Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಸಿಆರ್‌ಐನಲ್ಲಿ ಕರೆಂಟ್ ಕಣ್ಣಾಮುಚ್ಚಾಲೆ, ಶಸ್ತ್ರಚಿಕಿತ್ಸೆ ಮುಂದಕ್ಕೆ!

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ವಿದ್ಯುತ್ ವೋಲ್ಟೇಜ್ ಏರಿಳಿತದಿಂದಾಗಿ ಕೇಂದ್ರೀಕೃತ ಹವಾ ನಿಯಂತ್ರಣ ವ್ಯವಸ್ಥೆ ಹಾನಿಗೊಳಗಾಗಿದೆ. ಇದರಿಂದಾಗಿ ಆಯ್ದ ಶಸ್ತ್ರಚಿಕಿತ್ಸೆಗಳನ್ನು ಐದು ದಿನಗಳ ಕಾಲ ಮುಂದೂಡಲಾಗಿದೆ. ತುರ್ತು ಶಸ್ತ್ರಚಿಕಿತ್ಸೆಗಳನ್ನು ಫ್ಯಾನ್ ಮತ್ತು ಕೂಲರ್‌ಗಳ ಸಹಾಯದಿಂದ ನಡೆಸಲಾಗುತ್ತಿದೆ. ಸೋಂಕು ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಂಸಿಆರ್‌ಐನಲ್ಲಿ ಕರೆಂಟ್ ಕಣ್ಣಾಮುಚ್ಚಾಲೆ, ಶಸ್ತ್ರಚಿಕಿತ್ಸೆ ಮುಂದಕ್ಕೆ!
ಬಿಎಂಆರ್​ಸಿಐ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on: Nov 27, 2024 | 2:37 PM

ಬೆಂಗಳೂರು, ನವೆಂಬರ್​ 27: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (BMCRI)ಯಲ್ಲಿ ಆಯ್ದ ಶಸ್ತ್ರ ಚಿಕಿತ್ಸೆಗಳನ್ನು ಮುಂದಿನ ಐದು ದಿನಗಳ ಕಾಲ ಮುಂದೂಡಿದೆ. 200ಕ್ಕೂ ಹೆಚ್ಚು ಹಾಸಿಗೆಯುಳ್ಳ ಬಿಎಂಸಿಆರ್‌ಐನಲ್ಲಿ ಒಂದೇ ಬಾರಿಗೆ ಆರು ಕಡೆ ಶಸ್ತ್ರಚಿಕಿತ್ಸೆ (Surgery) ಮಾಡಬಹುದು. ಪ್ರತಿದಿನ ಇಲ್ಲಿ 20 ರಿಂದ 30 ಶಸ್ತ್ರಚಿಕಿತ್ಸೆ ನಡೆಯುತ್ತವೆ. ಆಸ್ಪತ್ರೆಗೆ ಪ್ರತಿನಿತ್ಯ ಸಾವಿರಾರು ರೋಗಿಗಳು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಾರೆ.

ಆದರೆ, ಕಳೆದ ಕಳೆದ ನಾಲ್ಕು ದಿನಗಳ ಹಿಂದೆ ವಿದ್ಯುತ್ ವೋಲೈಜ್‌ನ ಏರಿಳಿತದಿಂದಾಗಿ ಆಸ್ಪತ್ರೆಯ ಕೇಂದ್ರಿಕೃತ ಹವಾ ನಿಯಂತ್ರಣಗಳ (AC) ಉಪಕರಣಗಳಿಗೆ ಹಾನಿಯುಂಟಾಗಿದೆ. ಇದರಿಂದ ಆಸ್ಪತ್ರೆಯಲ್ಲಿನ ಎಸಿ ಬಂದ್​ ಆಗಿದೆ. ಹೀಗಾಗಿ, ಎಸಿ ದುರಸ್ತಿ ಆಗುವವರೆಗೆ ತುರ್ತು ಶಸ್ತ್ರಚಿಕಿತ್ಸೆ ಮಾತ್ರ ಮಾಡಿ, ಆಯ್ದ ಶಸ್ತ್ರ ಚಿಕಿತ್ಸೆಗಳನ್ನು ಮುಂದೂಡಲಾಗಿದೆ.

ಎಸಿ ಸಮಸ್ಯೆಯಿಂದ ತುರ್ತು ಶಸ್ತ್ರ ಚಿಕಿತ್ಸೆಗಳನ್ನು ಫ್ಯಾನ್, ಕೂಲರ್ ಬಳಸಿ ಮಾಡಲಾಗುತ್ತಿದೆ. ಎಸಿ ಇಲ್ಲದಿದ್ದಲ್ಲಿ ಸರ್ಜರಿ ಮಾಡಿದ ಸ್ಥಳಕ್ಕೆ ಸೋಂಕು ಹರಡುವ ಸಾಧ್ಯತೆ ಇದೆ. ಹೀಗಾಗಿ ಆಯ್ದ ಶಸ್ತ್ರ ಚಿಕಿತ್ಸೆಗಳನ್ನು ಮುಂದೂಡಲಾಗಿದೆ ಎಂದು ಎಂದು ಬಿಎಂಸಿಆರ್‌ಐ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಶೇಷಾಧಿಕಾರಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು