AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಕನ್ನಡ ವರದಿ ಇಂಪ್ಯಾಕ್ಟ್: ಸೂಪರ್​ಸ್ಪೆಷಾಲಿಟಿ ಆಸ್ಪತ್ರೆಯ ವಿದ್ಯುತ್ ಸಮಸ್ಯೆ 1-2ದಿನದಲ್ಲಿ ಬಗೆಹರಿಸಲು ಕ್ರಮ

TV9 Kannada report impact: ಬೆಂಗಳೂರು ಮೆಡಿಕಲ್ ಕಾಲೇಜ್ ಮತ್ತು ರಿಸರ್ವ್ ಇನ್ಸ್​ಟಿಟ್ಯೂಟ್​ನ ಪಿಎಂಎಸ್​ಎಸ್​ವೈ ಸೂಪರ್​ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದ ಸರ್ಜರಿಗಳು ನಿಂತಿವೆ ಎನ್ನುವ ಸುದ್ದಿಯನ್ನು ಟಿವಿ9 ಕನ್ನಡ ಬಿತ್ತರಿಸಿತ್ತು. ಇದಕ್ಕೆ ಸ್ಪಂದಿಸಿರುವ ಬಿಎಂಸಿಆರ್​ಐ, 1-2 ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸ್ಪಷ್ಟಪಡಿಸಿದೆ. ವೋಲ್ಟೇಜ್ ಏರುಪೇರಿನಿಂದಾಗಿ ಎಸಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದನ್ನು ಸರಿಪಡಿಸಲಾಗುವುದು ಎಂದು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದೆ.

ಟಿವಿ9 ಕನ್ನಡ ವರದಿ ಇಂಪ್ಯಾಕ್ಟ್: ಸೂಪರ್​ಸ್ಪೆಷಾಲಿಟಿ ಆಸ್ಪತ್ರೆಯ ವಿದ್ಯುತ್ ಸಮಸ್ಯೆ 1-2ದಿನದಲ್ಲಿ ಬಗೆಹರಿಸಲು ಕ್ರಮ
ಬಿಎಂಸಿಆರ್​ಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 27, 2024 | 7:32 PM

Share

ಬೆಂಗಳೂರು, ನವೆಂಬರ್ 27: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾದ ಬಿಎಂಸಿಆರ್​ಐನ ಪಿಎಂಎಸ್​ಎಸ್​ವೈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ ಇರುವ ಬಗ್ಗೆ ಟಿವಿ9 ಕನ್ನಡ ವರದಿ ಮಾಡಿತ್ತು. ಇದಕ್ಕೆ ಸ್ಪಂದಿಸಿರುವ ಬಿಎಂಸಿಆರ್​ಐ, ಈ ಸಮಸ್ಯೆಯನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ಹೇಳಿದೆ. ಮುಂದಿನ ಒಂದೆರಡು ದಿನದಲ್ಲಿ ಸಮಸ್ಯೆ ಬಗೆಹರಿಸಲಾಗುವುದು. ಸೆಂಟ್ರಲ್ ಏರ್ ಕಂಡೀಶನಿಂಗ್ ಸಿಸ್ಟಂ ಪೂರ್ಣ ಕಾರ್ಯಾಚರಣೆಗೆ ಸಿದ್ಧವಾಗಲಿದೆ. ನಿಗದಿತ ವೇಳಾಪಟ್ಟಿ ಪ್ರಕಾರ ಎಲ್ಲಾ ಸರ್ಜರಿಗಳೂ ನಡೆಯಲು ಆರಂಭವಾಗುತ್ತವೆ ಎಂದು ಅದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಎಂಆರ್​ಸಿಐ ಅಡಿಯಲ್ಲಿ ಆರು ಆಸ್ಪತ್ರೆಗಳು ಬರುತ್ತವೆ. ವಿಕ್ಟೋರಿಯಾ, ವಾಣಿ ವಿಲಾಸ್, ಮಿಂಟೋ, ಪಿಎಂಎಸ್​ಎಸ್​ವೈ ಸೂಪರ್ ಸ್ಪೆಷಾಲಿಟಿ, ಟ್ರೌಮಾ ಅಂಡ್ ಎಮರ್ಜೆನ್ಸಿ ಕೇರ್ ಸೆಂಟರ್ ಆಸ್ಪತ್ರೆಗಳನ್ನು ಇದು ನಿರ್ವಹಿಸುತ್ತದೆ. ಇದರಲ್ಲಿ 200 ಬೆಡ್​ಗಳಿರುವ ಸೂಪರ್​ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ ಇರುವುದು ಬೆಳಕಿಗೆ ಬಂದಿತ್ತು. ವೋಲ್ಟೇಜ್ ಫ್ಲಕ್ಚುಯೇಶನ್​ನಿಂದ ಎಸಿ ಕಾರ್ಯನಿರ್ವಹಣೆಯಲ್ಲಿ ವೈಫಲ್ಯವಾಗಿತ್ತು. ಇದರಿಂದ ಶಸ್ತ್ರಚಿಕಿತ್ಸೆಗಳು ನಡೆಯುತ್ತಿರಲಿಲ್ಲ.

ಏರ್ ಕಂಡೀಶನ್ ಇಲ್ಲದಿದ್ದರೆ ಸರ್ಜರಿ ಮಾಡಲಾದ ದೇಹದ ಭಾಗಕ್ಕೆ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ತುರ್ತು ಶಸ್ತ್ರಚಿಕಿತ್ಸೆ ಬಿಟ್ಟು ಉಳಿದ ಸರ್ಜರಿಗಳನ್ನು ಮುಂದೂಡಲಾಗುತ್ತಿತ್ತು. ಎಮರ್ಜೆನ್ಸಿಯ ಸರ್ಜರಿಗಳನ್ನು ಫ್ಯಾನ್, ಕೂಲರ್ ಬಳಸಿ ಮಾಡಲಾಗುತ್ತಿತ್ತು. ಸರ್ಜರಿ ಅಗತ್ಯ ಇರುವ ಸಾಕಷ್ಟು ರೋಗಿಗಳು ಆತಂಕಗೊಂಡಿದ್ದರು. ಈ ಬಗ್ಗೆ ಟಿವಿ9 ಕನ್ನಡ ವರದಿ ಮಾಡಿತ್ತು.

ಇದನ್ನೂ ಓದಿ: ಬಿಎಂಸಿಆರ್‌ಐನಲ್ಲಿ ಕರೆಂಟ್ ಕಣ್ಣಾಮುಚ್ಚಾಲೆ, ಶಸ್ತ್ರಚಿಕಿತ್ಸೆ ಮುಂದಕ್ಕೆ!

ವರದಿಗೆ ಸ್ಪಂದಿಸಿದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಿಶೇಷ ಅಧಿಕಾರಿ ಡಾ. ದಿವ್ಯಾ ಪ್ರಕಾಶ್ ಅವರು, ಈ ತಾಂತ್ರಿಕ ಸಮಸ್ಯೆಯನ್ನು ಒಂದೆರಡು ದಿನದಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಬಿಎಂಸಿಆರ್​ಐನ ಅಡಿಯಲ್ಲಿ ಬರುವ ಇತರ ಐದು ಆಸ್ಪತ್ರೆಗಳಲ್ಲಿ ಈ ಸಮಸ್ಯೆ ಇಲ್ಲ ಎನ್ನಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!