AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಸಿಆರ್‌ಐನಲ್ಲಿ ಕರೆಂಟ್ ಕಣ್ಣಾಮುಚ್ಚಾಲೆ, ಶಸ್ತ್ರಚಿಕಿತ್ಸೆ ಮುಂದಕ್ಕೆ!

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿದ್ಯುತ್ ವೋಲ್ಟೇಜ್ ಏರಿಳಿತದಿಂದಾಗಿ ಕೇಂದ್ರೀಕೃತ ಹವಾ ನಿಯಂತ್ರಣ ವ್ಯವಸ್ಥೆ ಹಾನಿಗೊಳಗಾಗಿದೆ. ಇದರಿಂದಾಗಿ ಆಯ್ದ ಶಸ್ತ್ರಚಿಕಿತ್ಸೆಗಳನ್ನು ಐದು ದಿನಗಳ ಕಾಲ ಮುಂದೂಡಲಾಗಿದೆ. ತುರ್ತು ಶಸ್ತ್ರಚಿಕಿತ್ಸೆಗಳನ್ನು ಫ್ಯಾನ್ ಮತ್ತು ಕೂಲರ್‌ಗಳ ಸಹಾಯದಿಂದ ನಡೆಸಲಾಗುತ್ತಿದೆ. ಸೋಂಕು ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಂಸಿಆರ್‌ಐನಲ್ಲಿ ಕರೆಂಟ್ ಕಣ್ಣಾಮುಚ್ಚಾಲೆ, ಶಸ್ತ್ರಚಿಕಿತ್ಸೆ ಮುಂದಕ್ಕೆ!
ಬಿಎಂಆರ್​ಸಿಐ
Vinay Kashappanavar
| Edited By: |

Updated on: Nov 27, 2024 | 2:37 PM

Share

ಬೆಂಗಳೂರು, ನವೆಂಬರ್​ 27: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (BMCRI)ಯಲ್ಲಿ ಆಯ್ದ ಶಸ್ತ್ರ ಚಿಕಿತ್ಸೆಗಳನ್ನು ಮುಂದಿನ ಐದು ದಿನಗಳ ಕಾಲ ಮುಂದೂಡಿದೆ. 200ಕ್ಕೂ ಹೆಚ್ಚು ಹಾಸಿಗೆಯುಳ್ಳ ಬಿಎಂಸಿಆರ್‌ಐನಲ್ಲಿ ಒಂದೇ ಬಾರಿಗೆ ಆರು ಕಡೆ ಶಸ್ತ್ರಚಿಕಿತ್ಸೆ (Surgery) ಮಾಡಬಹುದು. ಪ್ರತಿದಿನ ಇಲ್ಲಿ 20 ರಿಂದ 30 ಶಸ್ತ್ರಚಿಕಿತ್ಸೆ ನಡೆಯುತ್ತವೆ. ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಾರೆ.

ಆದರೆ, ಕಳೆದ ಕಳೆದ ನಾಲ್ಕು ದಿನಗಳ ಹಿಂದೆ ವಿದ್ಯುತ್ ವೋಲೈಜ್‌ನ ಏರಿಳಿತದಿಂದಾಗಿ ಆಸ್ಪತ್ರೆಯ ಕೇಂದ್ರಿಕೃತ ಹವಾ ನಿಯಂತ್ರಣಗಳ (AC) ಉಪಕರಣಗಳಿಗೆ ಹಾನಿಯುಂಟಾಗಿದೆ. ಇದರಿಂದ ಆಸ್ಪತ್ರೆಯಲ್ಲಿನ ಎಸಿ ಬಂದ್​ ಆಗಿದೆ. ಹೀಗಾಗಿ, ಎಸಿ ದುರಸ್ತಿ ಆಗುವವರೆಗೆ ತುರ್ತು ಶಸ್ತ್ರಚಿಕಿತ್ಸೆ ಮಾತ್ರ ಮಾಡಿ, ಆಯ್ದ ಶಸ್ತ್ರ ಚಿಕಿತ್ಸೆಗಳನ್ನು ಮುಂದೂಡಲಾಗಿದೆ.

ಎಸಿ ಸಮಸ್ಯೆಯಿಂದ ತುರ್ತು ಶಸ್ತ್ರ ಚಿಕಿತ್ಸೆಗಳನ್ನು ಫ್ಯಾನ್, ಕೂಲರ್ ಬಳಸಿ ಮಾಡಲಾಗುತ್ತಿದೆ. ಎಸಿ ಇಲ್ಲದಿದ್ದಲ್ಲಿ ಸರ್ಜರಿ ಮಾಡಿದ ಸ್ಥಳಕ್ಕೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಆಯ್ದ ಶಸ್ತ್ರ ಚಿಕಿತ್ಸೆಗಳನ್ನು ಮುಂದೂಡಲಾಗಿದೆ ಎಂದು ಎಂದು ಬಿಎಂಸಿಆರ್‌ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಶೇಷಾಧಿಕಾರಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ