಸೇಜ್ ಬಂದಿತ್ತು. ವಿಡಿಯೋದಲ್ಲಿ ತನ್ನ ಫೋಟೋ ಎಡಿಟ್ ಮಾಡಿ ಕಳಿಸಿದ್ದರು. ಬಳಿಕ ವಾಟ್ಸಾಪ್ ಮೂಲಕ ತನಗೆ, ತಂದೆಗೆ ಬೆದರಿಕೆ ಹಾಕಿದ್ದಾರೆ. ಪಿಎಗೆ ಕಳಿಸಿ ಬೆದರಿಕೆ ಹಾಕಿದ್ದಾಗಿ ನಿಶಾಂತ್ ದೂರು ನೀಡಿದ್ದಾರೆ. 1 ಕೋಟಿ ನೀಡದಿದ್ದರೆ ವಿಡಿಯೋ ಬಿಡುಗಡೆ ಮಾಡುವ ಬೆದರಿಕೆ ಹಾಕಿದ್ದಾರೆ. ಈ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸೈಬರ್‌ ಕ್ರೈಂ ಪೊಲೀಸರಿಗೆ ಎಸ್.ಟಿ.ಸೋಮಶೇಖರ್‌ ಪುತ್ರ ದೂರು ನೀಡಿದ್ದಾರೆ.

ಇನ್ನು ದೂರು ದಾಖಲಾಗುತ್ತಿದ್ದಂತೆ ಆರೋಪಿ ರಾಹುಲ್ ಭಟ್ನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ 5 ದಿನ ಸಿಸಿಬಿ ವಶಕ್ಕೆ ಪಡೆಯಲಾಗಿದೆ. ದುಬೈನಿಂದ ವಾಪಸಾದ ಬಳಿಕ ರಾಹುಲ್ ಭಟ್ ವಶಕ್ಕೆ ಪಡೆದಿದ್ದು ಮತ್ತೋರ್ವ ಆರೋಪಿ ಶಾಸಕರ ಪುತ್ರಿಗಾಗಿ ಹುಡುಕಾಟ ನಡೆಯುತ್ತಿದೆ.

ಕೇಸ್​ನಲ್ಲಿ ವಿಜಯಪುರ ಜಿಲ್ಲೆಯ ಓರ್ವ ಎಮ್​ಎಲ್​ಎ ಪುತ್ರಿ ಹೆಸರು ಪ್ರಸ್ತಾಪ ಈ ಕೇಸ್​ ಸಂಬಂಧ ತನಿಖೆ ವೇಳೆ ವಿಜಯಪುರ ಜಿಲ್ಲೆಯ ಓರ್ವ ಎಮ್​ಎಲ್​ಎ ಪುತ್ರಿ ಹೆಸರು ಪ್ರಸ್ತಾಪವಾಗಿದೆ. ಸದ್ಯ ಎಂಎಲ್​ಎ ಮಗಳು ಲಂಡನ್​ನಲ್ಲಿ ಇರುವುದಾಗಿ ಮಾಹಿತಿ ಸಿಕ್ಕಿದೆ. ಹಾಗೂ ಆರ್​ಟಿ ನಗರದಲ್ಲಿ ನೆಲೆಸಿರುವ ಓರ್ವ ಅಸ್ಟ್ರಾಲಜಿಸ್ಟ್ ಪುತ್ರನನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಈ ಕೇಸ್​ ಸಂಬಂಧ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯಿಸಿದ್ದಾರೆ. ಒಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆದಿರುವುದಾಗಿ ಹೇಳಿದ್ದಾರೆ. ಇಷ್ಟು ಬಿಟ್ಟರೆ ಬೇರೆ ಯಾವುದೇ ಮಾಹಿತಿಯನ್ನು ಹೇಳಿಲ್ಲ ಎಂದಿದ್ದಾರೆ. ಪ್ರಕರಣ ಸಂಬಂಧ ಯಾರನ್ನೂ ಬಂಧಿಸಿದ್ದಾರೆಂದು ಗೊತ್ತಿಲ್ಲ. ಆದರೆ ಇದರ ಹಿಂದಿನ ಉದ್ದೇಶ ಏನೆಂದು ಕೇಳಿದ್ದೇನೆ. ಸಂಪೂರ್ಣ ತನಿಖೆ ನಡೆಸಿದ ಬಳಿಕ ಮಾಹಿತಿ ನೀಡಲಿದ್ದಾರೆ. ಅನುಮಾನ ಹಿನ್ನೆಲೆ ಗನ್‌ಮ್ಯಾನ್ ವಿಚಾರಣೆ ಮಾಡಿದ್ದಾರೆ. ನನ್ನ ಪುತ್ರನ ಗನ್‌ಮ್ಯಾನ್ ಪ್ರತಿನಿತ್ಯ ಫೋಟೋ ತೆಗೆಯುತ್ತಿದ್ದ. ಹೀಗಾಗಿ ಗನ್‌ಮ್ಯಾನ್‌ನನ್ನು ವಿಚಾರಣೆ ನಡೆಸಿದ್ದಾರಷ್ಟೇ. ಎಫ್‌ಎಸ್‌ಎಲ್ ತನಿಖೆಯಲ್ಲಿ ಮಾಹಿತಿ ತಿಳಿಯಲಿದೆ. ಅವರು ಪದೇಪದೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು. ಕಾಲ ಮಿಂಚಿಲ್ಲ ಈಗಲೇ ನಿರ್ಧಾರ ಮಾಡಿ ಎನ್ನುತ್ತಿದ್ದರು. ಬೇಗ ಸೆಟಲ್‌ಮೆಂಟ್ ಮಾಡಿಕೊಳ್ಳುವಂತೆ ಹೇಳುತ್ತಿದ್ದರು. ಯುಕೆ ಸಂಖ್ಯೆಯಿಂದ ಕರೆ ಮಾಡಿ ಫೋಟೋ ಬಿಡುಗಡೆ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: Best Smartphone: ಜನವರಿಯಲ್ಲಿ 25,000 ರೂ. ಒಳಗೆ ಖರೀದಿಸಬಹುದಾದ ಬೆಸ್ಟ್​ ಸ್ಮಾರ್ಟ್​ಫೋನ್​ಗಳು ಇಲ್ಲಿವೆ ನೋಡಿ

Published On - 1:52 pm, Sun, 9 January 22

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!