AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಕಾಮಗಾರಿ, ಬದಲಿ ಮಾರ್ಗ ಇಲ್ಲಿದೆ

ಹೆಬ್ಬಾಳ ಪ್ರೈಓವರ್ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿದ್ದು, ವಿಮಾನ ನಿಲ್ದಾಣ ಮತ್ತು ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ರಸ್ತೆಯಲ್ಲಿ ಬಿಡಿಎ ಮತ್ತು ಬಿಎಂಆರ್​ಸಿಎಲ್​​ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಬದಲಿ ಮಾರ್ಗ ಸೂಚಿಸಲಾಗಿದೆ.

ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಕಾಮಗಾರಿ, ಬದಲಿ ಮಾರ್ಗ ಇಲ್ಲಿದೆ
ಹೆಬ್ಬಾಳ ಫ್ಲೈಓವರ್, ಬದಲಿ ಮಾರ್ಗ
Follow us
ವಿವೇಕ ಬಿರಾದಾರ
|

Updated on: Jul 11, 2024 | 7:43 AM

ಬೆಂಗಳೂರು, ಜುಲೈ 11: ವಿಮಾನ ನಿಲ್ದಾಣ (Airport), ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಫ್ಲೈಓವರ್ (Hebbal Flyover)​ ಬೆಂಗಳೂರು-ಬಳ್ಳಾರಿ (Bengaluru-Ballari Road) ರಸ್ತೆಯಲ್ಲಿ ಬಿಡಿಎ (BDA) ಮತ್ತು ಬಿಎಂಆರ್​ಸಿಎಲ್ (BMRCL)​​ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರ ನಿಧಾನಗತಿಯಲ್ಲಿರುತ್ತದೆ. ಹೀಗಾಗಿ ಸೂಚಿಸಿರುವ ಬದಲಿ ಮಾರ್ಗಗಳಲ್ಲಿ ಸಂಚರಿಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸ್​ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಹೆಬ್ಬಾಳ ಪ್ರೈಓವರ್ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿದ್ದು, ವಿಮಾನ ನಿಲ್ದಾಣ ಮತ್ತು ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿದಿನ 2.5 ಲಕ್ಷಕ್ಕೂ ಅಧಿಕ ವಾಹನಗಳು ಸಂಚರಿಸುವುದರಿಂದ ಹಾಗೂ ಹೆಬ್ಬಾಳ ಥೈಓವರ್​ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರದಿಂದ ಸಂಚಾರ ದಟ್ಟಣೆಯುಂಟಾಗುತ್ತದೆ. ಸಂಚಾರ ದಟ್ಟಣೆಯನ್ನು ನಿವಾರಿಸಲು ವಿವಿಧ ಪೌರ ಸಂಸ್ಥೆಗಳಿಂದ ಕಾಮಗಾರಿಗಳನ್ನು ಕೈಗೊಂಡಿವೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ಸಂಚಾರ ಬಂದ್​: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ​ಪೊಲೀಸ್​

ಬಿಡಿಎ ವತಿಯಿಂದ ಪ್ರೈಓವರ್ ಅಗಲೀಕರಣ ಹಾಗೂ ಬಿಎಂಆರ್‌ಸಿಎಲ್ ನಿಂದ ಮೆಟ್ರೋ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪೀಕ್ ಅವರ್ಸ್​​​ನಲ್ಲಿ ಸಂಚಾರ ನಿಧಾನಗತಿಯಲ್ಲಿರುತ್ತದೆ. ಇದರಿಂದಾಗಿ ಏರ್‌ಪೋರ್ಟ್‌ಗೆ ಚಲಿಸುವ ವಾಹನಗಳು ನಿಗದಿತ ವೇಳೆಗೆ ಏರ್‌ಪೋರ್ಟ್ ತಲುಪಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಿಗಧಿತ ಅವಧಿಗಿಂತ ಎರಡು ಗಂಟೆ ಮುಂಚಿತವಾಗಿ ಪ್ರಯಾಣ ಪ್ರಾರಂಭಿಸುವುದು.

ಮಾರ್ಗ ಬದಲಾವಣೆ ಇಲ್ಲಿದೆ

ಕೆ.ಆರ್​ ಪುರಂ-ಏರ್​​ಪೋರ್ಟ್​​​ ಕಡೆಗೆ ತೆರಳಲು ಬಳಸಬೇಕಾದ ಮಾರ್ಗಗಳು:

  • ಹೊರವರ್ತುಲ ರಸ್ತೆಯಲ್ಲಿ ಬಲ ತಿರುವು ಪಡೆದು ಹೆಣ್ಣೂರು ಕ್ರಾಸ್-ಬಾಗಲೂರು ರಸ್ತೆಯ ಏರ್‌ಪೋರ್ಟ್ ಪರ್ಯಾಯ ರಸ್ತೆಯ ಮೂಲಕ ವಿಮಾನ ನಿಲ್ದಾಣಕ್ಕೆ ಹೋಗಬೇಕು.
  • ಹೊರವರ್ತುಲ ರಸ್ತೆಯಲ್ಲಿ ನಾಗವಾರ ಅಂಕ್ಷನ್ ಬಳ ಬಲ ತಿರುವು ಪಡೆದು ಥಣಿಸಂದ್ರ- ಹೆಗಡೆನಗರ ಮುಖ್ಯರಸ್ತೆ, ಬೆಳ್ಳಳ್ಳಿ ಸೇತುವೆ-ರೇವಾ ಜಂಕ್ಷನ್ ಮೂಲಕ ಬಲ ತಿರುವು ಪಡೆದು ಬಾಗಲೂರು ರಸ್ತೆಯ ಏರ್‌ಪೋರ್ಟ್ ಪರ್ಯಾಯ ರಸ್ತೆಯ ಮೂಲಕ ವಿಮಾನ ನಿಲ್ದಾಣಕ್ಕೆ ಹೋಗಬೇಕು.

ಕೆ.ಆರ್ ಪುರಂ- ಬೆಂಗಳೂರು ಕಡೆಗೆ ಬರುವ ವಾಹನಗಳು ಬಳಸಬೇಕಾದ ಮಾರ್ಗಗಳು:

  • ಹೊರವರ್ತುಲ ರಸ್ತೆಯ ಮೂಲಕ ಚಲಿಸುವ ವಾಹನಗಳು ಐಓಸಿ-ಮುಕುಂದ ಥಿಯೇಟರ್ ರಸ್ತೆಯ ಅಂಗರಾಜಮರಂ ಮೇಲೇತುದೆ ಮಾರ್ಗ ಮೂಲಕ ನಗರದ ಕಡೆಗೆ ಹೋಗಬಹುದು.
  • ನಾಗವಾರ ಮತ್ತು ಬ್ಯಾನರಿ ರಸ್ತೆ ಮಾರ್ಗವಾಗಿ ನಗರಕ್ಕೆ ಪ್ರವೇಶಿಸಬಹುದು.

ಬೆಂಗಳೂರು-ಬಳ್ಳಾರಿ ರಸ್ತೆಯಿಂದ ನಗರದ ಕಡೆಗೆ ಬರುವ ಭಾರಿ ಮತ್ತು ಮಧ್ಯಮ ಗಾತ್ರದ ಸರಕು ಸಾಗಾಣಿಕ ವಾಹನಗಳು ಬಳಸಬೇಕಾದ ಮಾರ್ಗಗಳು:

  • ಬೆಂಗಳೂರು-ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳು ದೇವನಹಳ್ಳಿಯ ರಾಣಿ ಕ್ರಾಸ್ ಬಳಿ ಎಡತಿರುವು ಪಡೆದು ಹೊಸಕೋಟೆ, ಕೋಲಾರ ಕಡೆಗೆ ಚಲಿಸಬೇಕು.
  • ಬೆಂಗಳೂರು-ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳು ದೇವನಹಳ್ಳಿಯ ದೊಡ್ಡಬಳ್ಳಾಪುರ ಕ್ರಾಸ್ ಬಳಿ ಎಡತಿರುವು ಪಡೆದು ಹೊಸಕೋಟಿ, ಕೋಲಾರ ಕಡೆಗೆ ಚಲಿಸಬೇಕು.
  • ಬೆಂಗಳೂರು-ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳು ವಿದ್ಯಾನಗರ ಕ್ರಾಸ್ ಬಳಿ ಎಡತಿರುವು ಪಡೆದು ರಜಾಕ್ ಪಾಳ್ಯ-ಬಾಗಲೂರು ಮೂಲಕ ಹೆಣ್ಣೂರು-ಕೆ.ಆರ್ ಪುರಂ ಮಾರ್ಗವಾಗಿ ನಗರದ ಕಡೆಗೆ ಚಲಿಸಬೇಕು.
  • ದೊಡ್ಡಬಳ್ಳಾಪುರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ರಾಜಾನುಕುಂಟೆ ಬಳಿ ಬಲ ತಿರುವು ಪಡೆದು ನೆಲಮಂಗಲ ಕಡೆಗೆ ಚಲಿಸುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ