ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಕಾಮಗಾರಿ, ಬದಲಿ ಮಾರ್ಗ ಇಲ್ಲಿದೆ

ಹೆಬ್ಬಾಳ ಪ್ರೈಓವರ್ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿದ್ದು, ವಿಮಾನ ನಿಲ್ದಾಣ ಮತ್ತು ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ರಸ್ತೆಯಲ್ಲಿ ಬಿಡಿಎ ಮತ್ತು ಬಿಎಂಆರ್​ಸಿಎಲ್​​ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಬದಲಿ ಮಾರ್ಗ ಸೂಚಿಸಲಾಗಿದೆ.

ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಕಾಮಗಾರಿ, ಬದಲಿ ಮಾರ್ಗ ಇಲ್ಲಿದೆ
ಹೆಬ್ಬಾಳ ಫ್ಲೈಓವರ್, ಬದಲಿ ಮಾರ್ಗ
Follow us
|

Updated on: Jul 11, 2024 | 7:43 AM

ಬೆಂಗಳೂರು, ಜುಲೈ 11: ವಿಮಾನ ನಿಲ್ದಾಣ (Airport), ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳ ಫ್ಲೈಓವರ್ (Hebbal Flyover)​ ಬೆಂಗಳೂರು-ಬಳ್ಳಾರಿ (Bengaluru-Ballari Road) ರಸ್ತೆಯಲ್ಲಿ ಬಿಡಿಎ (BDA) ಮತ್ತು ಬಿಎಂಆರ್​ಸಿಎಲ್ (BMRCL)​​ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರ ನಿಧಾನಗತಿಯಲ್ಲಿರುತ್ತದೆ. ಹೀಗಾಗಿ ಸೂಚಿಸಿರುವ ಬದಲಿ ಮಾರ್ಗಗಳಲ್ಲಿ ಸಂಚರಿಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸ್​ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಹೆಬ್ಬಾಳ ಪ್ರೈಓವರ್ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿದ್ದು, ವಿಮಾನ ನಿಲ್ದಾಣ ಮತ್ತು ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿದಿನ 2.5 ಲಕ್ಷಕ್ಕೂ ಅಧಿಕ ವಾಹನಗಳು ಸಂಚರಿಸುವುದರಿಂದ ಹಾಗೂ ಹೆಬ್ಬಾಳ ಥೈಓವರ್​ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರದಿಂದ ಸಂಚಾರ ದಟ್ಟಣೆಯುಂಟಾಗುತ್ತದೆ. ಸಂಚಾರ ದಟ್ಟಣೆಯನ್ನು ನಿವಾರಿಸಲು ವಿವಿಧ ಪೌರ ಸಂಸ್ಥೆಗಳಿಂದ ಕಾಮಗಾರಿಗಳನ್ನು ಕೈಗೊಂಡಿವೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 4 ದಿನ ಸಂಚಾರ ಬಂದ್​: ಪರ್ಯಾಯ ಮಾರ್ಗ ಸೂಚಿಸಿದ ಟ್ರಾಫಿಕ್ ​ಪೊಲೀಸ್​

ಬಿಡಿಎ ವತಿಯಿಂದ ಪ್ರೈಓವರ್ ಅಗಲೀಕರಣ ಹಾಗೂ ಬಿಎಂಆರ್‌ಸಿಎಲ್ ನಿಂದ ಮೆಟ್ರೋ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಪೀಕ್ ಅವರ್ಸ್​​​ನಲ್ಲಿ ಸಂಚಾರ ನಿಧಾನಗತಿಯಲ್ಲಿರುತ್ತದೆ. ಇದರಿಂದಾಗಿ ಏರ್‌ಪೋರ್ಟ್‌ಗೆ ಚಲಿಸುವ ವಾಹನಗಳು ನಿಗದಿತ ವೇಳೆಗೆ ಏರ್‌ಪೋರ್ಟ್ ತಲುಪಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಿಗಧಿತ ಅವಧಿಗಿಂತ ಎರಡು ಗಂಟೆ ಮುಂಚಿತವಾಗಿ ಪ್ರಯಾಣ ಪ್ರಾರಂಭಿಸುವುದು.

ಮಾರ್ಗ ಬದಲಾವಣೆ ಇಲ್ಲಿದೆ

ಕೆ.ಆರ್​ ಪುರಂ-ಏರ್​​ಪೋರ್ಟ್​​​ ಕಡೆಗೆ ತೆರಳಲು ಬಳಸಬೇಕಾದ ಮಾರ್ಗಗಳು:

  • ಹೊರವರ್ತುಲ ರಸ್ತೆಯಲ್ಲಿ ಬಲ ತಿರುವು ಪಡೆದು ಹೆಣ್ಣೂರು ಕ್ರಾಸ್-ಬಾಗಲೂರು ರಸ್ತೆಯ ಏರ್‌ಪೋರ್ಟ್ ಪರ್ಯಾಯ ರಸ್ತೆಯ ಮೂಲಕ ವಿಮಾನ ನಿಲ್ದಾಣಕ್ಕೆ ಹೋಗಬೇಕು.
  • ಹೊರವರ್ತುಲ ರಸ್ತೆಯಲ್ಲಿ ನಾಗವಾರ ಅಂಕ್ಷನ್ ಬಳ ಬಲ ತಿರುವು ಪಡೆದು ಥಣಿಸಂದ್ರ- ಹೆಗಡೆನಗರ ಮುಖ್ಯರಸ್ತೆ, ಬೆಳ್ಳಳ್ಳಿ ಸೇತುವೆ-ರೇವಾ ಜಂಕ್ಷನ್ ಮೂಲಕ ಬಲ ತಿರುವು ಪಡೆದು ಬಾಗಲೂರು ರಸ್ತೆಯ ಏರ್‌ಪೋರ್ಟ್ ಪರ್ಯಾಯ ರಸ್ತೆಯ ಮೂಲಕ ವಿಮಾನ ನಿಲ್ದಾಣಕ್ಕೆ ಹೋಗಬೇಕು.

ಕೆ.ಆರ್ ಪುರಂ- ಬೆಂಗಳೂರು ಕಡೆಗೆ ಬರುವ ವಾಹನಗಳು ಬಳಸಬೇಕಾದ ಮಾರ್ಗಗಳು:

  • ಹೊರವರ್ತುಲ ರಸ್ತೆಯ ಮೂಲಕ ಚಲಿಸುವ ವಾಹನಗಳು ಐಓಸಿ-ಮುಕುಂದ ಥಿಯೇಟರ್ ರಸ್ತೆಯ ಅಂಗರಾಜಮರಂ ಮೇಲೇತುದೆ ಮಾರ್ಗ ಮೂಲಕ ನಗರದ ಕಡೆಗೆ ಹೋಗಬಹುದು.
  • ನಾಗವಾರ ಮತ್ತು ಬ್ಯಾನರಿ ರಸ್ತೆ ಮಾರ್ಗವಾಗಿ ನಗರಕ್ಕೆ ಪ್ರವೇಶಿಸಬಹುದು.

ಬೆಂಗಳೂರು-ಬಳ್ಳಾರಿ ರಸ್ತೆಯಿಂದ ನಗರದ ಕಡೆಗೆ ಬರುವ ಭಾರಿ ಮತ್ತು ಮಧ್ಯಮ ಗಾತ್ರದ ಸರಕು ಸಾಗಾಣಿಕ ವಾಹನಗಳು ಬಳಸಬೇಕಾದ ಮಾರ್ಗಗಳು:

  • ಬೆಂಗಳೂರು-ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳು ದೇವನಹಳ್ಳಿಯ ರಾಣಿ ಕ್ರಾಸ್ ಬಳಿ ಎಡತಿರುವು ಪಡೆದು ಹೊಸಕೋಟೆ, ಕೋಲಾರ ಕಡೆಗೆ ಚಲಿಸಬೇಕು.
  • ಬೆಂಗಳೂರು-ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳು ದೇವನಹಳ್ಳಿಯ ದೊಡ್ಡಬಳ್ಳಾಪುರ ಕ್ರಾಸ್ ಬಳಿ ಎಡತಿರುವು ಪಡೆದು ಹೊಸಕೋಟಿ, ಕೋಲಾರ ಕಡೆಗೆ ಚಲಿಸಬೇಕು.
  • ಬೆಂಗಳೂರು-ಬಳ್ಳಾರಿ ರಸ್ತೆಯಿಂದ ಬರುವ ವಾಹನಗಳು ವಿದ್ಯಾನಗರ ಕ್ರಾಸ್ ಬಳಿ ಎಡತಿರುವು ಪಡೆದು ರಜಾಕ್ ಪಾಳ್ಯ-ಬಾಗಲೂರು ಮೂಲಕ ಹೆಣ್ಣೂರು-ಕೆ.ಆರ್ ಪುರಂ ಮಾರ್ಗವಾಗಿ ನಗರದ ಕಡೆಗೆ ಚಲಿಸಬೇಕು.
  • ದೊಡ್ಡಬಳ್ಳಾಪುರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ರಾಜಾನುಕುಂಟೆ ಬಳಿ ಬಲ ತಿರುವು ಪಡೆದು ನೆಲಮಂಗಲ ಕಡೆಗೆ ಚಲಿಸುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ