AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಸಿಆರ್‌ಐನಲ್ಲಿ ಕರೆಂಟ್ ಕಣ್ಣಾಮುಚ್ಚಾಲೆ, ಶಸ್ತ್ರಚಿಕಿತ್ಸೆ ಮುಂದಕ್ಕೆ!

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿದ್ಯುತ್ ವೋಲ್ಟೇಜ್ ಏರಿಳಿತದಿಂದಾಗಿ ಕೇಂದ್ರೀಕೃತ ಹವಾ ನಿಯಂತ್ರಣ ವ್ಯವಸ್ಥೆ ಹಾನಿಗೊಳಗಾಗಿದೆ. ಇದರಿಂದಾಗಿ ಆಯ್ದ ಶಸ್ತ್ರಚಿಕಿತ್ಸೆಗಳನ್ನು ಐದು ದಿನಗಳ ಕಾಲ ಮುಂದೂಡಲಾಗಿದೆ. ತುರ್ತು ಶಸ್ತ್ರಚಿಕಿತ್ಸೆಗಳನ್ನು ಫ್ಯಾನ್ ಮತ್ತು ಕೂಲರ್‌ಗಳ ಸಹಾಯದಿಂದ ನಡೆಸಲಾಗುತ್ತಿದೆ. ಸೋಂಕು ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಂಸಿಆರ್‌ಐನಲ್ಲಿ ಕರೆಂಟ್ ಕಣ್ಣಾಮುಚ್ಚಾಲೆ, ಶಸ್ತ್ರಚಿಕಿತ್ಸೆ ಮುಂದಕ್ಕೆ!
ಬಿಎಂಆರ್​ಸಿಐ
Vinay Kashappanavar
| Edited By: |

Updated on: Nov 27, 2024 | 2:37 PM

Share

ಬೆಂಗಳೂರು, ನವೆಂಬರ್​ 27: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (BMCRI)ಯಲ್ಲಿ ಆಯ್ದ ಶಸ್ತ್ರ ಚಿಕಿತ್ಸೆಗಳನ್ನು ಮುಂದಿನ ಐದು ದಿನಗಳ ಕಾಲ ಮುಂದೂಡಿದೆ. 200ಕ್ಕೂ ಹೆಚ್ಚು ಹಾಸಿಗೆಯುಳ್ಳ ಬಿಎಂಸಿಆರ್‌ಐನಲ್ಲಿ ಒಂದೇ ಬಾರಿಗೆ ಆರು ಕಡೆ ಶಸ್ತ್ರಚಿಕಿತ್ಸೆ (Surgery) ಮಾಡಬಹುದು. ಪ್ರತಿದಿನ ಇಲ್ಲಿ 20 ರಿಂದ 30 ಶಸ್ತ್ರಚಿಕಿತ್ಸೆ ನಡೆಯುತ್ತವೆ. ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಾರೆ.

ಆದರೆ, ಕಳೆದ ಕಳೆದ ನಾಲ್ಕು ದಿನಗಳ ಹಿಂದೆ ವಿದ್ಯುತ್ ವೋಲೈಜ್‌ನ ಏರಿಳಿತದಿಂದಾಗಿ ಆಸ್ಪತ್ರೆಯ ಕೇಂದ್ರಿಕೃತ ಹವಾ ನಿಯಂತ್ರಣಗಳ (AC) ಉಪಕರಣಗಳಿಗೆ ಹಾನಿಯುಂಟಾಗಿದೆ. ಇದರಿಂದ ಆಸ್ಪತ್ರೆಯಲ್ಲಿನ ಎಸಿ ಬಂದ್​ ಆಗಿದೆ. ಹೀಗಾಗಿ, ಎಸಿ ದುರಸ್ತಿ ಆಗುವವರೆಗೆ ತುರ್ತು ಶಸ್ತ್ರಚಿಕಿತ್ಸೆ ಮಾತ್ರ ಮಾಡಿ, ಆಯ್ದ ಶಸ್ತ್ರ ಚಿಕಿತ್ಸೆಗಳನ್ನು ಮುಂದೂಡಲಾಗಿದೆ.

ಎಸಿ ಸಮಸ್ಯೆಯಿಂದ ತುರ್ತು ಶಸ್ತ್ರ ಚಿಕಿತ್ಸೆಗಳನ್ನು ಫ್ಯಾನ್, ಕೂಲರ್ ಬಳಸಿ ಮಾಡಲಾಗುತ್ತಿದೆ. ಎಸಿ ಇಲ್ಲದಿದ್ದಲ್ಲಿ ಸರ್ಜರಿ ಮಾಡಿದ ಸ್ಥಳಕ್ಕೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಆಯ್ದ ಶಸ್ತ್ರ ಚಿಕಿತ್ಸೆಗಳನ್ನು ಮುಂದೂಡಲಾಗಿದೆ ಎಂದು ಎಂದು ಬಿಎಂಸಿಆರ್‌ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಶೇಷಾಧಿಕಾರಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?