ನಮ್ಮ ಮೆಟ್ರೋ ಮೂರನೇ ಹಂತ; ಸರ್ಜಾಪುರ ಹೆಬ್ಬಾಳ ಮಾರ್ಗ ಕಾಮಗಾರಿಗೆ ಬಿಎಂಆರ್​​ಸಿಎಲ್ ಗಡುವು ಫಿಕ್ಸ್

ನಮ್ಮ ಮೆಟ್ರೋ ಮೂರನೇ ಹಂತದ ವಿವರವಾದ ಯೋಜನಾ ವರದಿಯನ್ನು ಬಿಎಂಆರ್​ಸಿಎಲ್ ರಾಜ್ಯ ಸರ್ಕಾರಕ್ಕೆ ಕಳೆದ ವಾರ ಸಲ್ಲಿಸಿತ್ತು. ಇದೀಗ, 3ಎ ಲೈನ್‌ ಕಾಮಗಾರಿಗೆ ಗಡುವನ್ನೂ ನಿಗದಿ ಮಾಡಿದೆ. 3ಎ ಲೈನ್​ ಕಾಮಗಾರಿಯ ಡೆಡ್​ಲೈನ್, ನಿಲ್ದಾಣಗಳು, ಪ್ರಯಾಣಿಕ ಸಾಮರ್ಥ್ಯ ಇತ್ಯಾದಿ ವಿವರಗಳು ಇಲ್ಲಿವೆ.

ನಮ್ಮ ಮೆಟ್ರೋ ಮೂರನೇ ಹಂತ; ಸರ್ಜಾಪುರ ಹೆಬ್ಬಾಳ ಮಾರ್ಗ ಕಾಮಗಾರಿಗೆ ಬಿಎಂಆರ್​​ಸಿಎಲ್ ಗಡುವು ಫಿಕ್ಸ್
ನಮ್ಮ ಮೆಟ್ರೋ ಮೂರನೇ ಹಂತ; ಸರ್ಜಾಪುರ ಹೆಬ್ಬಾಳ ಮಾರ್ಗ ಕಾಮಗಾರಿಗೆ ಬಿಎಂಆರ್​​ಸಿಎಲ್ ಗಡುವು ಫಿಕ್ಸ್ (ಸಾಂದರ್ಭಿಕ ಚಿತ್ರ)
Follow us
|

Updated on: Jun 27, 2024 | 10:34 AM

ಬೆಂಗಳೂರು, ಜೂನ್ 27: ನಮ್ಮ ಮೆಟ್ರೋ ಮೂರನೇ ಹಂತದ 3ಎ ಲೈನ್‌ನ ಕಾಮಗಾರಿ 2031ಕ್ಕೆ ಪೂರ್ಣಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಬಿಎಂಆರ್​​ಸಿಎಲ್ ತಿಳಿಸಿದೆ. ಸರ್ಜಾಪುರದಿಂದ ಹೆಬ್ಬಾಳದವರೆಗಿನ 36.5 ಕಿ.ಮೀ ಉದ್ದದ 3ಎ ಲೈನ್‌ನ ಕಾಮಗಾರಿಗೆ 2031 ರ ಗಡುವು ನಿಗದಿಪಡಿಸಲಾಗಿದೆ. 18 ತಿಂಗಳ ವಿಳಂಬದ ನಂತರ, ಬಿಎಂಆರ್​​ಸಿಎಲ್ ಕಳೆದ ವಾರ ರಾಜ್ಯ ಸರ್ಕಾರಕ್ಕೆ ವಿವರವಾದ ಯೋಜನಾ ವರದಿಯನ್ನು ಸಲ್ಲಿಸಿತ್ತು.

ಈ ಯೋಜನೆಗೆ 26,405 ಕೋಟಿ ರೂಪಾಯಿ ವೆಚ್ಚವಾಗಲಿದೆ ಮತ್ತು 28 ನಿಲ್ದಾಣಗಳನ್ನು ಹೊಂದಿರುತ್ತದೆ ಎಂದು ಬಹು ಮೆಟ್ರೋ ಮೂಲಗಳು ತಿಳಿಸಿವೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ರ ಬಜೆಟ್ ಭಾಷಣದಲ್ಲಿ ಈ ಮಾರ್ಗದ ಬಗ್ಗೆ ಘೋಷಣೆ ಮಾಡಿದ್ದು, ಡಿಪಿಆರ್ ಸಲ್ಲಿಸಲು ಎಂಟು ತಿಂಗಳ ಗಡುವನ್ನು ನಿಗದಿಪಡಿಸಿದ್ದರು. ಆಗ ಯೋಜನಾ ವೆಚ್ಚವನ್ನು 16,000 ಕೋಟಿ ರೂ. ಎಂದು ನಮೂದಿಸಲಾಗಿಯತ್ತು., ಆದರೆ ನಂತರ ಅದು ಹೆಚ್ಚಾಗಿದೆ.

ಈ ಯೋಜನೆಯು ಕೋರಮಂಗಲ ಎರಡನೇ ಬ್ಲಾಕ್‌ನಿಂದ ಪಶುವೈದ್ಯಕೀಯ ಕಾಲೇಜುವರೆಗಿನ 14.4-ಕಿಮೀ ಸುರಂಗ ಮಾರ್ಗದಲ್ಲಿ 11 ನಿಲ್ದಾಣಗಳನ್ನು ಹೊಂದಿರಲಿದೆ ಎಂದು ಮೂಲವೊಂದು ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್​’ ವರದಿ ತಿಳಿಸಿದೆ. ಇದು 22.1 ಕಿಮೀ ಕಾರಿಡಾರ್‌ನಲ್ಲಿ (ಸುರಂಗ ಮಾರ್ಗ ಹೊರತುಪಡಿಸಿ) 17 ನಿಲ್ದಾಣಗಳನ್ನು ಹೊಂದಿರಲಿದೆ. ಇದು ಸರ್ಜಾಪುರದಿಂದ ಕೋರಮಂಗಲ ಎರಡನೇ ಬ್ಲಾಕ್‌ಗೆ ವಿಸ್ತರಿಸಿರಲಿದ್ದು, ಪಶುವೈದ್ಯಕೀಯ ಕಾಲೇಜಿನಿಂದ ಹೆಬ್ಬಾಳದವರೆಗೆ ಸುರಂಗ ಮಾರ್ದಲ್ಲಿ ಮುಂದುವರಿಯಲಿದೆ.

ಲಕ್ಷಾಂತರ ಪ್ರಿಯಾಣಿಕರಿಗೆ ಅನುಕೂಲ

ಅಧ್ಯಯನ ವರದಿಯೊಂದರ ಪ್ರಕಾರ, ಈ ಮಾರ್ಗವು 2031 ರಲ್ಲಿ 6.21 ಲಕ್ಷ ದೈನಂದಿನ ಪ್ರಯಾಣಿಕರನ್ನು ಹೊಂದಲಿದೆ ಎಂದು ನಿರೀಕ್ಷಿಸಲಾಗಿದೆ. 2041 ರಲ್ಲಿ 7.2 ಲಕ್ಷ; 2051 ರಲ್ಲಿ 8.51 ಲಕ್ಷ ಮತ್ತು 2061 ರ ವೇಳೆಗೆ 9.5 ಲಕ್ಷ ದೈನಂದಿನ ಪ್ರಯಾಣಿಕರನ್ನು ಹೊಂದಲಿದೆ ಎಂದು ಭಾವಿಸಲಾಗಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹೊಸ ತಂತ್ರಜ್ಞಾನ ಬಳಕೆ; ಬಾಕ್ಸ್ ಆಕಾರದಲ್ಲಿ ಕಾಮಗಾರಿ

5,400 ಮರಗಳಿಗೆ ಕುತ್ತು

ನಮ್ಮ ಮೆಟ್ರೋ ಮೂರನೇ ಹಂತದ 3ಎ ಲೈನ್‌ನ ಕಾಮಗಾರಿಗಾಗಿ ಒಟ್ಟು 5,400 ಮರಗಳಿಗೆ ಕುತ್ತು ಬರಲಿದೆ. ಅವುಗಳಲ್ಲಿ ಅರ್ಧದಷ್ಟನ್ನು ಬೇರೆಡೆಗೆ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ. ಉಳಿದವುಗಳನ್ನು ಕಡಿಯಲಾಗುವುದು ಎಂದು ಮೂಲಗಳು ತಿಳಿಸಿವೆ. ಮೆಟ್ರೊದ 3ಎ ಮಾರ್ಗವು ಎಂಟು ಇಂಟರ್‌ಚೇಂಜ್‌ಗಳನ್ನು ಹೊಂದಿರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ