AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಮೊದಲ ಅಂತಾರಾಜ್ಯ ಮೆಟ್ರೋ ಸಂಪರ್ಕಕ್ಕೆ ಕೊಕ್: ಹೊಸೂರು ಮೆಟ್ರೋ ಯೋಜನೆ ಕೈಬಿಟ್ಟ ಬಿಎಂಆರ್​ಸಿಎಲ್

ಬೆಂಗಳೂರಿನ ಬೊಮ್ಮಸಂದ್ರದಿಂದ ತಮಿಳುನಾಡಿನ ಹೊಸೂರಿಗೆ ಮೆಟ್ರೋ ಸಂಪರ್ಕ ನೀಡುವ ವಿಚಾರಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ತಾಂತ್ರಿಕ ಸಮಸ್ಯೆಯ ಕಾರಣ ತಮಿಳುನಾಡಿಗೆ ಸಂಪರ್ಕಿಸುವ ಮೆಟ್ರೋ ಸಂಪರ್ಕ ಯೋಜನೆಯನ್ನು ಬಿಎಂಆರ್​ಸಿಎಲ್ ಕೈಬಿಟ್ಟಿದೆ. ಇದರೊಂದಿಗೆ, ದೇಶದ ಮೊದಲ ಅಂತಾರಾಜ್ಯ ಮೆಟ್ರೋ ಸಂಪರ್ಕ ಯೋಜನೆ ಸಾಕಾರಗೊಳ್ಳುವುದಿಲ್ಲ ಎಂಬುದು ದೃಢಪಟ್ಟಿದೆ.

ದೇಶದ ಮೊದಲ ಅಂತಾರಾಜ್ಯ ಮೆಟ್ರೋ ಸಂಪರ್ಕಕ್ಕೆ ಕೊಕ್: ಹೊಸೂರು ಮೆಟ್ರೋ ಯೋಜನೆ ಕೈಬಿಟ್ಟ ಬಿಎಂಆರ್​ಸಿಎಲ್
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
ಕಿರಣ್​ ಸೂರ್ಯ
| Edited By: |

Updated on: Oct 23, 2025 | 5:32 PM

Share

ಬೆಂಗಳೂರು, ಅಕ್ಟೋಬರ್ 23: ಬೆಂಗಳೂರಿನಿಂದ ತಮಿಳುನಾಡಿನ ಹೊಸೂರನ್ನು (Hosur) ಸಂಪರ್ಕಿಸಲು ಉದ್ದೇಶಿಸಿದ್ದ ಮೆಟ್ರೋ (Namma Metro) ಮಾರ್ಗಕ್ಕೆ ಬಿಎಂಆರ್​ಸಿಎಲ್ (BMRCL) ಕೊಕ್ ನೀಡಿದೆ. ಆರಂಭದಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಅನೇಕರು ಈ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಸದ್ಯ ತಾಂತ್ರಿಕ ಸಮಸ್ಯೆ ಕಾರಣ ಬಿಎಂಆರ್​ಸಿಎಲ್ ಯೋಜನೆ ರದ್ದುಗೊಳಿಸುವ ನಿರ್ಧಾರಕ್ಕೆ ಬಂದಿದ್ದು, ರಾಜ್ಯ ಸರ್ಕಾರಕ್ಕೂ ಈ ಬಗ್ಗೆ ವರದಿ ನೀಡಿದೆ. ಬೆಂಗಳೂರು ಮೆಟ್ರೋವನ್ನು 470 ಕಿ.ಮೀ.ಗೆ ವಿಸ್ತರಿಸಲು ಯೋಜನೆ ಹಾಕಿಕೊಳ್ಳುವಂತೆ ಕೇಂದ್ರ ಸರ್ಕಾರ ಬಿಎಂಆರ್​ಸಿಎಲ್​ಗೆ ಮನವಿ ಮಾಡಿತ್ತು. ಹಾಗಾಗಿ ಬಿಎಂಆರ್​ಸಿಎಲ್ ಈ ಯೋಜನೆ ಬಗ್ಗೆ ಅಧ್ಯಯವನ್ನು ನಡೆಸಿತ್ತು. 23 ಕಿ.ಮೀ. ಹೊಸೂರು-ಬೊಮ್ಮಸಂದ್ರ ಕಾರಿಡಾರ್​​ಗೆ ವಿದ್ಯುತ್​​ ಶಕ್ತಿಯನ್ನು ಬಳಸಿಕೊಳ್ಳಬಹುದು. ಆದರೆ ನಮ್ಮ ಮೆಟ್ರೋಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಬಿಎಂಆರ್‌ಸಿಎಲ್ ಕರ್ನಾಟಕ ಸರ್ಕಾರಕ್ಕೆ ತಿಳಿಸಿದೆ.

ಬೆಂಗಳೂರು – ಹೊಸೂರು ಮಾರ್ಗವು ಆರ್.ವಿ ರೋಡ್ ಬೊಮ್ಮಸಂದ್ರ ಯೆಲ್ಲೋ ಮಾರ್ಗದ ವಿಸ್ತರಿತ ಮಾರ್ಗವಾಗಿದೆ. ಚೆನ್ನೈ ಮೆಟ್ರೋಗೂ, ನಮ್ಮ ಮೆಟ್ರೋ ಮಾರ್ಗಕ್ಕೂ ಸಾಕಷ್ಟು ವ್ಯತ್ಯಾಸ ಇರುವ ಕಾರಣ ತಮಿಳುನಾಡಿನ ಹೊಸೂರು ಮಾರ್ಗಕ್ಕೆ ತಾಂತ್ರಿಕವಾಗಿ ಹೊಂದಾಣಿಕೆ ಸಾದ್ಯವಿಲ್ಲ. ಹೀಗಾಗಿ ಇದನ್ನು ಜಾರಿ ಮಾಡುವುದು ಕಷ್ಟ ಸಾಧ್ಯ ಎಂಬುದಾಗಿ ಬಿಎಂಆರ್‌ಸಿಎಲ್ ರಾಜ್ಯ ಸರ್ಕಾರಕ್ಕೆ ವರದಿ ಕೊಟ್ಟಿದೆ‌‌.

ನಮ್ಮ ಮೆಟ್ರೋ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿರಬೇಕು. ಆವಾಗಲೇ ಚೆನ್ನಾಗಿ ಇರುತ್ತದೆ. ಇದರಿಂದ ಹೊಸೂರು ಅಭಿವೃದ್ಧಿಯೂ ಆಗುತ್ತದೆ. ಈಗಾಗಲೇ ಹೊಸೂರಿನಲ್ಲಿ ಏರ್ಪೋರ್ಟ್ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ನಮ್ಮ ಬೆಂಗಳೂರಿನ ಅಭಿವೃದ್ಧಿ ಕುಂಠಿತವಾಗುತ್ತದೆ. ಇಲ್ಲಿಂದ ದುಡಿಮೆ ಮಾಡಿಕೊಂಡು ಹೋಗಿ ಅವರ ರಾಜ್ಯ ಉದ್ದಾರ ಮಾಡುತ್ತಾರೆ. ನೀರಿನ ವಿಚಾರಕ್ಕೆ ಎಷ್ಟೊಂದು ಗಲಾಟೆ ಮಾಡುತ್ತಾರೆ, ಅವರಿಗೆ ನಾವು ಮೆಟ್ರೋ ಕೊಡಬೇಕಾ ಎಂದು ಕರ್ನಾಟಕದ ಪ್ರಯಾಣಿಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬೊಮ್ಮಸಂದ್ರ ಹೊಸೂರು ಮೆಟ್ರೋ ಯೋಜನೆಗೆ ಕರ್ನಾಟಕ ವಿರೋಧ ಸಾಧ್ಯತೆ: ಕಾರಣ ಇಲ್ಲಿದೆ

ಒಟ್ಟಿನಲ್ಲಿ, ಮೊದಲು ಕನ್ನಡಪರ ಸಂಘಟನೆಗಳ ಭಾರಿ ವಿರೋಧಕ್ಕೆ ಗುರಿಯಾಗಿ, ಇದೀಗ ತಾಂತ್ರಿಕ ಸಮಸ್ಯೆಯ ಹೊಸೂರು ಮೆಟ್ರೋ ಮಾರ್ಗ ಯೋಜನೆಯನ್ನು ಬಿಎಂಆರ್‌ಸಿಎಲ್ ಕೈ ಬಿಟ್ಟಿದೆ. ಚೆನ್ನೈ ಮೆಟ್ರೋ ನಿಗಮ ಮತ್ತೆ ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ