AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಕೆಆರ್ ಪುರಂ, ವೈಟ್ ಫೀಲ್ಡ್ ಮಧ್ಯೆ ಮೆಟ್ರೋ ಸಂಚಾರಕ್ಕೆ ದಿನಗಣನೆ; ಇಂದಿನಿಂದ ಕೊನೆಯ ಹಂತದ ಪ್ರಾಯೋಗಿಕ ಸಂಚಾರ

ಎಲ್ಲವೂ ಅಂದಿಕೊಂಡಂತೆಯೇ ನಡೆದರೆ ಮಾರ್ಚ್​ 15ರ ಒಳಗಾಗಿ ಕೆಆರ್ ಪುರಂ ಹಾಗೂ ವೈಟ್ ಫೀಲ್ಡ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಆರಂಭವಾಗಲಿದೆ.

Namma Metro: ಕೆಆರ್ ಪುರಂ, ವೈಟ್ ಫೀಲ್ಡ್ ಮಧ್ಯೆ ಮೆಟ್ರೋ ಸಂಚಾರಕ್ಕೆ ದಿನಗಣನೆ; ಇಂದಿನಿಂದ ಕೊನೆಯ ಹಂತದ ಪ್ರಾಯೋಗಿಕ ಸಂಚಾರ
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Feb 22, 2023 | 9:53 AM

Share

ಬೆಂಗಳೂರು: ಕೆಆರ್ ಪುರಂ ಹಾಗೂ ವೈಟ್ ಫೀಲ್ಡ್ ಮಧ್ಯೆ ಮೆಟ್ರೋ (Metro Train) ಸಂಚಾರ ಬಹುತೇಕ ಮಾರ್ಚ್ 15ರ ಒಳಗಾಗಿ ಆರಂಭಗೊಳ್ಳುವ ನಿರೀಕ್ಷೆ ಇದೆ. ಬಿಎಂಆರ್​ಸಿಎಲ್ (BMRCL) ಇಂದಿನಿಂದ (ಫೆ. 22) ಕೊನೆಯ ಹಂತದ ಪ್ರಾಯೋಗಿಕ ಸಂಚಾರ ನಡೆಸಲಿದೆ. ಸುರಕ್ಷತಾ ಆಯುಕ್ತರ ನೇತೃತ್ವದಲ್ಲಿ ಸೇಫ್ಟಿ ಕಮಿಷನ್ ಮೂರು ದಿನಗಳ ಕಾಲ ಪ್ರಾಯೋಗಿಕ ಸಂಚಾರ ನಡೆಸಲಿದೆ. ಈ ಅವಧಿಯಲ್ಲಿ ಸಿಗ್ನಲಿಂಗ್, ಟ್ರ್ಯಾಕ್, ರೈಲಿನ ಸಂಚಾರ, ನಿಲ್ದಾಣಗಳ ನಿರ್ವಹಣೆ ಸೇರಿದಂತೆ ಸುರಕ್ಷಿತೆ ಮತ್ತು ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ನಂತರ ಒಂದು ವಾರದ ಬಳಿಕ ವರದಿ ಸಲ್ಲಿಸಲಾಗುತ್ತದೆ.

ಪರೀಕ್ಷಾರ್ಥ ಸಂಚಾರದ ವೇಳೆ ಯಾವುದೇ ಲೋಪಗಳು ಕಂಡು ಬಾರದೇ ಇದ್ದಲ್ಲಿ ಬಿಎಂಆರ್​​ಸಿಎಲ್ ವಿಸ್ತೃತ ಮಾರ್ಗದಲ್ಲಿ ಮೆಟ್ರೋ ಸಂಚಾರ ಉದ್ಘಾಟನೆಗೆ ತಯಾರಿ ನಡೆಸಲಿದೆ. ನಂತರ ರಾಜ್ಯ ಸರ್ಕಾರಕ್ಕೆ ಉದ್ಘಾಟನೆ ದಿನಾಂಕ ಪ್ರಕಟಣೆಗಾಗಿ ಮನವಿ ಮಾಡಲಿದೆ. ಎಲ್ಲವೂ ಅಂದಿಕೊಂಡಂತೆಯೇ ನಡೆದರೆ ಮಾರ್ಚ್​ 15ರ ಒಳಗಾಗಿ ಕೆಆರ್ ಪುರಂ ಹಾಗೂ ವೈಟ್ ಫೀಲ್ಡ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಆರಂಭವಾಗಲಿದೆ.

ಇದನ್ನೂ ಓದಿ: Namma Metro: ಬೆಂಗಳೂರು ಮೆಟ್ರೋದಲ್ಲಿ ತಪ್ಪಿದ ದೊಡ್ಡ ಅನಾಹುತ, ರಹಸ್ಯವಾಗಿ ಹಳಿ ಬಿರುಕನ್ನು ದುರಸ್ಥಿಗೊಳಿಸಿದ BMRCL

ಇತ್ತೀಚೆಗಷ್ಟೇ ನಾಯಂಡಹಳ್ಳಿ- ಕೆಂಗೇರಿಗೆ ಹೋಗುವ ನೇರಳೆ ಬಣ್ಣದ ಮೆಟ್ರೋ ಮಾರ್ಗದ, ಪಟ್ಟಣಗೆರೆ ನಿಲ್ದಾಣದ ಕೂಗಳತೆ ದೂರದ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದ ಬಗ್ಗೆ ವರದಿಯಾಗಿತ್ತು. ಹಳಿ ಬಿರುಕು ಕಾಣಿಸಿಕೊಂಡಿದ್ದನ್ನು ರೈಲು ಚಾಲಕ ಮತ್ತು ಕೆಳಮಟ್ಟದ ಸಿಬ್ಬಂದಿ ಗಮನಿಸಿದ್ದರು. ರೈಲು ಪ್ರಯಾಣದ ವೇಳೆ ಕೇಳಿ ಬರುವ ಶಬ್ದದಲ್ಲಿ ವ್ಯತ್ಯಾಸ ಕೇಳಿಬಂದಿದ್ದರಿಂದ ಮೆಟ್ರೋ ಸ್ಪೀಡ್​ನಲ್ಲಿ ಬದಲಾವಣೆ ಮಾಡಿದಾಗ ವಿಷಯ ಬೆಳಕಿಗೆ ಬಂದಿತ್ತು. ಕೂಡಲೇ ವಿಷಯವನ್ನು ಬಿಎಂಆರ್​ಸಿಎಲ್​ ಅಧಿಕಾರಿಗಳಿಗೆ ತಿಳಿಸಿದ್ದರು. ನಂತರ ದುರಸ್ತಿ ಮಾಡಲಾಗಿತ್ತು. ಇದರಿಂದ ಸಂಭಾವ್ಯ ಭಾರೀ ದುರಂತ ತಪ್ಪಿತ್ತು. ಇದರಿಂದ ಇಡೀ ದಿನ ಮತ್ತೊಂದು ಟ್ರ್ಯಾಕ್​ನಲ್ಲಿ ಮೆಟ್ರೋ ಓಡಾಟ ನಡೆಸಿತ್ತು. ಹೀಗಾಗಿ ಕೆಆರ್ ಪುರಂ ಹಾಗೂ ವೈಟ್ ಫೀಲ್ಡ್ ಮಧ್ಯೆ ನಡೆಯಲಿರುವ ಪರೀಕ್ಷಾರ್ಥ ಸಂಚಾರ ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ