AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಕಾಮಗಾರಿ, ಬದಲಿ ಮಾರ್ಗ ಇಲ್ಲಿದೆ

ಹೆಬ್ಬಾಳ ಪ್ರೈಓವರ್ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿದ್ದು, ವಿಮಾನ ನಿಲ್ದಾಣ ಮತ್ತು ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ರಸ್ತೆಯಲ್ಲಿ ಬಿಡಿಎ ಮತ್ತು ಬಿಎಂಆರ್​ಸಿಎಲ್​​ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಬದಲಿ ಮಾರ್ಗ ಸೂಚಿಸಲಾಗಿದೆ.

ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಕಾಮಗಾರಿ, ಬದಲಿ ಮಾರ್ಗ ಇಲ್ಲಿದೆ
ಹೆಬ್ಬಾಳ ಫ್ಲೈಓವರ್, ಬದಲಿ ಮಾರ್ಗ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jul 11, 2024 | 7:43 AM

Share

ಬೆಂಗಳೂರು, ಜುಲೈ 11: ವಿಮಾನ ನಿಲ್ದಾಣ (Airport), ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಫ್ಲೈಓವರ್ (Hebbal Flyover)​ ಬೆಂಗಳೂರು-ಬಳ್ಳಾರಿ (Bengaluru-Ballari Road) ರಸ್ತೆಯಲ್ಲಿ ಬಿಡಿಎ (BDA) ಮತ್ತು ಬಿಎಂಆರ್​ಸಿಎಲ್ (BMRCL)​​ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರ ನಿಧಾನಗತಿಯಲ್ಲಿರುತ್ತದೆ. ಹೀಗಾಗಿ ಸೂಚಿಸಿರುವ ಬದಲಿ ಮಾರ್ಗಗಳಲ್ಲಿ ಸಂಚರಿಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸ್​ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಹೆಬ್ಬಾಳ ಪ್ರೈಓವರ್ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿದ್ದು, ವಿಮಾನ ನಿಲ್ದಾಣ ಮತ್ತು ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿದಿನ 2.5 ಲಕ್ಷಕ್ಕೂ ಅಧಿಕ ವಾಹನಗಳು ಸಂಚರಿಸುವುದರಿಂದ ಹಾಗೂ ಹೆಬ್ಬಾಳ ಥೈಓವರ್​ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರದಿಂದ ಸಂಚಾರ ದಟ್ಟಣೆಯುಂಟಾಗುತ್ತದೆ. ಸಂಚಾರ ದಟ್ಟಣೆಯನ್ನು ನಿವಾರಿಸಲು ವಿವಿಧ ಪೌರ ಸಂಸ್ಥೆಗಳಿಂದ ಕಾಮಗಾರಿಗಳನ್ನು ಕೈಗೊಂಡಿವೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ಸಂಚಾರ ಬಂದ್​: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ​ಪೊಲೀಸ್​

ಬಿಡಿಎ ವತಿಯಿಂದ ಪ್ರೈಓವರ್ ಅಗಲೀಕರಣ ಹಾಗೂ ಬಿಎಂಆರ್‌ಸಿಎಲ್ ನಿಂದ ಮೆಟ್ರೋ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪೀಕ್ ಅವರ್ಸ್​​​ನಲ್ಲಿ ಸಂಚಾರ ನಿಧಾನಗತಿಯಲ್ಲಿರುತ್ತದೆ. ಇದರಿಂದಾಗಿ ಏರ್‌ಪೋರ್ಟ್‌ಗೆ ಚಲಿಸುವ ವಾಹನಗಳು ನಿಗದಿತ ವೇಳೆಗೆ ಏರ್‌ಪೋರ್ಟ್ ತಲುಪಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಿಗಧಿತ ಅವಧಿಗಿಂತ ಎರಡು ಗಂಟೆ ಮುಂಚಿತವಾಗಿ ಪ್ರಯಾಣ ಪ್ರಾರಂಭಿಸುವುದು.

ಮಾರ್ಗ ಬದಲಾವಣೆ ಇಲ್ಲಿದೆ

ಕೆ.ಆರ್​ ಪುರಂ-ಏರ್​​ಪೋರ್ಟ್​​​ ಕಡೆಗೆ ತೆರಳಲು ಬಳಸಬೇಕಾದ ಮಾರ್ಗಗಳು:

  • ಹೊರವರ್ತುಲ ರಸ್ತೆಯಲ್ಲಿ ಬಲ ತಿರುವು ಪಡೆದು ಹೆಣ್ಣೂರು ಕ್ರಾಸ್-ಬಾಗಲೂರು ರಸ್ತೆಯ ಏರ್‌ಪೋರ್ಟ್ ಪರ್ಯಾಯ ರಸ್ತೆಯ ಮೂಲಕ ವಿಮಾನ ನಿಲ್ದಾಣಕ್ಕೆ ಹೋಗಬೇಕು.
  • ಹೊರವರ್ತುಲ ರಸ್ತೆಯಲ್ಲಿ ನಾಗವಾರ ಅಂಕ್ಷನ್ ಬಳ ಬಲ ತಿರುವು ಪಡೆದು ಥಣಿಸಂದ್ರ- ಹೆಗಡೆನಗರ ಮುಖ್ಯರಸ್ತೆ, ಬೆಳ್ಳಳ್ಳಿ ಸೇತುವೆ-ರೇವಾ ಜಂಕ್ಷನ್ ಮೂಲಕ ಬಲ ತಿರುವು ಪಡೆದು ಬಾಗಲೂರು ರಸ್ತೆಯ ಏರ್‌ಪೋರ್ಟ್ ಪರ್ಯಾಯ ರಸ್ತೆಯ ಮೂಲಕ ವಿಮಾನ ನಿಲ್ದಾಣಕ್ಕೆ ಹೋಗಬೇಕು.

ಕೆ.ಆರ್ ಪುರಂ- ಬೆಂಗಳೂರು ಕಡೆಗೆ ಬರುವ ವಾಹನಗಳು ಬಳಸಬೇಕಾದ ಮಾರ್ಗಗಳು:

  • ಹೊರವರ್ತುಲ ರಸ್ತೆಯ ಮೂಲಕ ಚಲಿಸುವ ವಾಹನಗಳು ಐಓಸಿ-ಮುಕುಂದ ಥಿಯೇಟರ್ ರಸ್ತೆಯ ಅಂಗರಾಜಮರಂ ಮೇಲೇತುದೆ ಮಾರ್ಗ ಮೂಲಕ ನಗರದ ಕಡೆಗೆ ಹೋಗಬಹುದು.
  • ನಾಗವಾರ ಮತ್ತು ಬ್ಯಾನರಿ ರಸ್ತೆ ಮಾರ್ಗವಾಗಿ ನಗರಕ್ಕೆ ಪ್ರವೇಶಿಸಬಹುದು.

ಬೆಂಗಳೂರು-ಬಳ್ಳಾರಿ ರಸ್ತೆಯಿಂದ ನಗರದ ಕಡೆಗೆ ಬರುವ ಭಾರಿ ಮತ್ತು ಮಧ್ಯಮ ಗಾತ್ರದ ಸರಕು ಸಾಗಾಣಿಕ ವಾಹನಗಳು ಬಳಸಬೇಕಾದ ಮಾರ್ಗಗಳು:

  • ಬೆಂಗಳೂರು-ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳು ದೇವನಹಳ್ಳಿಯ ರಾಣಿ ಕ್ರಾಸ್ ಬಳಿ ಎಡತಿರುವು ಪಡೆದು ಹೊಸಕೋಟೆ, ಕೋಲಾರ ಕಡೆಗೆ ಚಲಿಸಬೇಕು.
  • ಬೆಂಗಳೂರು-ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳು ದೇವನಹಳ್ಳಿಯ ದೊಡ್ಡಬಳ್ಳಾಪುರ ಕ್ರಾಸ್ ಬಳಿ ಎಡತಿರುವು ಪಡೆದು ಹೊಸಕೋಟಿ, ಕೋಲಾರ ಕಡೆಗೆ ಚಲಿಸಬೇಕು.
  • ಬೆಂಗಳೂರು-ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳು ವಿದ್ಯಾನಗರ ಕ್ರಾಸ್ ಬಳಿ ಎಡತಿರುವು ಪಡೆದು ರಜಾಕ್ ಪಾಳ್ಯ-ಬಾಗಲೂರು ಮೂಲಕ ಹೆಣ್ಣೂರು-ಕೆ.ಆರ್ ಪುರಂ ಮಾರ್ಗವಾಗಿ ನಗರದ ಕಡೆಗೆ ಚಲಿಸಬೇಕು.
  • ದೊಡ್ಡಬಳ್ಳಾಪುರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ರಾಜಾನುಕುಂಟೆ ಬಳಿ ಬಲ ತಿರುವು ಪಡೆದು ನೆಲಮಂಗಲ ಕಡೆಗೆ ಚಲಿಸುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?