AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೆಂಗಳೂರಿಗರೇ ಗಮನಿಸಿ; ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ

Bengaluru Metro: ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​  ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

Namma Metro: ಬೆಂಗಳೂರಿಗರೇ ಗಮನಿಸಿ; ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ
ನಮ್ಮ ಮೆಟ್ರೋ
TV9 Web
| Edited By: |

Updated on: Jul 19, 2021 | 4:26 PM

Share

ಬೆಂಗಳೂರು: ಮೆಟ್ರೋ ರೈಲು ಸಂಚಾರದ ಅವಧಿ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ನಮ್ಮ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಈಗ ರಾತ್ರಿ 9ರವರೆಗೆ ಮೆಟ್ರೋ ಸಂಚಾರ ಸೇವೆಯನ್ನು ಒದಗಿಸವಂತೆ ಅವಧಿ ವಿಸ್ತರಿಸಿ ಬಿಎಂಆರ್​ಸಿಎಲ್ ಆದೇಶಿಸಿದೆ. ಈ ಮೂಲಕ ಬೆಂಗಳೂರು ಮಹಾನಗರದ ಮೆಟ್ರೋ (Bengaluru Namma metro) ಪ್ರಯಾಣಿಕರ ಸಂಚಾರಕ್ಕೆ ಇನ್ನಷ್ಟು ಸೌಲಭ್ಯ ಒದಗಿಸಿದೆ.

ಇತ್ತೀಚಿಗಷ್ಟೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ಇತ್ತೀಚಿಗಷ್ಟೇ ಅಂಜುಂ ಪರ್ವೇಜ್ ನೇಮಕವಾಗಿದ್ದಾರೆ.  ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್​ ಅವರನ್ನು ಬೆಂಗಳೂರು ಮೆಟ್ರೋ ಎಂಡಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಪರ್ವೇಜ್, ಕರ್ನಾಟಕ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರದಿಂದ ಬಿಎಮ್​ಆರ್​ಸಿಎಲ್ ಎಂಡಿ ಆಗಿ ನೇಮಕಾತಿ ಹೊಂದಿದ್ದಾರೆ.

ಬೆಂಗಳೂರು ಮೆಟ್ರೋ ಯೋಜನೆಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್​ ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​  ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಮರ ಅಧಿಕಾರಿ ಮತ್ತು ಡಿಸಿಎಫ್ ವರ್ತನೆ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಮರ ಬೆಳೆಸಲು ಸೂಕ್ತ ಪರ್ಯಾಯ ಜಾಗವನ್ನು ಪರಿಶೀಲಿಸಬೇಕಿತ್ತು ಎಂದು ಹೇಳಿತು. ಕಡಿಯುವ ಮರಗಳಿಗೆ ಬದಲಿಯಾಗಿ ಬೆಳೆಸುವ ಮರಗಳು ಮತ್ತು ಮಣ್ಣಿನ ಪರೀಕ್ಷೆಯ ವಿವರವನ್ನು ಎರಡು ವಾರಗಳ ಒಳಗೆ ನೀಡಬೇಕು ಎಂದು ಹೇಳಿತು.

ಇದನ್ನೂ ಓದಿ: 

Karnataka Weather Update: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Namma Metro: ಬೆಂಗಳೂರು ಮೆಟ್ರೋ 2ನೇ ಹಂತದ ಕಾಮಗಾರಿ ವಿಳಂಬವಾಗುತ್ತಿರುವುದೇಕೆ?; 10 ಕಾರಣಗಳು ಇಲ್ಲಿವೆ

(BMRCL announced extension of Bengaluru Namma metro traffic period till 9 pm) 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ