AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMRCL: ಬೆಂಗಳೂರು ಮೆಟ್ರೋ ರೈಲಿನಲ್ಲಿ ಸೈಕಲ್ ಕೊಂಡೊಯ್ಯಲು ಅವಕಾಶ

ಇದಕ್ಕಾಗಿ ರೈಲಿನ ಕೊನೆಯ ಬೋಗಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.

BMRCL: ಬೆಂಗಳೂರು ಮೆಟ್ರೋ ರೈಲಿನಲ್ಲಿ ಸೈಕಲ್ ಕೊಂಡೊಯ್ಯಲು ಅವಕಾಶ
ಬೆಂಗಳೂರು ಮೆಟ್ರೋ ರೈಲು
TV9 Web
| Edited By: |

Updated on:Jun 07, 2022 | 6:50 PM

Share

ಬೆಂಗಳೂರು: ಮೆಟ್ರೋ ರೈಲುಗಳಲ್ಲಿ ಸೈಕಲ್ ಕೊಂಡೊಯ್ಯಲು ಅವಕಾಶ ನೀಡಲು ಬೆಂಗಳೂರು ಮೆಟ್ರೋ ರೈಲು ನಿಗಮ (Bangalore Metro Rail Corporation Limited – BMRCL) ಅವಕಾಶ ನೀಡಿದೆ. ಆದರೆ ಎಲ್ಲ ಬಗೆಯ ಸೈಕಲ್​ಗಳನ್ನು ರೈಲಿನಲ್ಲಿ ಸಾಗಿಸಲು ಸಮ್ಮತಿಸಿಲ್ಲ. ಕೇವಲ ಮಡಚಬಹುದಾದ ಸೈಕಲ್​ಗಳನ್ನು ಮಾತ್ರ ಕೊಂಡೊಯ್ಯಬಹುದಾಗಿದೆ. ಇದಕ್ಕಾಗಿ ರೈಲಿನ ಕೊನೆಯ ಬೋಗಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಗರಿಷ್ಠ 15 ಕೆಜಿ ತೂಕ ಇರುವ ಸೈಕಲ್​ಗಳನ್ನು ರೈಲುಗಳಲ್ಲಿ ಸಾಗಿಸಬಹುದಾಗಿದೆ. ರೈಲಿನಲ್ಲಿ ಸಾಗಿಸಲು ತರುವ ಸೈಕಲ್​ಗಳನ್ನು ಪ್ರವೇಶ ದ್ವಾರದಲ್ಲಿಯೇ ಸಿಬ್ಬಂದಿ ಪರಿಶೀಲಿಸುತ್ತಾರೆ. ಇಂಥ ಸೈಕಲ್​ಗಳಿಂದ ರೈಲಿಗೆ ಹಾನಿಯಾಗುವುದಿಲ್ಲ, ಅವು ಸರಿಯಾಗಿ ಪ್ಯಾಕ್ ಆಗಿದೆ ಎಂದು ಮನವರಿಕೆಯಾದ ನಂತರ ಸೈಕಲ್ ಕೊಂಡೊಯ್ಯಲು ಅವಕಾಶ ನೀಡಲಾಗುತ್ತದೆ. ಸೈಕಲ್‌ ಸಾಗಣೆಗೆ ಹೆಚ್ಚುವರಿ ಶುಲ್ಕ ತೆರಬೇಕಿಲ್ಲ. ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಆದರೆ ಇತರ ಪ್ರಯಾಣಿಕರಿಗೆ ತೊಂದರೆಯಾಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ಮಾಡಲಾಗಿದೆ.

BMRCL-Metro-Pressnotes

ಬೆಂಗಳೂರು ಮೆಟ್ರೋ ನಿಗಮವು ಸೈಕಲ್ ಸಾಗಣೆಗೆ ಅವಕಾಶ ನೀಡಿದೆ.

ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಾದ ನಂತರ ಸೈಕಲ್ ಬಳಕೆಗೆ ಹೆಚ್ಚು ನೀಡಬೇಕು ಎಂಬ ಒತ್ತಾಯ ವ್ಯಾಪಕವಾಗಿ ಕೇಳಿ ಬರುತ್ತಿತ್ತು. ಮನೆಗಳಿಂದ ಮೆಟ್ರೋ ನಿಲ್ದಾಣಗಳವರೆಗೆ ಸೈಕಲ್​ಗಳಲ್ಲಿ ಬರುವ ಜನರು ತಮ್ಮ ಸೈಕಲ್​ಗಳನ್ನು ಮೆಟ್ರೋದಲ್ಲಿ ಕೊಂಡೊಯ್ಯಲು ಅವಕಾಶ ಇರಬೇಕು. ಹೀಗಿದ್ದಾಗ ಅವರು ಮೆಟ್ರೋ ನಿಲ್ದಾಣಗಳಿಂದ ಇಳಿದ ನಂತರ ಕಚೇರಿಗಳಿಗೆ ತೆರಳಲು ಅನುಕೂಲವಾಗುತ್ತದೆ. ಶಾಲೆಗಳಿಗೆ ಹೋಗುವ ಮಕ್ಕಳಿಗೂ ಇದರಿಂದ ಅನುಕೂಲವಾಗುತ್ತದೆ ಎಂದು ಸಾಕಷ್ಟು ಜನರು ಒತ್ತಾಯಿಸಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Tue, 7 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ