AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಕೆಆರ್ ಪುರಂ, ವೈಟ್ ಫೀಲ್ಡ್ ಮಧ್ಯೆ ಮೆಟ್ರೋ ಸಂಚಾರಕ್ಕೆ ದಿನಗಣನೆ; ಇಂದಿನಿಂದ ಕೊನೆಯ ಹಂತದ ಪ್ರಾಯೋಗಿಕ ಸಂಚಾರ

ಎಲ್ಲವೂ ಅಂದಿಕೊಂಡಂತೆಯೇ ನಡೆದರೆ ಮಾರ್ಚ್​ 15ರ ಒಳಗಾಗಿ ಕೆಆರ್ ಪುರಂ ಹಾಗೂ ವೈಟ್ ಫೀಲ್ಡ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಆರಂಭವಾಗಲಿದೆ.

Namma Metro: ಕೆಆರ್ ಪುರಂ, ವೈಟ್ ಫೀಲ್ಡ್ ಮಧ್ಯೆ ಮೆಟ್ರೋ ಸಂಚಾರಕ್ಕೆ ದಿನಗಣನೆ; ಇಂದಿನಿಂದ ಕೊನೆಯ ಹಂತದ ಪ್ರಾಯೋಗಿಕ ಸಂಚಾರ
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Feb 22, 2023 | 9:53 AM

Share

ಬೆಂಗಳೂರು: ಕೆಆರ್ ಪುರಂ ಹಾಗೂ ವೈಟ್ ಫೀಲ್ಡ್ ಮಧ್ಯೆ ಮೆಟ್ರೋ (Metro Train) ಸಂಚಾರ ಬಹುತೇಕ ಮಾರ್ಚ್ 15ರ ಒಳಗಾಗಿ ಆರಂಭಗೊಳ್ಳುವ ನಿರೀಕ್ಷೆ ಇದೆ. ಬಿಎಂಆರ್​ಸಿಎಲ್ (BMRCL) ಇಂದಿನಿಂದ (ಫೆ. 22) ಕೊನೆಯ ಹಂತದ ಪ್ರಾಯೋಗಿಕ ಸಂಚಾರ ನಡೆಸಲಿದೆ. ಸುರಕ್ಷತಾ ಆಯುಕ್ತರ ನೇತೃತ್ವದಲ್ಲಿ ಸೇಫ್ಟಿ ಕಮಿಷನ್ ಮೂರು ದಿನಗಳ ಕಾಲ ಪ್ರಾಯೋಗಿಕ ಸಂಚಾರ ನಡೆಸಲಿದೆ. ಈ ಅವಧಿಯಲ್ಲಿ ಸಿಗ್ನಲಿಂಗ್, ಟ್ರ್ಯಾಕ್, ರೈಲಿನ ಸಂಚಾರ, ನಿಲ್ದಾಣಗಳ ನಿರ್ವಹಣೆ ಸೇರಿದಂತೆ ಸುರಕ್ಷಿತೆ ಮತ್ತು ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ನಂತರ ಒಂದು ವಾರದ ಬಳಿಕ ವರದಿ ಸಲ್ಲಿಸಲಾಗುತ್ತದೆ.

ಪರೀಕ್ಷಾರ್ಥ ಸಂಚಾರದ ವೇಳೆ ಯಾವುದೇ ಲೋಪಗಳು ಕಂಡು ಬಾರದೇ ಇದ್ದಲ್ಲಿ ಬಿಎಂಆರ್​​ಸಿಎಲ್ ವಿಸ್ತೃತ ಮಾರ್ಗದಲ್ಲಿ ಮೆಟ್ರೋ ಸಂಚಾರ ಉದ್ಘಾಟನೆಗೆ ತಯಾರಿ ನಡೆಸಲಿದೆ. ನಂತರ ರಾಜ್ಯ ಸರ್ಕಾರಕ್ಕೆ ಉದ್ಘಾಟನೆ ದಿನಾಂಕ ಪ್ರಕಟಣೆಗಾಗಿ ಮನವಿ ಮಾಡಲಿದೆ. ಎಲ್ಲವೂ ಅಂದಿಕೊಂಡಂತೆಯೇ ನಡೆದರೆ ಮಾರ್ಚ್​ 15ರ ಒಳಗಾಗಿ ಕೆಆರ್ ಪುರಂ ಹಾಗೂ ವೈಟ್ ಫೀಲ್ಡ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಆರಂಭವಾಗಲಿದೆ.

ಇದನ್ನೂ ಓದಿ: Namma Metro: ಬೆಂಗಳೂರು ಮೆಟ್ರೋದಲ್ಲಿ ತಪ್ಪಿದ ದೊಡ್ಡ ಅನಾಹುತ, ರಹಸ್ಯವಾಗಿ ಹಳಿ ಬಿರುಕನ್ನು ದುರಸ್ಥಿಗೊಳಿಸಿದ BMRCL

ಇತ್ತೀಚೆಗಷ್ಟೇ ನಾಯಂಡಹಳ್ಳಿ- ಕೆಂಗೇರಿಗೆ ಹೋಗುವ ನೇರಳೆ ಬಣ್ಣದ ಮೆಟ್ರೋ ಮಾರ್ಗದ, ಪಟ್ಟಣಗೆರೆ ನಿಲ್ದಾಣದ ಕೂಗಳತೆ ದೂರದ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದ ಬಗ್ಗೆ ವರದಿಯಾಗಿತ್ತು. ಹಳಿ ಬಿರುಕು ಕಾಣಿಸಿಕೊಂಡಿದ್ದನ್ನು ರೈಲು ಚಾಲಕ ಮತ್ತು ಕೆಳಮಟ್ಟದ ಸಿಬ್ಬಂದಿ ಗಮನಿಸಿದ್ದರು. ರೈಲು ಪ್ರಯಾಣದ ವೇಳೆ ಕೇಳಿ ಬರುವ ಶಬ್ದದಲ್ಲಿ ವ್ಯತ್ಯಾಸ ಕೇಳಿಬಂದಿದ್ದರಿಂದ ಮೆಟ್ರೋ ಸ್ಪೀಡ್​ನಲ್ಲಿ ಬದಲಾವಣೆ ಮಾಡಿದಾಗ ವಿಷಯ ಬೆಳಕಿಗೆ ಬಂದಿತ್ತು. ಕೂಡಲೇ ವಿಷಯವನ್ನು ಬಿಎಂಆರ್​ಸಿಎಲ್​ ಅಧಿಕಾರಿಗಳಿಗೆ ತಿಳಿಸಿದ್ದರು. ನಂತರ ದುರಸ್ತಿ ಮಾಡಲಾಗಿತ್ತು. ಇದರಿಂದ ಸಂಭಾವ್ಯ ಭಾರೀ ದುರಂತ ತಪ್ಪಿತ್ತು. ಇದರಿಂದ ಇಡೀ ದಿನ ಮತ್ತೊಂದು ಟ್ರ್ಯಾಕ್​ನಲ್ಲಿ ಮೆಟ್ರೋ ಓಡಾಟ ನಡೆಸಿತ್ತು. ಹೀಗಾಗಿ ಕೆಆರ್ ಪುರಂ ಹಾಗೂ ವೈಟ್ ಫೀಲ್ಡ್ ಮಧ್ಯೆ ನಡೆಯಲಿರುವ ಪರೀಕ್ಷಾರ್ಥ ಸಂಚಾರ ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ