AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro ಪಿಲ್ಲರ್​ಗಳ ಗುಣಮಟ್ಟ ಪರೀಕ್ಷಿಸುವಂತೆ BMRCL ನೌಕರರ ಸಂಘದಿಂದ ಸಿಎಂ ಬೊಮ್ಮಾಯಿಗೆ ಪತ್ರ

ನಿರ್ಮಾಣವಾಗಿರುವ ಮೊದಲ ಹಾಗೂ ಎರಡನೆಯ ಹಂತದ ಮೆಟ್ರೋ ಪಿಲ್ಲರ್​ಗಳ ಗುಣಮಟ್ಟ ಪರಿಶೀಲನೆ ಮಾಡಬೇಕು. ಈ ಪರಿಶೀಲನೆಗೆ ಐಐಟಿ ಅಥವಾ IISc ತಂಡವನ್ನು ನೇಮಿಸಬೇಕು ಎಂದು ನೌಕರರ ಸಂಘದ ಸೂರ್ಯ ನಾರಾಯಣ ಮೂರ್ತಿ ಸಿಎಂ ಬೊಮ್ಮಾಯಿ ಅವರಿಗೆ ವಿಸ್ತೃತ ಪತ್ರ ಬರೆದಿದ್ದಾರೆ.

Namma Metro ಪಿಲ್ಲರ್​ಗಳ ಗುಣಮಟ್ಟ ಪರೀಕ್ಷಿಸುವಂತೆ BMRCL ನೌಕರರ ಸಂಘದಿಂದ ಸಿಎಂ ಬೊಮ್ಮಾಯಿಗೆ ಪತ್ರ
ಬೆಂಗಳೂರು ನಮ್ಮ ಮೆಟ್ರೋ
TV9 Web
| Edited By: |

Updated on:Feb 08, 2023 | 3:03 PM

Share

ಬೆಂಗಳೂರು: ಕಳೆದ ತಿಂಗಳು ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​ ಕುಸಿದು ತಾಯಿ ಮತ್ತು ಮಗು ಸಾವನ್ನಪಿಸಿದ್ದರು. ನಮ್ಮ ಮೆಟ್ರೋ (Namma Metro) ಕಾಮಗಾರಿಗಳ ಗುಣಮಟ್ಟ ಪರೀಕ್ಷೆ ಮಾಡಿಸುವಂತೆ BMRCL ನೌಕರರ ಸಂಘ (BMRCL Employees Union)  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆದಿದೆ. ಈಗಾಗಲೆ ನಿರ್ಮಾಣವಾಗಿರುವ ಮೊದಲ ಹಾಗೂ ಎರಡನೆಯ ಹಂತದ ಮೆಟ್ರೋ ಪಿಲ್ಲರ್​ಗಳ ಗುಣಮಟ್ಟ ಪರಿಶೀಲನೆ ಮಾಡಬೇಕು. ಈ ಪರಿಶೀಲನೆಗೆ ಐಐಟಿ ಅಥವಾ IISc ತಂಡವನ್ನು ನೇಮಿಸಬೇಕು ಎಂದು ನೌಕರರ ಸಂಘದ ಸೂರ್ಯ ನಾರಾಯಣ ಮೂರ್ತಿ ಸಿಎಂ ಬೊಮ್ಮಾಯಿ ಅವರಿಗೆ ವಿಸ್ತೃತ ಪತ್ರ ಬರೆದಿದ್ದಾರೆ.

ಹಾಗೆ ಬಿಎಂಆರ್​ಸಿಎಲ್​ನ ಆಡಳಿತ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ, 20 ಜನರು ಭ್ರಷ್ಟ ಅಧಿಕಾರಿಗಳಿಂದ ಮೆಟ್ರೋ ಕಾಮಗಾರಿಗೆ ತೊಂದರೆಯಾಗುತ್ತಿದ್ದು, ಇದರಿಂದ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ. ಎಂಜಿ ರಸ್ತೆಯಿಂದ ಬೈಯಪನಹಳ್ಳಿ ಮತ್ತು ಮೈಸೂರು ರಸ್ತೆಯಿಂದ ಕೆಂಗೇರಿ ನಡುವಿನ ಮೆಟ್ರೋ ಪಿಲ್ಲರ್‌ಗಳ ಸಾಮರ್ಥ್ಯ ಮತ್ತು ಗುಣಮಟ್ಟವನ್ನು ಪರಿಶೀಲಿಸಬೇಕಾಗಿದೆ. ಮೆಟ್ರೋ ಪಿಲ್ಲರ್‌ಗಳ ಸುರಕ್ಷತೆಯ ಬಗ್ಗೆ ಹಲವಾರು ಸಂದರ್ಭಗಳಲ್ಲಿ BMRCL ಆಡಳಿತಕ್ಕೆ ಪತ್ರ ಬರೆದಿದ್ದೇನೆ. ಕಳಪೆ ಗುಣಮಟ್ಟದ ಕಾಮಗಾರಿ ಬಗ್ಗೆ BMRCL ಆಡಳಿತ ವಿಭಾಗಕ್ಕೆ ಪತ್ರ ಬರೆದರೂ, ಇಂಜಿನಿಯರ್‌ಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೆಟ್ರೋದಲ್ಲಿ ತಪ್ಪಿದ ದೊಡ್ಡ ಅನಾಹುತ, ರಹಸ್ಯವಾಗಿ ಹಳಿ ಬಿರುಕನ್ನು ದುರಸ್ಥಿಗೊಳಿಸಿದ BMRCL

ರಾಜಧಾನಿ ಜನರ ವೇಗದ ಸಂಪರ್ಕ ಸಾಧನ ನಮ್ಮ ಮೆಟ್ರೋದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಸ್ವಲ್ಪ ಯಾಮಾರಿದ್ದರೂ ದೊಡ್ಡ ಅನಾಹುತ ಆಗುತ್ತಿತ್ತು. ನಾಯಂಡಹಳ್ಳಿಯಿಂದ ಕೆಂಗೇರಿಗೆ ಹೋಗುವ ನೇರಳೆ ಬಣ್ಣದ ಮೆಟ್ರೋ ಮಾರ್ಗದ, ಪಟ್ಟಣಗೆರೆ ನಿಲ್ದಾಣದ ಕೂಗಳತೆ ದೂರದ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಳಿ ಬಿರುಕು ಕಾಣಿಸಿಕೊಂಡಿದ್ದನ್ನು ರೈಲು ಚಾಲಕ ಮತ್ತು ಕೆಳಮಟ್ಟದ ಸಿಬ್ಬಂದಿ ಗಮನಿಸಿದ್ದಾರೆ. ರೈಲು ಪ್ರಯಾಣದ ವೇಳೆ ಕೇಳಿ ಬರುವ ಶಬ್ದದಲ್ಲಿ ವ್ಯತ್ಯಾಸ ಕೇಳಿಬಂದಿದ್ದರಿಂದ ಮೆಟ್ರೋ ಸ್ಪೀಡ್​ನಲ್ಲಿ ಬದಲಾವಣೆ ಮಾಡಿದಾಗ ವಿಷಯ ಬೆಳಕಿಗೆ ಬಂದಿದೆ. ಕೂಡಲೆ ವಿಷಯವನ್ನು ಬಿಎಂಆರ್​ಸಿಎಲ್​ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇದರಿಂದ ಇಡೀ ದಿನ ಮತ್ತೊಂದು ಟ್ರ್ಯಾಕ್​ನಲ್ಲಿ ಮೆಟ್ರೋ ಓಡಾಟ ನಡೆಸಿದೆ. ಬಳಿಕ ಮೆಟ್ರೋ ಟೀಮ್ ಕೂಡಲೇ ಎಚ್ಚೆತ್ತು ದುರಸ್ಥಿ ಮಾಡಿದ್ದಾರೆ. ಟ್ರ್ಯಾಕ್ ಸರಿಪಡಿಸಿದ ನಂತರ ಎರಡು ಹಳಿಯಲ್ಲಿ‌ ಎಂದಿನಂತೆ ಮೆಟ್ರೋ ಓಡಾಟ ಶುರು ಮಾಡಿಕೊಂಡಿದೆ.

ಪಿಲ್ಲರ್ ಕುಸಿತ ಪ್ರಕರಣದಲ್ಲಿ ಶಿಕ್ಷೆ ಕೊಡಬೇಕಾದವರಿಗೆ ಶಿಕ್ಷೆ ಆಗಿಲ್ಲ

BMRCL ನಲ್ಲಿ ಕ್ವಾಲಿಟಿ ವರ್ಕ್,ಕ್ವಾಲಿಟಿ ಚೆಕಿಂಗ್ ಇಲ್ಲ. IIS ತಜ್ಞರನ್ನು ಬಳಸಿ ಚೆಕ್ ಮಾಡಿದರೇ ಒಂದು ಧೈರ್ಯ ಬರುತ್ತೆ. ಟ್ರಿನಿಟಿ ಟು ಬೈಯಪ್ಪನಹಳ್ಳಿಯಲ್ಲಿ 12 ಪಿಲ್ಲರ್ ಸಮಸ್ಯೆ ಆಗಿತ್ತು. ಕ್ವಾಲಿಟಿ ಆಫ್ ವರ್ಕ್​​ನ್ನು ನಂಬಲು ಸಾಧ್ಯ ಇಲ್ಲ. ಪಟ್ಟಣಗೆರೆ ಟ್ರಾಕ್ ಜಸ್ಟ್ 6 ತಿಂಗಳಿಗೆ ಕಟ್ ಆಗಿದೆ. ಜನರು BMRCL ಮೇಲೆ ನಂಬಿಕೆ ಕಳೆದು ಕೊಳ್ಳುತ್ತಿದ್ದಾರೆ. ಗುತ್ತಿಗೆದಾರರು ಮಾಡುವ ತಪ್ಪಿಗೆ ಜನ ನರಳುತ್ತಿದ್ದಾರೆ. ಮೊನ್ನೆಯ ಪಿಲ್ಲರ್ ಕುಸಿತ ಪ್ರಕರಣದಲ್ಲಿ ಶಿಕ್ಷೆ ಕೊಡಬೇಕಾದವರಿಗೆ ಶಿಕ್ಷೆ ಆಗಿಲ್ಲ. ಸಣ್ಣ ಪುಟ್ಟ ಅಧಿಕಾರಿಗಳ ಹೆಸರು ಸೇರಿಸಿ ಕ್ರಮ ಜರುಗಿಸಿದ್ದಾರೆ ಎಂದು ಸಿಎಂಗೆ ಪತ್ರ ಬರೆದಿದ್ದ ಸೂರ್ಯನಾರಾಯಣ್ ಮೂರ್ತಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Wed, 8 February 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ